<p>ಚೇಳೂರು: ಎಡಗೈ ಸಮುದಾಯದ ದಶಕಗಳ ಬೇಡಿಕೆಯಾದ ಒಳಮೀಸಲಾತಿಯನ್ನು ತಕ್ಷಣವೇ ಜಾರಿಗೊಳಿಸಬೇಕು ಎಂದು ಕದಸಂಸ ಜಿಲ್ಲಾ ಸಂಚಾಲಕ ಕಡ್ಡಿಲು ವೆಂಕಟರವಣಪ್ಪ ಆಗ್ರಹಿಸಿದರು.</p>.<p>ಪಟ್ಟಣದಲ್ಲಿ ಗುರುವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಒಳಮೀಸಲಾತಿ ಜಾರಿಯಾಗದ ಕಾರಣ ಅರ್ಹ ಸಮುದಾಯಗಳಿಗೆ ಅನ್ಯಾಯವಾಗುತ್ತಿದೆ. ಸರ್ಕಾರವು ಈ ಕೂಡಲೇ ನ್ಯಾ. ಎ.ಜೆ. ಸದಾಶಿವ ಆಯೋಗದ ವರದಿ ಜಾರಿಗೊಳಿಸಲು ಮುಂದಾಗಬೇಕು. ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಈ ಬಗ್ಗೆ ನಿರ್ಲಕ್ಷ್ಯವಹಿಸಿದರೆ ಮುಂದಿನ ದಿನಗಳಲ್ಲಿ ತೀವ್ರ ಸ್ವರೂಪದ ಹೋರಾಟ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.</p>.<p>ದಸಂಸ ತಾಲ್ಲೂಕು ಸಂಚಾಲಕ ಜಿ. ನರಸಿಂಹಪ್ಪ ಮಾತನಾಡಿ, ಒಳಮೀಸಲಾತಿ ನಮ್ಮ ಸಾಂವಿಧಾನಿಕ ಹಕ್ಕು. ಇದನ್ನು ಪಡೆಯಲು ಸಿದ್ಧರಿದ್ದೇವೆ. ಸಂಘಟನೆಯು ಈ ಹೋರಾಟವನ್ನು ಪ್ರತಿ ಹಳ್ಳಿಗೂ ಕೊಂಡೊಯ್ಯಲಿದೆ. ಮುಂಬರುವ ದಿನಗಳಲ್ಲಿ ತಾಲ್ಲೂಕು ಕೇಂದ್ರದಲ್ಲಿ ಬೃಹತ್ ಪ್ರತಿಭಟನೆ ನಡೆಸುವ ಮೂಲಕ ಸರ್ಕಾರದ ಮೇಲೆ ಒತ್ತಡ ಹೇರಲಾಗುವುದು ಎಂದರು.</p>.<p>ಮಾದರ ಮಹಾಸಭಾ ತಾಲ್ಲೂಕು ಉಪಾಧ್ಯಕ್ಷ ಊದುವಾರಪಲ್ಲಿ ಬಾಬು, ಒಳಮೀಸಲಾತಿ ಜಾರಿ ಆಗದಿದ್ದರೆ ತಳಮಟ್ಟದ ಕುಟುಂಬಗಳಿಗೆ ಅನ್ಯಾಯವಾಗಲಿದೆ. ಸರ್ಕಾರ ಕೂಡಲೇ ಇದನ್ನು ಜಾರಿಗೆ ತಂದು ಎಲ್ಲ ಉಪಜಾತಿಗಳಿಗೂ ಸಮಾನ ನ್ಯಾಯ ಒದಗಿಸಬೇಕು ಎಂದು ಹೇಳಿದರು.</p>.<p>ಮುಖಂಡರಾದ ಪಿ. ಮಂಜುನಾಥ, ತುಳವಣೂರು ವೆಂಕಟರವಣಪ್ಪ, ಅಜರುದ್ದೀನ್, ರಾಮಚಂದ್ರ, ಪೋಸ್ಟ್ ನರಸಿಂಹ, ದುಗಿನಾಯಕನಹಳ್ಳಿ ನಾಗೇಶ್, ನರಸಿಂಹಪ್ಪ ಮತ್ತಿತರರು ಗೋಷ್ಠಿಯಲ್ಲಿ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260327-16-920641995</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚೇಳೂರು: ಎಡಗೈ ಸಮುದಾಯದ ದಶಕಗಳ ಬೇಡಿಕೆಯಾದ ಒಳಮೀಸಲಾತಿಯನ್ನು ತಕ್ಷಣವೇ ಜಾರಿಗೊಳಿಸಬೇಕು ಎಂದು ಕದಸಂಸ ಜಿಲ್ಲಾ ಸಂಚಾಲಕ ಕಡ್ಡಿಲು ವೆಂಕಟರವಣಪ್ಪ ಆಗ್ರಹಿಸಿದರು.</p>.<p>ಪಟ್ಟಣದಲ್ಲಿ ಗುರುವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಒಳಮೀಸಲಾತಿ ಜಾರಿಯಾಗದ ಕಾರಣ ಅರ್ಹ ಸಮುದಾಯಗಳಿಗೆ ಅನ್ಯಾಯವಾಗುತ್ತಿದೆ. ಸರ್ಕಾರವು ಈ ಕೂಡಲೇ ನ್ಯಾ. ಎ.ಜೆ. ಸದಾಶಿವ ಆಯೋಗದ ವರದಿ ಜಾರಿಗೊಳಿಸಲು ಮುಂದಾಗಬೇಕು. ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಈ ಬಗ್ಗೆ ನಿರ್ಲಕ್ಷ್ಯವಹಿಸಿದರೆ ಮುಂದಿನ ದಿನಗಳಲ್ಲಿ ತೀವ್ರ ಸ್ವರೂಪದ ಹೋರಾಟ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.</p>.<p>ದಸಂಸ ತಾಲ್ಲೂಕು ಸಂಚಾಲಕ ಜಿ. ನರಸಿಂಹಪ್ಪ ಮಾತನಾಡಿ, ಒಳಮೀಸಲಾತಿ ನಮ್ಮ ಸಾಂವಿಧಾನಿಕ ಹಕ್ಕು. ಇದನ್ನು ಪಡೆಯಲು ಸಿದ್ಧರಿದ್ದೇವೆ. ಸಂಘಟನೆಯು ಈ ಹೋರಾಟವನ್ನು ಪ್ರತಿ ಹಳ್ಳಿಗೂ ಕೊಂಡೊಯ್ಯಲಿದೆ. ಮುಂಬರುವ ದಿನಗಳಲ್ಲಿ ತಾಲ್ಲೂಕು ಕೇಂದ್ರದಲ್ಲಿ ಬೃಹತ್ ಪ್ರತಿಭಟನೆ ನಡೆಸುವ ಮೂಲಕ ಸರ್ಕಾರದ ಮೇಲೆ ಒತ್ತಡ ಹೇರಲಾಗುವುದು ಎಂದರು.</p>.<p>ಮಾದರ ಮಹಾಸಭಾ ತಾಲ್ಲೂಕು ಉಪಾಧ್ಯಕ್ಷ ಊದುವಾರಪಲ್ಲಿ ಬಾಬು, ಒಳಮೀಸಲಾತಿ ಜಾರಿ ಆಗದಿದ್ದರೆ ತಳಮಟ್ಟದ ಕುಟುಂಬಗಳಿಗೆ ಅನ್ಯಾಯವಾಗಲಿದೆ. ಸರ್ಕಾರ ಕೂಡಲೇ ಇದನ್ನು ಜಾರಿಗೆ ತಂದು ಎಲ್ಲ ಉಪಜಾತಿಗಳಿಗೂ ಸಮಾನ ನ್ಯಾಯ ಒದಗಿಸಬೇಕು ಎಂದು ಹೇಳಿದರು.</p>.<p>ಮುಖಂಡರಾದ ಪಿ. ಮಂಜುನಾಥ, ತುಳವಣೂರು ವೆಂಕಟರವಣಪ್ಪ, ಅಜರುದ್ದೀನ್, ರಾಮಚಂದ್ರ, ಪೋಸ್ಟ್ ನರಸಿಂಹ, ದುಗಿನಾಯಕನಹಳ್ಳಿ ನಾಗೇಶ್, ನರಸಿಂಹಪ್ಪ ಮತ್ತಿತರರು ಗೋಷ್ಠಿಯಲ್ಲಿ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260327-16-920641995</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>