<p><strong>ಚಿಕ್ಕನಾಯಕನಹಳ್ಳಿ:</strong> ಪಟ್ಟಣದ ತೀನಂಶ್ರೀ ಭವನದಲ್ಲಿ ಸೋಮವಾರ ನಡೆದ ‘ಜನಸ್ಪಂದನಾ’ ಕಾರ್ಯಕ್ರಮದಲ್ಲಿ ರೈತರೊಬ್ಬರು ಇಂಗ್ಲಿಷ್ ಮತ್ತು ಹಿಂದಿಯಲ್ಲಿ ತಮ್ಮ ಅಹವಾಲು ಮಂಡಿಸುವ ಮೂಲಕ ಅಧಿಕಾರಿಗಳು ಹಾಗೂ ಸಾರ್ವಜನಿಕರ ಗಮನ ಸೆಳೆದಿದ್ದಾರೆ.</p><p>ಹಳ್ಳಿಕೆರೆ ಕಾಲೊನಿಯ ಸಿದ್ದರಾಮಯ್ಯ (70) ಅವರ ಈ ಭಾಷಾ ಪಾಂಡಿತ್ಯದ ವಿಡಿಯೊ ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಹಿಂದೆ ಹಳ್ಳಿಕೆರೆಯಲ್ಲಿ ನಡೆದ ‘ಮನೆ ಬಾಗಿಲಿಗೆ ಮನೆಮಗ’ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ತಮ್ಮ ಜಮೀನಿಗೆ ಸಂಚರಿಸಲು ಸೂಕ್ತ ರಸ್ತೆ ಕಲ್ಪಿಸಿಕೊಡುವಂತೆ ಶಾಸಕರಲ್ಲಿ ವಿನಂತಿಸಿದ್ದರು. ಆ ಮನವಿಗೆ ಸ್ಪಂದಿಸಿದ್ದ ಆಡಳಿತ ಯಂತ್ರವು ಜಮೀನಿಗೆ ತೆರಳಲು ದಾರಿ ಮಾಡಿಕೊಟ್ಟಿತ್ತು.</p>.<p>ಸೋಮವಾರ ನಡೆದ ಜನಸ್ಪಂದನ ಸಭೆಯಲ್ಲಿ ಮತ್ತೆ ಹಾಜರಾದ ಸಿದ್ದರಾಮಯ್ಯ, ಜಮೀನಿಗೆ ದಾರಿ ಮಾಡಿಕೊಡಲಾಗಿದೆಯಾದರೂ, ಆ ಮಾರ್ಗದಲ್ಲಿ ಮರಗಳಿರುವುದರಿಂದ ಸಂಚಾರಕ್ಕೆ ತೀವ್ರ ಅಡಚಣೆಯಾಗುತ್ತಿದೆ ಎಂದು ಅಹವಾಲು ಸಲ್ಲಿಸಿದರು. ತಮ್ಮ ಸಮಸ್ಯೆಯನ್ನು ವಿವರಿಸಲು ಅವರು ಇಂಗ್ಲಿಷ್ ಮತ್ತು ಹಿಂದಿ ಬಳಸಿದರು. ಅವರ ಸ್ಪಷ್ಟ ಉಚ್ಚಾರಣೆ ಹಾಗೂ ಭಾಷಾ ಪಾಂಡಿತ್ಯಕ್ಕೆ ಸಭೆಯಲ್ಲಿದ್ದ ಅಧಿಕಾರಿಗಳು ದಂಗಾದರು. ಈ ವಿಡಿಯೊಗೆ ಸಾಮಾಜಿಕ ಜಾಲತಾಣದಲ್ಲೂ ಮೆಚ್ಚುಗೆ ವ್ಯಕ್ತವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕನಾಯಕನಹಳ್ಳಿ:</strong> ಪಟ್ಟಣದ ತೀನಂಶ್ರೀ ಭವನದಲ್ಲಿ ಸೋಮವಾರ ನಡೆದ ‘ಜನಸ್ಪಂದನಾ’ ಕಾರ್ಯಕ್ರಮದಲ್ಲಿ ರೈತರೊಬ್ಬರು ಇಂಗ್ಲಿಷ್ ಮತ್ತು ಹಿಂದಿಯಲ್ಲಿ ತಮ್ಮ ಅಹವಾಲು ಮಂಡಿಸುವ ಮೂಲಕ ಅಧಿಕಾರಿಗಳು ಹಾಗೂ ಸಾರ್ವಜನಿಕರ ಗಮನ ಸೆಳೆದಿದ್ದಾರೆ.</p><p>ಹಳ್ಳಿಕೆರೆ ಕಾಲೊನಿಯ ಸಿದ್ದರಾಮಯ್ಯ (70) ಅವರ ಈ ಭಾಷಾ ಪಾಂಡಿತ್ಯದ ವಿಡಿಯೊ ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಹಿಂದೆ ಹಳ್ಳಿಕೆರೆಯಲ್ಲಿ ನಡೆದ ‘ಮನೆ ಬಾಗಿಲಿಗೆ ಮನೆಮಗ’ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ತಮ್ಮ ಜಮೀನಿಗೆ ಸಂಚರಿಸಲು ಸೂಕ್ತ ರಸ್ತೆ ಕಲ್ಪಿಸಿಕೊಡುವಂತೆ ಶಾಸಕರಲ್ಲಿ ವಿನಂತಿಸಿದ್ದರು. ಆ ಮನವಿಗೆ ಸ್ಪಂದಿಸಿದ್ದ ಆಡಳಿತ ಯಂತ್ರವು ಜಮೀನಿಗೆ ತೆರಳಲು ದಾರಿ ಮಾಡಿಕೊಟ್ಟಿತ್ತು.</p>.<p>ಸೋಮವಾರ ನಡೆದ ಜನಸ್ಪಂದನ ಸಭೆಯಲ್ಲಿ ಮತ್ತೆ ಹಾಜರಾದ ಸಿದ್ದರಾಮಯ್ಯ, ಜಮೀನಿಗೆ ದಾರಿ ಮಾಡಿಕೊಡಲಾಗಿದೆಯಾದರೂ, ಆ ಮಾರ್ಗದಲ್ಲಿ ಮರಗಳಿರುವುದರಿಂದ ಸಂಚಾರಕ್ಕೆ ತೀವ್ರ ಅಡಚಣೆಯಾಗುತ್ತಿದೆ ಎಂದು ಅಹವಾಲು ಸಲ್ಲಿಸಿದರು. ತಮ್ಮ ಸಮಸ್ಯೆಯನ್ನು ವಿವರಿಸಲು ಅವರು ಇಂಗ್ಲಿಷ್ ಮತ್ತು ಹಿಂದಿ ಬಳಸಿದರು. ಅವರ ಸ್ಪಷ್ಟ ಉಚ್ಚಾರಣೆ ಹಾಗೂ ಭಾಷಾ ಪಾಂಡಿತ್ಯಕ್ಕೆ ಸಭೆಯಲ್ಲಿದ್ದ ಅಧಿಕಾರಿಗಳು ದಂಗಾದರು. ಈ ವಿಡಿಯೊಗೆ ಸಾಮಾಜಿಕ ಜಾಲತಾಣದಲ್ಲೂ ಮೆಚ್ಚುಗೆ ವ್ಯಕ್ತವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>