<p>ಚಿಕ್ಕನಾಯಕನಹಳ್ಳಿ: ತಾಲ್ಲೂಕಿನ ಶೆಟ್ಟೀಕೆರೆಯಲ್ಲಿ ಭಾನುವಾರ ₹5.30 ಕೋಟಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಸಿ.ಬಿ. ಸುರೇಶ್ಬಾಬು ಭೂಮಿಪೂಜೆ ನೆರವೇರಿಸಿದರು.</p>.<p>ನಂತರ ಮಾತನಾಡಿದ ಅವರು, ರಾಜ್ಯ ಸರ್ಕಾರ ಅನುದಾನ ಹಂಚಿಕೆಯಲ್ಲಿ ರಾಜಕೀಯ ತಾರತಮ್ಯ ಮಾಡುತ್ತಿದೆ. ಆಡಳಿತ ಪಕ್ಷದ ಶಾಸಕರಿಗೆ ₹50 ಕೋಟಿ ಅನುದಾನ ನೀಡಿದರೆ, ವಿರೋಧ ಪಕ್ಷದ ಶಾಸಕರಿಗೆ ಕೇವಲ ₹25 ಕೋಟಿ ನೀಡಲಾಗುತ್ತಿದೆ. ಇಂತಹ ಮಿತಿಯ ಅನುದಾನದಲ್ಲೂ ಈ ರಸ್ತೆ ಅಭಿವೃದ್ಧಿಗೆ ₹5.30 ಕೋಟಿ ಮೀಸಲಿಡಲಾಗಿದೆ. ಇದರೊಂದಿಗೆ ಗಣಿ ಬಾಧಿತ ಪ್ರದೇಶಾಭಿವೃದ್ಧಿ ನಿಧಿಯನ್ನೂ ಬಳಸಿಕೊಂಡು ಈ ರಸ್ತೆಯನ್ನು ಸುಸಜ್ಜಿತಗೊಳಿಸಲಾಗುವುದು ಎಂದರು.</p>.<p>ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ತಿಮ್ಮಯ್ಯ ಮಾತನಾಡಿದರು. ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಎಚ್.ಆರ್. ಶಶಿಧರ್ ಹಾಗೂ ಮಹೇಶ್, ದಯಾನಂದ್, ಚಂದ್ರಕಾಂತ್, ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಬೈರೇಶ್, ಎಸ್.ಎಂ. ಪ್ರಕಾಶ್, ಸಿದ್ದರಾಮಯ್ಯ, ಗ್ರಾಮಸ್ಥರು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260323-17-1803094812</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಕ್ಕನಾಯಕನಹಳ್ಳಿ: ತಾಲ್ಲೂಕಿನ ಶೆಟ್ಟೀಕೆರೆಯಲ್ಲಿ ಭಾನುವಾರ ₹5.30 ಕೋಟಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಸಿ.ಬಿ. ಸುರೇಶ್ಬಾಬು ಭೂಮಿಪೂಜೆ ನೆರವೇರಿಸಿದರು.</p>.<p>ನಂತರ ಮಾತನಾಡಿದ ಅವರು, ರಾಜ್ಯ ಸರ್ಕಾರ ಅನುದಾನ ಹಂಚಿಕೆಯಲ್ಲಿ ರಾಜಕೀಯ ತಾರತಮ್ಯ ಮಾಡುತ್ತಿದೆ. ಆಡಳಿತ ಪಕ್ಷದ ಶಾಸಕರಿಗೆ ₹50 ಕೋಟಿ ಅನುದಾನ ನೀಡಿದರೆ, ವಿರೋಧ ಪಕ್ಷದ ಶಾಸಕರಿಗೆ ಕೇವಲ ₹25 ಕೋಟಿ ನೀಡಲಾಗುತ್ತಿದೆ. ಇಂತಹ ಮಿತಿಯ ಅನುದಾನದಲ್ಲೂ ಈ ರಸ್ತೆ ಅಭಿವೃದ್ಧಿಗೆ ₹5.30 ಕೋಟಿ ಮೀಸಲಿಡಲಾಗಿದೆ. ಇದರೊಂದಿಗೆ ಗಣಿ ಬಾಧಿತ ಪ್ರದೇಶಾಭಿವೃದ್ಧಿ ನಿಧಿಯನ್ನೂ ಬಳಸಿಕೊಂಡು ಈ ರಸ್ತೆಯನ್ನು ಸುಸಜ್ಜಿತಗೊಳಿಸಲಾಗುವುದು ಎಂದರು.</p>.<p>ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ತಿಮ್ಮಯ್ಯ ಮಾತನಾಡಿದರು. ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಎಚ್.ಆರ್. ಶಶಿಧರ್ ಹಾಗೂ ಮಹೇಶ್, ದಯಾನಂದ್, ಚಂದ್ರಕಾಂತ್, ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಬೈರೇಶ್, ಎಸ್.ಎಂ. ಪ್ರಕಾಶ್, ಸಿದ್ದರಾಮಯ್ಯ, ಗ್ರಾಮಸ್ಥರು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260323-17-1803094812</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>