<p><strong>ತುಮಕೂರು:</strong> ಶಿವಕುಮಾರ ಸ್ವಾಮೀಜಿ ಅವರ ಎರಡನೇ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭಾಗವಹಿಸಿದ್ದಾರೆ. </p>.<p>11ಕ್ಕೆ ಕಾರ್ಯಕ್ರಮ ನಿಗದಿ ಆಗಿತ್ತು. 10. 30ಕ್ಕೆ ಮಠಕ್ಕೆ ಬಂದ ಅವರು, ಶಿವಕುಮಾರ ಸ್ವಾಮೀಜಿ ಅವರ ಗದ್ದುಗೆ ದರ್ಶನ ಪಡೆದು ನೇರವಾಗಿ ವೇದಿಕೆಗೆ ಬಂದರು.</p>.<p>ಸಿದ್ಧಲಿಂಗ ಸ್ವಾಮೀಜಿ, ಹರಿಹರ ಪಂಚಮಸಾಲಿ ಗುರುಪೀಠದ ವಚನಾನಂದ ಸ್ವಾಮೀಜಿ, ಉಪಮುಖ್ಯಮಂತ್ರಿ ಸಿ.ಎನ್ ಅಶ್ವತ್ಥನಾರಾಯಣ , ಕೇಂದ್ರ ಸಚಿವ ಪ್ರತಾಪ ಚಂದ್ರ ಸಾರಂಗಿ, ಸಂಸದ ಜಿ.ಎಸ್.ಬಸವರಾಜು, ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ಎಸ್.ಪರಮಶಿವಯ್ಯ ಇದ್ದಾರೆ.</p>.<p><strong>ಬಡ ಮಕ್ಕಳಿಗೆ ಶಿಕ್ಷಣ ನೀಡಿದಶಿವಕುಮಾರ ಸ್ವಾಮೀಜಿ ನಾಡಿಗೆ ಸ್ಫೂರ್ತಿ: ಡಿಸಿಎಂ ಅಶ್ವತ್ಥ ನಾರಾಯಣ</strong></p>.<p>ಎಲ್ಲ ಸಮುದಾಯಗಳ ಬಡ ಮಕ್ಕಳಿಗೆ ಶಿಕ್ಷಣವನ್ನು ಶಿವಕುಮಾರ ಸ್ವಾಮೀಜಿ ನೀಡಿದರು. ಅವರು ಎಂದಿಗೂ ನಾಡಿಗೆ ಸ್ಫೂರ್ತಿ ಎಂದು ಡಿಸಿಎಂ ಅಶ್ವತ್ಥ ನಾರಾಯಣ ತಿಳಿಸಿದರು.</p>.<p>ಅವರಿಗೆ ಗೌರವ ತರುವ ರೀತಿಯಲ್ಲಿ ನಾವು ಕಾರ್ಯ ನಿರ್ವಹಿಸಬೇಕು. ಅವರು ಬೆಳೆಸಿದ ಹಲವರು ದೇಶ ವಿದೇಶಗಳಲ್ಲಿ ಉನ್ನತ ಹುದ್ದೆಯಲ್ಲಿ ಇದ್ದಾರೆ.</p>.<p>ಸ್ವಾಮೀಜಿ ಅವರ ಹುಟ್ಟೂರು ವೀರಾಪುರದಲ್ಲಿ ಅವರ 111 ಅಡಿ ಪ್ರತಿಮೆ ಸ್ಥಾಪನೆಗೆ ಕ್ರಮವಹಿಸುತ್ತೇವೆ. ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಸ್ವಾಮೀಜಿ ಅವರ ವಿಚಾರಗಳನ್ನು ಅಳವಡಿಸಿಕೊಳ್ಳುತ್ತೇವೆ ಮತ್ತು ಅವರ ಆಶಯಗಳಿಗೆ ಪೂರಕವಾಗಿ ಕೆಲಸ ಮಾಡುತ್ತೇವೆ ಎಂದು ತಿಳಿಸಿದರು.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ಶಿವಕುಮಾರ ಸ್ವಾಮೀಜಿ ಅವರ ಎರಡನೇ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭಾಗವಹಿಸಿದ್ದಾರೆ. </p>.<p>11ಕ್ಕೆ ಕಾರ್ಯಕ್ರಮ ನಿಗದಿ ಆಗಿತ್ತು. 10. 30ಕ್ಕೆ ಮಠಕ್ಕೆ ಬಂದ ಅವರು, ಶಿವಕುಮಾರ ಸ್ವಾಮೀಜಿ ಅವರ ಗದ್ದುಗೆ ದರ್ಶನ ಪಡೆದು ನೇರವಾಗಿ ವೇದಿಕೆಗೆ ಬಂದರು.</p>.<p>ಸಿದ್ಧಲಿಂಗ ಸ್ವಾಮೀಜಿ, ಹರಿಹರ ಪಂಚಮಸಾಲಿ ಗುರುಪೀಠದ ವಚನಾನಂದ ಸ್ವಾಮೀಜಿ, ಉಪಮುಖ್ಯಮಂತ್ರಿ ಸಿ.ಎನ್ ಅಶ್ವತ್ಥನಾರಾಯಣ , ಕೇಂದ್ರ ಸಚಿವ ಪ್ರತಾಪ ಚಂದ್ರ ಸಾರಂಗಿ, ಸಂಸದ ಜಿ.ಎಸ್.ಬಸವರಾಜು, ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ಎಸ್.ಪರಮಶಿವಯ್ಯ ಇದ್ದಾರೆ.</p>.<p><strong>ಬಡ ಮಕ್ಕಳಿಗೆ ಶಿಕ್ಷಣ ನೀಡಿದಶಿವಕುಮಾರ ಸ್ವಾಮೀಜಿ ನಾಡಿಗೆ ಸ್ಫೂರ್ತಿ: ಡಿಸಿಎಂ ಅಶ್ವತ್ಥ ನಾರಾಯಣ</strong></p>.<p>ಎಲ್ಲ ಸಮುದಾಯಗಳ ಬಡ ಮಕ್ಕಳಿಗೆ ಶಿಕ್ಷಣವನ್ನು ಶಿವಕುಮಾರ ಸ್ವಾಮೀಜಿ ನೀಡಿದರು. ಅವರು ಎಂದಿಗೂ ನಾಡಿಗೆ ಸ್ಫೂರ್ತಿ ಎಂದು ಡಿಸಿಎಂ ಅಶ್ವತ್ಥ ನಾರಾಯಣ ತಿಳಿಸಿದರು.</p>.<p>ಅವರಿಗೆ ಗೌರವ ತರುವ ರೀತಿಯಲ್ಲಿ ನಾವು ಕಾರ್ಯ ನಿರ್ವಹಿಸಬೇಕು. ಅವರು ಬೆಳೆಸಿದ ಹಲವರು ದೇಶ ವಿದೇಶಗಳಲ್ಲಿ ಉನ್ನತ ಹುದ್ದೆಯಲ್ಲಿ ಇದ್ದಾರೆ.</p>.<p>ಸ್ವಾಮೀಜಿ ಅವರ ಹುಟ್ಟೂರು ವೀರಾಪುರದಲ್ಲಿ ಅವರ 111 ಅಡಿ ಪ್ರತಿಮೆ ಸ್ಥಾಪನೆಗೆ ಕ್ರಮವಹಿಸುತ್ತೇವೆ. ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಸ್ವಾಮೀಜಿ ಅವರ ವಿಚಾರಗಳನ್ನು ಅಳವಡಿಸಿಕೊಳ್ಳುತ್ತೇವೆ ಮತ್ತು ಅವರ ಆಶಯಗಳಿಗೆ ಪೂರಕವಾಗಿ ಕೆಲಸ ಮಾಡುತ್ತೇವೆ ಎಂದು ತಿಳಿಸಿದರು.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>