<p>ಚಿಕ್ಕನಾಯಕನಹಳ್ಳಿ: ತಾಲ್ಲೂಕಿನಾದ್ಯಂತ ಕಳೆದ ಕೆಲವು ದಿನಗಳಿಂದ ತೀವ್ರಗೊಂಡಿದ್ದ ಬರದ ಬೇಗೆಯ ನಡುವೆ, ಸೋಮವಾರ ಹಲವೆಡೆ ಉತ್ತಮ ಮಳೆಯಾಗಿದೆ.</p>.<p>ತಾಲ್ಲೂಕಿನ ಕೃಷಿ ಚಟುವಟಿಕೆಗಳಿಗೆ ಆರಂಭಿಕ ಆಧಾರವಾಗಬೇಕಿದ್ದ ‘ಅಶ್ವಿನಿ’ ಹಾಗೂ ‘ಭರಣಿ’ ಮಳೆಗಳು ಸಂಪೂರ್ಣವಾಗಿ ಕೈಕೊಟ್ಟಿದ್ದರಿಂದ ಕೃಷಿಕರು ತೀವ್ರ ಆತಂಕಕ್ಕೆ ಒಳಗಾಗಿದ್ದರು. ಬಿತ್ತನೆಗೆ ಮಣ್ಣಿನಲ್ಲಿ ತೇವಾಂಶವಿಲ್ಲದೆ ಹಾಗೂ ಅಡಿಕೆ ತೋಟಗಳು ನೀರಿಲ್ಲದೆ ಒಣಗುತ್ತಿದ್ದುದರಿಂದ ರೈತರು ಕೃತಿಕಾ ಮಳೆಯ ನಿರೀಕ್ಷೆಯಲ್ಲಿದ್ದರು.</p>.<p>ಸೋಮವಾರ ಸಂಜೆ ಸುರಿದ ಈ ಮಳೆಯು ಒಣಗಿ ಬಿರುಕು ಬಿಟ್ಟಿದ್ದ ಭೂಮಿಯನ್ನು ತಣಿಸಿದೆ. ಮಳೆ ಸಿಂಚನದಿಂದಾಗಿ ಸದ್ಯಕ್ಕೆ ಕೃಷಿ ಭೂಮಿ ಹದಗೊಳ್ಳುತ್ತಿದ್ದು, ರೈತರ ಮುಖದಲ್ಲಿ ಹರ್ಷ ಮೂಡಿದೆ. ಈ ವಾರವೂ ಇದೇ ರೀತಿ ಉತ್ತಮ ಮಳೆ ಮುಂದುವರಿದರೆ, ಪಾತಾಳಕ್ಕೆ ಕುಸಿದಿರುವ ತಾಲ್ಲೂಕಿನ ಅಂತರ್ಜಲ ಸಲ್ಪಮಟ್ಟಿಗೆ ಸುಧಾರಿಸಬಹುದು. ಬತ್ತಿ ಹೋಗಿರುವ ಜಲಮೂಲಗಳಿಗೆ ಮರುಪೂರಣ ಸಿಗಬಹುದು ಎಂದು ನಂಬಿಕೆಯನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260520-17-1960610391</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಕ್ಕನಾಯಕನಹಳ್ಳಿ: ತಾಲ್ಲೂಕಿನಾದ್ಯಂತ ಕಳೆದ ಕೆಲವು ದಿನಗಳಿಂದ ತೀವ್ರಗೊಂಡಿದ್ದ ಬರದ ಬೇಗೆಯ ನಡುವೆ, ಸೋಮವಾರ ಹಲವೆಡೆ ಉತ್ತಮ ಮಳೆಯಾಗಿದೆ.</p>.<p>ತಾಲ್ಲೂಕಿನ ಕೃಷಿ ಚಟುವಟಿಕೆಗಳಿಗೆ ಆರಂಭಿಕ ಆಧಾರವಾಗಬೇಕಿದ್ದ ‘ಅಶ್ವಿನಿ’ ಹಾಗೂ ‘ಭರಣಿ’ ಮಳೆಗಳು ಸಂಪೂರ್ಣವಾಗಿ ಕೈಕೊಟ್ಟಿದ್ದರಿಂದ ಕೃಷಿಕರು ತೀವ್ರ ಆತಂಕಕ್ಕೆ ಒಳಗಾಗಿದ್ದರು. ಬಿತ್ತನೆಗೆ ಮಣ್ಣಿನಲ್ಲಿ ತೇವಾಂಶವಿಲ್ಲದೆ ಹಾಗೂ ಅಡಿಕೆ ತೋಟಗಳು ನೀರಿಲ್ಲದೆ ಒಣಗುತ್ತಿದ್ದುದರಿಂದ ರೈತರು ಕೃತಿಕಾ ಮಳೆಯ ನಿರೀಕ್ಷೆಯಲ್ಲಿದ್ದರು.</p>.<p>ಸೋಮವಾರ ಸಂಜೆ ಸುರಿದ ಈ ಮಳೆಯು ಒಣಗಿ ಬಿರುಕು ಬಿಟ್ಟಿದ್ದ ಭೂಮಿಯನ್ನು ತಣಿಸಿದೆ. ಮಳೆ ಸಿಂಚನದಿಂದಾಗಿ ಸದ್ಯಕ್ಕೆ ಕೃಷಿ ಭೂಮಿ ಹದಗೊಳ್ಳುತ್ತಿದ್ದು, ರೈತರ ಮುಖದಲ್ಲಿ ಹರ್ಷ ಮೂಡಿದೆ. ಈ ವಾರವೂ ಇದೇ ರೀತಿ ಉತ್ತಮ ಮಳೆ ಮುಂದುವರಿದರೆ, ಪಾತಾಳಕ್ಕೆ ಕುಸಿದಿರುವ ತಾಲ್ಲೂಕಿನ ಅಂತರ್ಜಲ ಸಲ್ಪಮಟ್ಟಿಗೆ ಸುಧಾರಿಸಬಹುದು. ಬತ್ತಿ ಹೋಗಿರುವ ಜಲಮೂಲಗಳಿಗೆ ಮರುಪೂರಣ ಸಿಗಬಹುದು ಎಂದು ನಂಬಿಕೆಯನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260520-17-1960610391</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>