<p>ಚಿಕ್ಕನಾಯಕನಹಳ್ಳಿ: ತಾಲ್ಲೂಕು ಅಗ್ನಿಶಾಮಕ ಠಾಣೆಯಲ್ಲಿ ಮಂಗಳವಾರ ‘ಅಗ್ನಿಶಾಮಕ ಸೇವಾ ಸಪ್ತಾಹ’ ನಡೆಯಿತು.</p>.<p>ಸಂವಿಧಾನ ಶಿಲ್ಪಿ ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಿಸಲಾಯಿತು.</p>.<p>ಅಗ್ನಿ ಅವಘಡಗಳನ್ನು ತಡೆಗಟ್ಟುವಲ್ಲಿ ಮುನ್ನೆಚ್ಚರಿಕೆ ವಹಿಸುವುದು ಅಗತ್ಯ. ಪೆಟ್ರೋಲ್ ಬಂಕ್, ಬಸ್ ನಿಲ್ದಾಣ ಹಾಗೂ ಜನನಿಬಿಡ ಅಂಗಡಿ ಮುಂಗಟ್ಟುಗಳಂತಹ ಪ್ರದೇಶಗಳಲ್ಲಿ ಸಾರ್ವಜನಿಕರು ವಹಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸಲು ನಿರ್ಧರಿಸಲಾಯಿತು.</p>.<p>ಜಾಗೃತಿ ಅಭಿಯಾನದ ಭಾಗವಾಗಿ, ಅಗ್ನಿ ಸುರಕ್ಷತಾ ನಿಯಮಗಳನ್ನು ಒಳಗೊಂಡ ಕರಪತ್ರಗಳನ್ನು ಸಾರ್ವಜನಿಕರಿಗೆ ವಿತರಿಸುವ ಕಾರ್ಯಕ್ಕೆ ಚಾಲನೆ ನೀಡಲಾಯಿತು.</p>.<p>ಶಾಸಕ ಸಿ.ಬಿ. ಸುರೇಶ್ ಬಾಬು ಮಾತನಾಡಿ, ತಾಲ್ಲೂಕು ವಿಶಾಲ ವಿಸ್ತೀರ್ಣ ಹೊಂದಿರುವುದರಿಂದ ಹುಳಿಯಾರು ಭಾಗದಲ್ಲೊಂದು ಅಗ್ನಿಶಾಮಕ ಠಾಣೆ ಪ್ರಾರಂಭಿಸಲು ಈಗಾಗಲೇ ಪ್ರಕ್ರಿಯೆ ಪ್ರಾರಂಭವಾಗಿದೆ ಎಂದು ಹೇಳಿದರು.</p>.<p>ಠಾಣಾಧಿಕಾರಿ ರಮೇಶ್ ಮಾತನಾಡಿದರು. ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಲೀಡರ್ಗಳಾದ ವೈ.ನಾಗರಾಜು, ನವೀನ್ಕುಮಾರ್ ವೈ.ಎಸ್., ಪ್ರಕಾಶ್ ಸಿ.ಇ., ಚಂದ್ರಗುಪ್ತ, ಬಾಗಣ್ಣ, ಅವಿನಾಶ್, ಬಸವರಾಜು ಹಾಗೂ ಸಿಬ್ಬಂದಿ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260416-17-2036718852</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಕ್ಕನಾಯಕನಹಳ್ಳಿ: ತಾಲ್ಲೂಕು ಅಗ್ನಿಶಾಮಕ ಠಾಣೆಯಲ್ಲಿ ಮಂಗಳವಾರ ‘ಅಗ್ನಿಶಾಮಕ ಸೇವಾ ಸಪ್ತಾಹ’ ನಡೆಯಿತು.</p>.<p>ಸಂವಿಧಾನ ಶಿಲ್ಪಿ ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಿಸಲಾಯಿತು.</p>.<p>ಅಗ್ನಿ ಅವಘಡಗಳನ್ನು ತಡೆಗಟ್ಟುವಲ್ಲಿ ಮುನ್ನೆಚ್ಚರಿಕೆ ವಹಿಸುವುದು ಅಗತ್ಯ. ಪೆಟ್ರೋಲ್ ಬಂಕ್, ಬಸ್ ನಿಲ್ದಾಣ ಹಾಗೂ ಜನನಿಬಿಡ ಅಂಗಡಿ ಮುಂಗಟ್ಟುಗಳಂತಹ ಪ್ರದೇಶಗಳಲ್ಲಿ ಸಾರ್ವಜನಿಕರು ವಹಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸಲು ನಿರ್ಧರಿಸಲಾಯಿತು.</p>.<p>ಜಾಗೃತಿ ಅಭಿಯಾನದ ಭಾಗವಾಗಿ, ಅಗ್ನಿ ಸುರಕ್ಷತಾ ನಿಯಮಗಳನ್ನು ಒಳಗೊಂಡ ಕರಪತ್ರಗಳನ್ನು ಸಾರ್ವಜನಿಕರಿಗೆ ವಿತರಿಸುವ ಕಾರ್ಯಕ್ಕೆ ಚಾಲನೆ ನೀಡಲಾಯಿತು.</p>.<p>ಶಾಸಕ ಸಿ.ಬಿ. ಸುರೇಶ್ ಬಾಬು ಮಾತನಾಡಿ, ತಾಲ್ಲೂಕು ವಿಶಾಲ ವಿಸ್ತೀರ್ಣ ಹೊಂದಿರುವುದರಿಂದ ಹುಳಿಯಾರು ಭಾಗದಲ್ಲೊಂದು ಅಗ್ನಿಶಾಮಕ ಠಾಣೆ ಪ್ರಾರಂಭಿಸಲು ಈಗಾಗಲೇ ಪ್ರಕ್ರಿಯೆ ಪ್ರಾರಂಭವಾಗಿದೆ ಎಂದು ಹೇಳಿದರು.</p>.<p>ಠಾಣಾಧಿಕಾರಿ ರಮೇಶ್ ಮಾತನಾಡಿದರು. ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಲೀಡರ್ಗಳಾದ ವೈ.ನಾಗರಾಜು, ನವೀನ್ಕುಮಾರ್ ವೈ.ಎಸ್., ಪ್ರಕಾಶ್ ಸಿ.ಇ., ಚಂದ್ರಗುಪ್ತ, ಬಾಗಣ್ಣ, ಅವಿನಾಶ್, ಬಸವರಾಜು ಹಾಗೂ ಸಿಬ್ಬಂದಿ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260416-17-2036718852</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>