<p><strong>ಪಾವಗಡ:</strong> ತಾಲ್ಲೂಕಿನ ನಾಗಲಮಡಿಕೆ ಉತ್ತರ ಪಿನಾಕಿನಿ ನದಿಗೆ ನಿರ್ಮಿಸಿರುವ ಚೆಕ್ಡ್ಯಾಂ ತುಂಬಿ ಹರಿಯುತ್ತಿರುವುದನ್ನು ಭಾನುವಾರ ಜನರು ವೀಕ್ಷಿಸಿ ಹರ್ಷ ವ್ಯಕ್ತಪಡಿಸಿದರು.</p>.<p>ಅಂದ್ರಿನಿವಾ ಯೋಜನೆಯಡಿ ಆಂಧ್ರದ ಪೆರೂರು ಡ್ಯಾಂಗೆ ಉತ್ತರ ಪಿನಾಕಿನಿ ಮೂಲಕ ಆಂಧ್ರ ಪ್ರದೇಶ ನೀರು ಕೊಂಡೊಯ್ಯುತ್ತಿದೆ. ಜೂನ್-2019ರಲ್ಲಿ ಪ್ರಥಮ ಬಾರಿಗೆ ಚೆಕ್ಡ್ಯಾಂಗೆ ಕೃಷ್ಣಾ ನದಿ ನೀರು ಹರಿಸಲಾಗಿತ್ತು. ನಂತರ ಎರಡನೇ ಬಾರಿಗೆ ಆಂಧ್ರ ಸರ್ಕಾರ ನೀರು ಹರಿಸಿದೆ.</p>.<p>ಚೆಕ್ಡ್ಯಾಂ ತುಂಬಿ ನೀರು ಹರಿಯುತ್ತಿರುವುದನ್ನು ಕಣ್ತುಂಬಿಕೊಳ್ಳಲು ವಿವಿಧೆಡೆಯಿಂದ ಜನರು ಬರುತ್ತಿದ್ದಾರೆ. ಕಳೆದ ಎರಡು ದಿನಗಳಿಂದ ಪ್ರೇಕ್ಷಣೀಯ ಸ್ಥಳವಾಗಿ ಮಾರ್ಪಟ್ಟಿದೆ.</p>.<p>ತಿರುಮಣಿ ಪೊಲೀಸರು ಚೆಕ್ಡ್ಯಾಂ ಬಳಿ ಯಾವುದೇ ಅವಘಡ ಸಂಭವಿಸದಂತೆ ಮುನ್ನೆಚ್ಚರಿಕಾ ಕ್ರಮಕೈಗೊಂಡಿದ್ದಾರೆ.</p>.<p>ಫೆಬ್ರುವರಿ-17ರಂದು ಷಷ್ಠಿ ಪ್ರಯುಕ್ತ ಗ್ರಾಮದ ಸುಬ್ರಹ್ಮಣ್ಯೇಶ್ವರ ಸ್ವಾಮಿ ದೇಗುಲದಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ನಡೆಯಲಿದ್ದು, ಚೆಕ್ಡ್ಯಾಂ ತುಂಬಿ ನದಿ ಹರಿಯುತ್ತಿರುವುದು ಭಕ್ತರು ಅನುಕೂಲವಾಗಲಿದೆ.</p>.<p>ಚೆಕ್ಡ್ಯಾಂ ತುಂಬಿರುವುದರಿಂದ ಬೇಸಿಗೆಯಲ್ಲಿ ನೀರಿನ ಬವಣೆ ಕಡಿಮೆಯಾಗಲಿದೆ. ಪಟ್ಟಣದ ಅಗಸನಕುಂಟೆಗೆ ನಾಗಲಮಡಿಕೆಯಿಂದ ಪೈಪ್ಲೈನ್ ಮೂಲಕ ನೀರು ಪೂರೈಸುತ್ತಿದ್ದು, ಅಂತರ್ಜಲ ಹೆಚ್ಚಿ ಪಟ್ಟಣದ ಕೊಳವೆ ಬಾವಿಗಳಿಗೂ ಅನುಕೂಲವಾಗಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಾವಗಡ:</strong> ತಾಲ್ಲೂಕಿನ ನಾಗಲಮಡಿಕೆ ಉತ್ತರ ಪಿನಾಕಿನಿ ನದಿಗೆ ನಿರ್ಮಿಸಿರುವ ಚೆಕ್ಡ್ಯಾಂ ತುಂಬಿ ಹರಿಯುತ್ತಿರುವುದನ್ನು ಭಾನುವಾರ ಜನರು ವೀಕ್ಷಿಸಿ ಹರ್ಷ ವ್ಯಕ್ತಪಡಿಸಿದರು.</p>.<p>ಅಂದ್ರಿನಿವಾ ಯೋಜನೆಯಡಿ ಆಂಧ್ರದ ಪೆರೂರು ಡ್ಯಾಂಗೆ ಉತ್ತರ ಪಿನಾಕಿನಿ ಮೂಲಕ ಆಂಧ್ರ ಪ್ರದೇಶ ನೀರು ಕೊಂಡೊಯ್ಯುತ್ತಿದೆ. ಜೂನ್-2019ರಲ್ಲಿ ಪ್ರಥಮ ಬಾರಿಗೆ ಚೆಕ್ಡ್ಯಾಂಗೆ ಕೃಷ್ಣಾ ನದಿ ನೀರು ಹರಿಸಲಾಗಿತ್ತು. ನಂತರ ಎರಡನೇ ಬಾರಿಗೆ ಆಂಧ್ರ ಸರ್ಕಾರ ನೀರು ಹರಿಸಿದೆ.</p>.<p>ಚೆಕ್ಡ್ಯಾಂ ತುಂಬಿ ನೀರು ಹರಿಯುತ್ತಿರುವುದನ್ನು ಕಣ್ತುಂಬಿಕೊಳ್ಳಲು ವಿವಿಧೆಡೆಯಿಂದ ಜನರು ಬರುತ್ತಿದ್ದಾರೆ. ಕಳೆದ ಎರಡು ದಿನಗಳಿಂದ ಪ್ರೇಕ್ಷಣೀಯ ಸ್ಥಳವಾಗಿ ಮಾರ್ಪಟ್ಟಿದೆ.</p>.<p>ತಿರುಮಣಿ ಪೊಲೀಸರು ಚೆಕ್ಡ್ಯಾಂ ಬಳಿ ಯಾವುದೇ ಅವಘಡ ಸಂಭವಿಸದಂತೆ ಮುನ್ನೆಚ್ಚರಿಕಾ ಕ್ರಮಕೈಗೊಂಡಿದ್ದಾರೆ.</p>.<p>ಫೆಬ್ರುವರಿ-17ರಂದು ಷಷ್ಠಿ ಪ್ರಯುಕ್ತ ಗ್ರಾಮದ ಸುಬ್ರಹ್ಮಣ್ಯೇಶ್ವರ ಸ್ವಾಮಿ ದೇಗುಲದಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ನಡೆಯಲಿದ್ದು, ಚೆಕ್ಡ್ಯಾಂ ತುಂಬಿ ನದಿ ಹರಿಯುತ್ತಿರುವುದು ಭಕ್ತರು ಅನುಕೂಲವಾಗಲಿದೆ.</p>.<p>ಚೆಕ್ಡ್ಯಾಂ ತುಂಬಿರುವುದರಿಂದ ಬೇಸಿಗೆಯಲ್ಲಿ ನೀರಿನ ಬವಣೆ ಕಡಿಮೆಯಾಗಲಿದೆ. ಪಟ್ಟಣದ ಅಗಸನಕುಂಟೆಗೆ ನಾಗಲಮಡಿಕೆಯಿಂದ ಪೈಪ್ಲೈನ್ ಮೂಲಕ ನೀರು ಪೂರೈಸುತ್ತಿದ್ದು, ಅಂತರ್ಜಲ ಹೆಚ್ಚಿ ಪಟ್ಟಣದ ಕೊಳವೆ ಬಾವಿಗಳಿಗೂ ಅನುಕೂಲವಾಗಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>