<p><strong>ಚಿಕ್ಕನಾಯಕನಹಳ್ಳಿ:</strong> ಪಟ್ಟಣದಲ್ಲಿ ಬುಧವಾರ ‘ಸರ್ವ ದಾರ್ಶನಿಕರ ಜಯಂತ್ಯುತ್ಸವ’ ನಡೆಯಿತು.</p>.<p>ತಾಲ್ಲೂಕು ಕಚೇರಿ ಮುಂಭಾಗ ಮಹಾತ್ಮ ಗಾಂಧೀಜಿ ಮತ್ತು ಬಿ.ಆರ್. ಅಂಬೇಡ್ಕರ್ ಪುತ್ಥಳಿಯನ್ನು ಕಾಗಿನೆಲೆ ಮಹಾಸಂಸ್ಥಾನ ಮಠದ ಈಶ್ವರಾನಂದಪುರಿ ಸ್ವಾಮೀಜಿ ಅನಾವರಣಗೊಳಿಸಿದರು.</p>.<p>ತಾಲ್ಲೂಕು ಕಚೇರಿ ಮುಂಭಾಗದಿಂದ ಪ್ರಾರಂಭವಾದ ಎಲ್ಲ ಮಹನೀಯರ ಭಾವಚಿತ್ರಗಳ ಮೆರವಣಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ಮೆರವಣಿಗೆಯಲ್ಲಿ ದೇಸಿ ಸಂಸ್ಕೃತಿ ಪ್ರತಿಬಿಂಬಿಸುವ ಕಲಾ ವೈಭವ ಕಳೆಗಟ್ಟಿತ್ತು. ಡೊಳ್ಳು ಕುಣಿತ, ವೀರಗಾಸೆ, ಕೋಲಾಟ ಮತ್ತು ಕಂಸಾಳೆ ನೃತ್ಯಗಳು ನೋಡುಗರನ್ನು ಆಕರ್ಷಿಸಿತು.</p>.<p>ಪಟ್ಟಣದ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ನಡೆದ ಸರ್ವ ದಾರ್ಶನಿಕರ ಜಯಂತ್ಯುತ್ಸವದಲ್ಲಿ ಎಲ್ಲ ಮಹನೀಯರ ತತ್ವಗಳನ್ನು ಒಂದೆಡೆ ಸಂಗ್ರಹಿಸಿ ಸಿದ್ಧಪಡಿಸಲಾದ ವಿಶೇಷ ಗ್ರಂಥವನ್ನು ಬಿಡುಗಡೆ ಮಾಡಲಾಯಿತು. ಈ ಗ್ರಂಥದಲ್ಲಿ ಎಲ್ಲ ದಾರ್ಶನಿಕರ ಪ್ರಮುಖ ಸಂದೇಶ ಮತ್ತು ತತ್ವಗಳನ್ನು ಅಡಕವಾಗಿವೆ. ತಾಲ್ಲೂಕಿನ ಜನರಿಗೆ ಮತ್ತು ಮುಂದಿನ ಪೀಳಿಗೆಗೆ ಸಮಗ್ರ ಜ್ಞಾನ ಒದಗಿಸುವ ಶಾಶ್ವತ ದಾಖಲೆಯಾಗಲಿದೆ.</p>.<p>ತಾಲ್ಲೂಕಿನ ವಿಶಿಷ್ಟತೆಯನ್ನು ಪ್ರತಿಬಿಂಬಿಸುವ ಭೂಪಟದ ಲಾಂಛನವನ್ನು ಬಿಡುಗಡೆ ಮಾಡಲಾಯಿತು.</p>.<p>ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ ಮಾತನಾಡಿ, ಎಲ್ಲರನ್ನೂ ಒಂದೇ ವೇದಿಕೆಯಲ್ಲಿ ಒಗ್ಗೂಡಿಸುವುದು ಸುಲಭವಲ್ಲ. ಆದರೂ ಆ ಸತ್ಕಾರ್ಯಕ್ಕೆ ಕೈಹಾಕಿರುವುದು ಪವಿತ್ರ ಕೆಲಸ. ಜೀವನವನ್ನು ಪವಿತ್ರಗೊಳಿಸಿಕೊಳ್ಳುವುದಕ್ಕಾಗಿ ದಾರ್ಶನಿಕರನ್ನು ನಿರಂತರವಾಗಿ ನೆನಪಿಸಿಕೊಳ್ಳಬೇಕು ಎಂದು ಹೇಳಿದರು.</p>.<p>ಶಾಸಕ ಕೆ.ಎನ್. ರಾಜಣ್ಣ ಮಾತನಾಡಿ, ಪ್ರತಿ ವರ್ಷ ದಾರ್ಶನಿಕರ ಜಯಂತಿ ಆಚರಿಸುತ್ತೇವೆ. ಆ ಕಾರ್ಯಕ್ರಮದಲ್ಲಿ ಭಾಗವಹಿಸುವವರು ಆ ಸಮಾಜದವರೇ ಆಗಿರುತ್ತಾರೆ. ಅದನ್ನು ತಪ್ಪಿಸಿ ಎಲ್ಲ ದಾರ್ಶನಿಕರ ಜಯಂತಿಯನ್ನು ಒಮ್ಮೆಲೇ ಆಚರಣೆ ಮಾಡುವ ಒಳ್ಳೆಯ ಸಂಪ್ರದಾಯವನ್ನು ಶಾಸಕ ಸಿ.ಬಿ. ಸುರೇಶ್ ಬಾಬು ಪ್ರಾರಂಭ ಮಾಡಿದ್ದಾರೆ ಎಂದರು.</p>.<p>ದಾರ್ಶನಿಕರ 60 ಪುಟಗಳ ಗ್ರಂಥವನ್ನು ಸಾಹಿತಿ ನಾಡೋಜ ಹಂಪನಾಗರಾಜಯ್ಯ ಬಿಡುಗಡೆಗೊಳಿಸಿದರು.</p>.<p>ಕಾರ್ಯಕ್ರಮದಲ್ಲಿ ಸ್ವಾಮೀಜಿಗಳು, ಬಿಎಂಟಿಸಿ ಉಪಾಧ್ಯಕ್ಷರಾದ ನಿಖೇತ್ ರಾಜ್ ಮೌರ್ಯ, ಮುಖಂಡರು ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕನಾಯಕನಹಳ್ಳಿ:</strong> ಪಟ್ಟಣದಲ್ಲಿ ಬುಧವಾರ ‘ಸರ್ವ ದಾರ್ಶನಿಕರ ಜಯಂತ್ಯುತ್ಸವ’ ನಡೆಯಿತು.</p>.<p>ತಾಲ್ಲೂಕು ಕಚೇರಿ ಮುಂಭಾಗ ಮಹಾತ್ಮ ಗಾಂಧೀಜಿ ಮತ್ತು ಬಿ.ಆರ್. ಅಂಬೇಡ್ಕರ್ ಪುತ್ಥಳಿಯನ್ನು ಕಾಗಿನೆಲೆ ಮಹಾಸಂಸ್ಥಾನ ಮಠದ ಈಶ್ವರಾನಂದಪುರಿ ಸ್ವಾಮೀಜಿ ಅನಾವರಣಗೊಳಿಸಿದರು.</p>.<p>ತಾಲ್ಲೂಕು ಕಚೇರಿ ಮುಂಭಾಗದಿಂದ ಪ್ರಾರಂಭವಾದ ಎಲ್ಲ ಮಹನೀಯರ ಭಾವಚಿತ್ರಗಳ ಮೆರವಣಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ಮೆರವಣಿಗೆಯಲ್ಲಿ ದೇಸಿ ಸಂಸ್ಕೃತಿ ಪ್ರತಿಬಿಂಬಿಸುವ ಕಲಾ ವೈಭವ ಕಳೆಗಟ್ಟಿತ್ತು. ಡೊಳ್ಳು ಕುಣಿತ, ವೀರಗಾಸೆ, ಕೋಲಾಟ ಮತ್ತು ಕಂಸಾಳೆ ನೃತ್ಯಗಳು ನೋಡುಗರನ್ನು ಆಕರ್ಷಿಸಿತು.</p>.<p>ಪಟ್ಟಣದ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ನಡೆದ ಸರ್ವ ದಾರ್ಶನಿಕರ ಜಯಂತ್ಯುತ್ಸವದಲ್ಲಿ ಎಲ್ಲ ಮಹನೀಯರ ತತ್ವಗಳನ್ನು ಒಂದೆಡೆ ಸಂಗ್ರಹಿಸಿ ಸಿದ್ಧಪಡಿಸಲಾದ ವಿಶೇಷ ಗ್ರಂಥವನ್ನು ಬಿಡುಗಡೆ ಮಾಡಲಾಯಿತು. ಈ ಗ್ರಂಥದಲ್ಲಿ ಎಲ್ಲ ದಾರ್ಶನಿಕರ ಪ್ರಮುಖ ಸಂದೇಶ ಮತ್ತು ತತ್ವಗಳನ್ನು ಅಡಕವಾಗಿವೆ. ತಾಲ್ಲೂಕಿನ ಜನರಿಗೆ ಮತ್ತು ಮುಂದಿನ ಪೀಳಿಗೆಗೆ ಸಮಗ್ರ ಜ್ಞಾನ ಒದಗಿಸುವ ಶಾಶ್ವತ ದಾಖಲೆಯಾಗಲಿದೆ.</p>.<p>ತಾಲ್ಲೂಕಿನ ವಿಶಿಷ್ಟತೆಯನ್ನು ಪ್ರತಿಬಿಂಬಿಸುವ ಭೂಪಟದ ಲಾಂಛನವನ್ನು ಬಿಡುಗಡೆ ಮಾಡಲಾಯಿತು.</p>.<p>ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ ಮಾತನಾಡಿ, ಎಲ್ಲರನ್ನೂ ಒಂದೇ ವೇದಿಕೆಯಲ್ಲಿ ಒಗ್ಗೂಡಿಸುವುದು ಸುಲಭವಲ್ಲ. ಆದರೂ ಆ ಸತ್ಕಾರ್ಯಕ್ಕೆ ಕೈಹಾಕಿರುವುದು ಪವಿತ್ರ ಕೆಲಸ. ಜೀವನವನ್ನು ಪವಿತ್ರಗೊಳಿಸಿಕೊಳ್ಳುವುದಕ್ಕಾಗಿ ದಾರ್ಶನಿಕರನ್ನು ನಿರಂತರವಾಗಿ ನೆನಪಿಸಿಕೊಳ್ಳಬೇಕು ಎಂದು ಹೇಳಿದರು.</p>.<p>ಶಾಸಕ ಕೆ.ಎನ್. ರಾಜಣ್ಣ ಮಾತನಾಡಿ, ಪ್ರತಿ ವರ್ಷ ದಾರ್ಶನಿಕರ ಜಯಂತಿ ಆಚರಿಸುತ್ತೇವೆ. ಆ ಕಾರ್ಯಕ್ರಮದಲ್ಲಿ ಭಾಗವಹಿಸುವವರು ಆ ಸಮಾಜದವರೇ ಆಗಿರುತ್ತಾರೆ. ಅದನ್ನು ತಪ್ಪಿಸಿ ಎಲ್ಲ ದಾರ್ಶನಿಕರ ಜಯಂತಿಯನ್ನು ಒಮ್ಮೆಲೇ ಆಚರಣೆ ಮಾಡುವ ಒಳ್ಳೆಯ ಸಂಪ್ರದಾಯವನ್ನು ಶಾಸಕ ಸಿ.ಬಿ. ಸುರೇಶ್ ಬಾಬು ಪ್ರಾರಂಭ ಮಾಡಿದ್ದಾರೆ ಎಂದರು.</p>.<p>ದಾರ್ಶನಿಕರ 60 ಪುಟಗಳ ಗ್ರಂಥವನ್ನು ಸಾಹಿತಿ ನಾಡೋಜ ಹಂಪನಾಗರಾಜಯ್ಯ ಬಿಡುಗಡೆಗೊಳಿಸಿದರು.</p>.<p>ಕಾರ್ಯಕ್ರಮದಲ್ಲಿ ಸ್ವಾಮೀಜಿಗಳು, ಬಿಎಂಟಿಸಿ ಉಪಾಧ್ಯಕ್ಷರಾದ ನಿಖೇತ್ ರಾಜ್ ಮೌರ್ಯ, ಮುಖಂಡರು ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>