<p><strong>ಗುಬ್ಬಿ:</strong> ಇತ್ತೀಚಿನ ದಿನಗಳಲ್ಲಿ ರಾಸಾಯನಿಕ ಗೊಬ್ಬರಗಳನ್ನು ಹೆಚ್ಚಾಗಿ ಬಳಸುತ್ತಿರುವುದರಿಂದ ಆಹಾರ ಪದಾರ್ಥಗಳಲ್ಲಿ ಗುಣಮಟ್ಟ ಕಾಪಾಡಿಕೊಳ್ಳಲು ಸಾಧ್ಯವಾಗದಿರುವುದು ದುರಾದೃಷ್ಟಕರ ಎಂದು ಶಾಸಕ ಎಸ್.ಆರ್. ಶ್ರೀನಿವಾಸ್ ತಿಳಿಸಿದರು.</p>.<p>ಚೇಳೂರಿನಲ್ಲಿ ನಡೆದ ಪೋಷಣ್ ಅಭಿಯಾನದಲ್ಲಿ ಮಾತನಾಡಿದರು.</p>.<p>ಗರ್ಭಿಣಿಯರು ಮತ್ತು ಬಾಣಂತಿಯರಿಗೆ ಹೆಚ್ಚಿನ ಪೋಷಕಾಂಶ ಅಗತ್ಯವಿದ್ದು, ಸಾವಯವ ಪದ್ಧತಿಯಲ್ಲಿ ಬೆಳೆಯುವ ಹಣ್ಣು ತರಕಾರಿಗಳನ್ನು ಬಳಸುವುದನ್ನು ರೂಢಿಸಿಕೊಳ್ಳಬೇಕು ಎಂದು ಹೇಳಿದರು.</p>.<p>ಈ ಹಿಂದೆ ಕೊಟ್ಟಿಗೆ ಗೊಬ್ಬರ ಬಳಸಿ ಆಹಾರ ಪದಾರ್ಥಗಳನ್ನು ಬೆಳೆಯಲಾಗುತ್ತಿತ್ತು. ಆದರೆ ಇತ್ತೀಚಿಗೆ ಇಳುವರಿಗೆ ಆದ್ಯತೆ ನೀಡಿ ಗುಣಮಟ್ಟವನ್ನು ಕಡೆಗಣಿಸಲಾಗುತ್ತಿದೆ ಎಂದು ದೂರಿದರು.</p>.<p>ಮಹಿಳಾ ಮತ್ತು ಸಮಾಜ ಕಲ್ಯಾಣ ಇಲಾಖೆ ಡಿ.ಡಿ. ಸಿದ್ದರಾಮಣ್ಣ ಮಾತನಾಡಿ, ಗರ್ಭಿಣಿಯರು, ತಾಯಂದಿರು ಜಂಕ್ ಫುಡ್ ಆಸೆಗೆ ಆರೋಗ್ಯ ಹಾಳು ಮಾಡಿಕೊಳ್ಳದೆ, ಮನೆಯಲ್ಲಿಯೇ ತಯಾರಿಸುವ ಗುಣಮಟ್ಟದ ಆಹಾರ ಪದಾರ್ಥಗಳನ್ನು ಸೇವಿಸಿ ಆರೋಗ್ಯ ಕಾಪಾಡಿಕೊಳ್ಳುವತ್ತ ಗಮನ ಹರಿಸಬೇಕು ಎಂದು ಹೇಳಿದರು.</p>.<p>ತಾಲ್ಲೂಕು ಆರೋಗ್ಯಧಿಕಾರಿ ಬಿಂಧು ಮಾಧವ್ ಮಾತನಾಡಿ, ಹಣದಿಂದ ಆರೋಗ್ಯ ಕೊಂಡುಕೊಳ್ಳಲು ಸಾಧ್ಯವಿಲ್ಲದಿರುವುದರಿಂದ ಗುಣಮಟ್ಟದ ಆಹಾರ ಸೇವನೆಯಿಂದ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಂಡು ಅನೇಕ ರೋಗಗಳ ತಡೆಗಟ್ಟಲು ಸಾಧ್ಯ ಎಂದರು.</p>.<p>ಗರ್ಭಿಣಿಯರಿಗೆ ಸೀಮಂತ, ಮಕ್ಕಳಿಗೆ ಅನ್ನಪ್ರಾಶನ ನಡೆಯಿತು. ಸಿಡಿಪಿಒ ಕೃಷ್ಣಮೂರ್ತಿ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜಯಮ್ಮ, ಜಿಲ್ಲಾ ನಿರೂಪಣಾಧಿಕಾರಿ ಅಂಬಿಕಾ, ವೃತ್ತದ ಮೇಲ್ವಿಚಾರಕ್ಕೆ ನೇತ್ರಾವತಿ, ಚೇಳೂರು ಶಿವನಂಜಯ್ಯ, ರಂಗ ರಾಮಯ್ಯ, ಅಂಗನವಾಡಿ ಕಾರ್ಯಕರ್ತರು, ಮಕ್ಕಳು, ಪೋಷಕರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಬ್ಬಿ:</strong> ಇತ್ತೀಚಿನ ದಿನಗಳಲ್ಲಿ ರಾಸಾಯನಿಕ ಗೊಬ್ಬರಗಳನ್ನು ಹೆಚ್ಚಾಗಿ ಬಳಸುತ್ತಿರುವುದರಿಂದ ಆಹಾರ ಪದಾರ್ಥಗಳಲ್ಲಿ ಗುಣಮಟ್ಟ ಕಾಪಾಡಿಕೊಳ್ಳಲು ಸಾಧ್ಯವಾಗದಿರುವುದು ದುರಾದೃಷ್ಟಕರ ಎಂದು ಶಾಸಕ ಎಸ್.ಆರ್. ಶ್ರೀನಿವಾಸ್ ತಿಳಿಸಿದರು.</p>.<p>ಚೇಳೂರಿನಲ್ಲಿ ನಡೆದ ಪೋಷಣ್ ಅಭಿಯಾನದಲ್ಲಿ ಮಾತನಾಡಿದರು.</p>.<p>ಗರ್ಭಿಣಿಯರು ಮತ್ತು ಬಾಣಂತಿಯರಿಗೆ ಹೆಚ್ಚಿನ ಪೋಷಕಾಂಶ ಅಗತ್ಯವಿದ್ದು, ಸಾವಯವ ಪದ್ಧತಿಯಲ್ಲಿ ಬೆಳೆಯುವ ಹಣ್ಣು ತರಕಾರಿಗಳನ್ನು ಬಳಸುವುದನ್ನು ರೂಢಿಸಿಕೊಳ್ಳಬೇಕು ಎಂದು ಹೇಳಿದರು.</p>.<p>ಈ ಹಿಂದೆ ಕೊಟ್ಟಿಗೆ ಗೊಬ್ಬರ ಬಳಸಿ ಆಹಾರ ಪದಾರ್ಥಗಳನ್ನು ಬೆಳೆಯಲಾಗುತ್ತಿತ್ತು. ಆದರೆ ಇತ್ತೀಚಿಗೆ ಇಳುವರಿಗೆ ಆದ್ಯತೆ ನೀಡಿ ಗುಣಮಟ್ಟವನ್ನು ಕಡೆಗಣಿಸಲಾಗುತ್ತಿದೆ ಎಂದು ದೂರಿದರು.</p>.<p>ಮಹಿಳಾ ಮತ್ತು ಸಮಾಜ ಕಲ್ಯಾಣ ಇಲಾಖೆ ಡಿ.ಡಿ. ಸಿದ್ದರಾಮಣ್ಣ ಮಾತನಾಡಿ, ಗರ್ಭಿಣಿಯರು, ತಾಯಂದಿರು ಜಂಕ್ ಫುಡ್ ಆಸೆಗೆ ಆರೋಗ್ಯ ಹಾಳು ಮಾಡಿಕೊಳ್ಳದೆ, ಮನೆಯಲ್ಲಿಯೇ ತಯಾರಿಸುವ ಗುಣಮಟ್ಟದ ಆಹಾರ ಪದಾರ್ಥಗಳನ್ನು ಸೇವಿಸಿ ಆರೋಗ್ಯ ಕಾಪಾಡಿಕೊಳ್ಳುವತ್ತ ಗಮನ ಹರಿಸಬೇಕು ಎಂದು ಹೇಳಿದರು.</p>.<p>ತಾಲ್ಲೂಕು ಆರೋಗ್ಯಧಿಕಾರಿ ಬಿಂಧು ಮಾಧವ್ ಮಾತನಾಡಿ, ಹಣದಿಂದ ಆರೋಗ್ಯ ಕೊಂಡುಕೊಳ್ಳಲು ಸಾಧ್ಯವಿಲ್ಲದಿರುವುದರಿಂದ ಗುಣಮಟ್ಟದ ಆಹಾರ ಸೇವನೆಯಿಂದ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಂಡು ಅನೇಕ ರೋಗಗಳ ತಡೆಗಟ್ಟಲು ಸಾಧ್ಯ ಎಂದರು.</p>.<p>ಗರ್ಭಿಣಿಯರಿಗೆ ಸೀಮಂತ, ಮಕ್ಕಳಿಗೆ ಅನ್ನಪ್ರಾಶನ ನಡೆಯಿತು. ಸಿಡಿಪಿಒ ಕೃಷ್ಣಮೂರ್ತಿ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜಯಮ್ಮ, ಜಿಲ್ಲಾ ನಿರೂಪಣಾಧಿಕಾರಿ ಅಂಬಿಕಾ, ವೃತ್ತದ ಮೇಲ್ವಿಚಾರಕ್ಕೆ ನೇತ್ರಾವತಿ, ಚೇಳೂರು ಶಿವನಂಜಯ್ಯ, ರಂಗ ರಾಮಯ್ಯ, ಅಂಗನವಾಡಿ ಕಾರ್ಯಕರ್ತರು, ಮಕ್ಕಳು, ಪೋಷಕರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>