ಗೊಟ್ಟಿಗೆರೆ ಕೆರೆ 13 ಎಕರೆ ಪ್ರದೇಶದಲ್ಲಿದ್ದು, ಪ್ರಭಾವಿಗಳಿಂದ ಒತ್ತುವರಿಯಾಗಿದೆ. ಸಮೀಪದ ಕೈಗಾರಿಕಾ ವಲಯದ ಬಳಿಯ ರಾಜಕಾಲುವೆ ಮುಚ್ಚಿರುವುದರಿಂದ, ಕೈಗಾರಿಕೆಗಳ ರಾಸಾಯನಿಕ ತ್ಯಾಜ್ಯ ಕೆರೆಗೆ ಹರಿಯುತ್ತಿದೆ. ಕೆರೆಗೆ ಹೊಂದಿಕೊಂಡಿರುವ ಜಮೀನಿನಲ್ಲಿ ಬೆಳೆದಿರುವ ಬೆಳೆಗಳು ನಾಶವಾಗಿವೆ ಎಂದು ಗ್ರಾಮಸ್ಥರಾದ ಮಹೇಶ್, ಚಂದ್ರು, ಧನಂಜಯ್ಯ ಆರೋಪಿಸಿದ್ದಾರೆ.