<p>ಚಿಕ್ಕನಾಯಕನಹಳ್ಳಿ: ‘ಬಕ್ರೀದ್ ತ್ಯಾಗ ಹಾಗೂ ಬಲಿದಾನದ ಸಂಕೇತ. ನೊಂದವರಿಗೆ ದಾನ ಮಾಡುವ ಉದಾರ ಮನೋಭಾವ ಬೆಳೆಸಿಕೊಂಡರೆ ಭಗವಂತ ಮತ್ತೊಂದು ರೂಪದಲ್ಲಿ ಕೃಪೆ ತೋರುತ್ತಾನೆ ಎಂಬ ದೃಢ ನಂಬಿಕೆಯೊಂದಿಗೆ ಈ ಹಬ್ಬ ಆಚರಿಸೋಣ’ ಎಂದು ಶಾಸಕ ಸಿ.ಬಿ.ಸುರೇಶ್ಬಾಬು ಸಲಹೆ ನೀಡಿದರು.</p>.<p>ಪಟ್ಟಣದ ಈದ್ಗಾ ಮೈದಾನದಲ್ಲಿ ಬಕ್ರೀದ್ ಪ್ರಯುಕ್ತ ಏರ್ಪಡಿಸಿದ್ದ ಪವಿತ್ರ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡು ಮಾತನಾಡಿದರು.</p>.<p>ಮಾನವ ಕುಲ ಸುಖ, ಶಾಂತಿ, ಪ್ರೀತಿ ಮತ್ತು ವಾತ್ಸಲ್ಯದಿಂದ ಸಹಬಾಳ್ವೆ ನಡೆಸಬೇಕು. ಸಮಾಜದಲ್ಲಿ ಆರ್ಥಿಕವಾಗಿ ಸಶಕ್ತರಾಗಿರುವವರು ಇಲ್ಲದವರಿಗೆ (ಬಡವರಿಗೆ) ದಾನ ಮಾಡುವ ಮೂಲಕ ಎಲ್ಲರೂ ಸಮಾನತೆ ಸಮಾಜ ನಿರ್ಮಿಸಲು ಸಾಧ್ಯವಾಗುತ್ತದೆ. ನಾವು ಮಾಡುವ ದಾನ ಧರ್ಮ ಸದಾ ಕಾಯುತ್ತದೆ ಎಂದು ಹೇಳಿದರು.</p>.<p>ಪುರಸಭೆ ಮಾಜಿ ಅಧ್ಯಕ್ಷ ಮಹಮದ್ ಖಲಂದರ್ ಸೇರಿದಂತೆ ತಾಲ್ಲೂಕಿನ ವಿವಿಧ ಮಸೀದಿಗಳ ಮುತವಲ್ಲಿಗಳು, ಆಡಳಿತ ಮಂಡಳಿ ಕಾರ್ಯದರ್ಶಿಗಳು, ಪ್ರಮುಖ ಮುಖಂಡರು ಹಾಗೂ ನೂರಾರು ಇಸ್ಲಾಂ ಧರ್ಮದ ಅನುಯಾಯಿಗಳು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260529-17-499216120</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಕ್ಕನಾಯಕನಹಳ್ಳಿ: ‘ಬಕ್ರೀದ್ ತ್ಯಾಗ ಹಾಗೂ ಬಲಿದಾನದ ಸಂಕೇತ. ನೊಂದವರಿಗೆ ದಾನ ಮಾಡುವ ಉದಾರ ಮನೋಭಾವ ಬೆಳೆಸಿಕೊಂಡರೆ ಭಗವಂತ ಮತ್ತೊಂದು ರೂಪದಲ್ಲಿ ಕೃಪೆ ತೋರುತ್ತಾನೆ ಎಂಬ ದೃಢ ನಂಬಿಕೆಯೊಂದಿಗೆ ಈ ಹಬ್ಬ ಆಚರಿಸೋಣ’ ಎಂದು ಶಾಸಕ ಸಿ.ಬಿ.ಸುರೇಶ್ಬಾಬು ಸಲಹೆ ನೀಡಿದರು.</p>.<p>ಪಟ್ಟಣದ ಈದ್ಗಾ ಮೈದಾನದಲ್ಲಿ ಬಕ್ರೀದ್ ಪ್ರಯುಕ್ತ ಏರ್ಪಡಿಸಿದ್ದ ಪವಿತ್ರ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡು ಮಾತನಾಡಿದರು.</p>.<p>ಮಾನವ ಕುಲ ಸುಖ, ಶಾಂತಿ, ಪ್ರೀತಿ ಮತ್ತು ವಾತ್ಸಲ್ಯದಿಂದ ಸಹಬಾಳ್ವೆ ನಡೆಸಬೇಕು. ಸಮಾಜದಲ್ಲಿ ಆರ್ಥಿಕವಾಗಿ ಸಶಕ್ತರಾಗಿರುವವರು ಇಲ್ಲದವರಿಗೆ (ಬಡವರಿಗೆ) ದಾನ ಮಾಡುವ ಮೂಲಕ ಎಲ್ಲರೂ ಸಮಾನತೆ ಸಮಾಜ ನಿರ್ಮಿಸಲು ಸಾಧ್ಯವಾಗುತ್ತದೆ. ನಾವು ಮಾಡುವ ದಾನ ಧರ್ಮ ಸದಾ ಕಾಯುತ್ತದೆ ಎಂದು ಹೇಳಿದರು.</p>.<p>ಪುರಸಭೆ ಮಾಜಿ ಅಧ್ಯಕ್ಷ ಮಹಮದ್ ಖಲಂದರ್ ಸೇರಿದಂತೆ ತಾಲ್ಲೂಕಿನ ವಿವಿಧ ಮಸೀದಿಗಳ ಮುತವಲ್ಲಿಗಳು, ಆಡಳಿತ ಮಂಡಳಿ ಕಾರ್ಯದರ್ಶಿಗಳು, ಪ್ರಮುಖ ಮುಖಂಡರು ಹಾಗೂ ನೂರಾರು ಇಸ್ಲಾಂ ಧರ್ಮದ ಅನುಯಾಯಿಗಳು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260529-17-499216120</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>