<p>ಚಿಕ್ಕನಾಯಕನಹಳ್ಳಿ: ಗೋಡೆಕೆರೆ ಮಠದ ಚರಪಟ್ಟಾಧ್ಯಕ್ಷ ಮೃತ್ಯುಂಜಯ ದೇಶೀಕೇಂದ್ರ ಸ್ವಾಮೀಜಿ ಅವರ ಧಾರ್ಮಿಕ ಮತ್ತು ಸಾಮಾಜಿಕ ಸೇವೆಯನ್ನು ಗೌರವಿಸಲು ಮೇ 10ರಂದು ಗೋಡೆಕೆರೆಯಲ್ಲಿ ‘ಗುರುವಂದನಾ’ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಬೆಳ್ಳಾವಿ ಕಾರದ ವೀರಬಸವ ಸ್ವಾಮೀಜಿ ತಿಳಿಸಿದರು.</p>.<p>ಗೋಡೆಕೆರೆಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾಲ್ಲೂಕಿನ ನೀರಾವರಿ ಹೋರಾಟ, ಪರಿಸರ ಸಂರಕ್ಷಣೆ ಹಾಗೂ ಜನರ ಆರೋಗ್ಯಕ್ಕಾಗಿ ಅವರು ನೀಡಿರುವ ಕೊಡುಗೆ ಸ್ಮರಿಸಲು ಭಕ್ತ ಸಮೂಹ ಈ ಮಹೋತ್ಸವ ಹಮ್ಮಿಕೊಂಡಿದೆ ಎಂದರು.</p>.<p>ಗುಬ್ಬಿ ತಾಲ್ಲೂಕು ಗೊಲ್ಲಹಳ್ಳಿ ಮಠದ ವಿಭವ ವಿದ್ಯಾಶಂಕರ ದೇಶೀಕೇಂದ್ರ ಸ್ವಾಮೀಜಿ ಮಾತನಾಡಿ, ಧ್ವಜಾರೋಹಣವನ್ನು ಕುಪ್ಪೂರು-ತಮ್ಮಡಿಹಳ್ಳಿ ಮಠದ ಅಭಿನವ ಮಲ್ಲಿಕಾರ್ಜುನ ಸ್ವಾಮೀಜಿ ನೆರವೇರಿಸುತ್ತಾರೆ. ಗುರುಸಿದ್ದರಾಮೇಶ್ವರ ಸ್ವಾಮಿ ಉತ್ಸವ ಜರುಗಲಿದೆ. ಸಿಡ್ಲೆಹಳ್ಳಿ ಇಮ್ಮಡಿ ಕರಿಬಸವ ಸ್ವಾಮಿ, ಕೋಳಗುಂದದ ಜಯಚಂದ್ರಶೇಖರ ಸ್ವಾಮಿ ಸೇರಿದಂತೆ ನಾಡಿನ ವಿವಿಧ ಮಠಾಧೀಶರು ಭಾಗವಹಿಸಲಿದ್ದಾರೆ ಎಂದು ಹೇಳಿದರು.</p>.<p>ಸ್ವಾಗತ ಸಮಿತಿ ಅಧ್ಯಕ್ಷ ಎಂ.ಎಂ. ಜಗದೀಶ್ ಮಾತನಾಡಿದರು.</p>.<p>ಗುತ್ತಿಗೆದಾರ ರಾಯಸಂದ್ರ ರವಿಕುಮಾರ್ ಮಾತನಾಡಿ, ಸಮಾರಂಭಕ್ಕೆ 10 ಸಾವಿರಕ್ಕೂ ಹೆಚ್ಚು ಭಕ್ತರು ಭಾಗವಹಿಸುವ ನಿರೀಕ್ಷೆ ಇದೆ. ಬೆಳಿಗ್ಗೆ 6ರಿಂದ ಸಂಜೆ 6ರವರೆಗೆ ನಿರಂತರ ದಾಸೋಹ ವ್ಯವಸ್ಥೆ ಇರಲಿದೆ ಎಂದರು.</p>.<p>ಕೇಂದ್ರ ಸಚಿವ ವಿ. ಸೋಮಣ್ಣ, ಸಚಿವರಾದ ಎಂ.ಬಿ. ಪಾಟೀಲ, ಜಿ.ಪರಮೇಶ್ವರ, ಶಾಸಕ ಸಿ.ಬಿ. ಸುರೇಶ್ ಬಾಬು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ನಿಖಿಲ್ ಕುಮಾರಸ್ವಾಮಿ, ಮಾಜಿ ಸಚಿವ ಜೆ.ಸಿ. ಮಾಧುಸ್ವಾಮಿ, ಶಾಸಕ ಜ್ಯೋತಿ ಗಣೇಶ್, ಮಾಜಿ ಸಂಸದ ಜಿ.ಎಸ್. ಬಸವರಾಜು ಭಾಗವಹಿಸಲ್ಲಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260508-17-591129790</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಕ್ಕನಾಯಕನಹಳ್ಳಿ: ಗೋಡೆಕೆರೆ ಮಠದ ಚರಪಟ್ಟಾಧ್ಯಕ್ಷ ಮೃತ್ಯುಂಜಯ ದೇಶೀಕೇಂದ್ರ ಸ್ವಾಮೀಜಿ ಅವರ ಧಾರ್ಮಿಕ ಮತ್ತು ಸಾಮಾಜಿಕ ಸೇವೆಯನ್ನು ಗೌರವಿಸಲು ಮೇ 10ರಂದು ಗೋಡೆಕೆರೆಯಲ್ಲಿ ‘ಗುರುವಂದನಾ’ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಬೆಳ್ಳಾವಿ ಕಾರದ ವೀರಬಸವ ಸ್ವಾಮೀಜಿ ತಿಳಿಸಿದರು.</p>.<p>ಗೋಡೆಕೆರೆಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾಲ್ಲೂಕಿನ ನೀರಾವರಿ ಹೋರಾಟ, ಪರಿಸರ ಸಂರಕ್ಷಣೆ ಹಾಗೂ ಜನರ ಆರೋಗ್ಯಕ್ಕಾಗಿ ಅವರು ನೀಡಿರುವ ಕೊಡುಗೆ ಸ್ಮರಿಸಲು ಭಕ್ತ ಸಮೂಹ ಈ ಮಹೋತ್ಸವ ಹಮ್ಮಿಕೊಂಡಿದೆ ಎಂದರು.</p>.<p>ಗುಬ್ಬಿ ತಾಲ್ಲೂಕು ಗೊಲ್ಲಹಳ್ಳಿ ಮಠದ ವಿಭವ ವಿದ್ಯಾಶಂಕರ ದೇಶೀಕೇಂದ್ರ ಸ್ವಾಮೀಜಿ ಮಾತನಾಡಿ, ಧ್ವಜಾರೋಹಣವನ್ನು ಕುಪ್ಪೂರು-ತಮ್ಮಡಿಹಳ್ಳಿ ಮಠದ ಅಭಿನವ ಮಲ್ಲಿಕಾರ್ಜುನ ಸ್ವಾಮೀಜಿ ನೆರವೇರಿಸುತ್ತಾರೆ. ಗುರುಸಿದ್ದರಾಮೇಶ್ವರ ಸ್ವಾಮಿ ಉತ್ಸವ ಜರುಗಲಿದೆ. ಸಿಡ್ಲೆಹಳ್ಳಿ ಇಮ್ಮಡಿ ಕರಿಬಸವ ಸ್ವಾಮಿ, ಕೋಳಗುಂದದ ಜಯಚಂದ್ರಶೇಖರ ಸ್ವಾಮಿ ಸೇರಿದಂತೆ ನಾಡಿನ ವಿವಿಧ ಮಠಾಧೀಶರು ಭಾಗವಹಿಸಲಿದ್ದಾರೆ ಎಂದು ಹೇಳಿದರು.</p>.<p>ಸ್ವಾಗತ ಸಮಿತಿ ಅಧ್ಯಕ್ಷ ಎಂ.ಎಂ. ಜಗದೀಶ್ ಮಾತನಾಡಿದರು.</p>.<p>ಗುತ್ತಿಗೆದಾರ ರಾಯಸಂದ್ರ ರವಿಕುಮಾರ್ ಮಾತನಾಡಿ, ಸಮಾರಂಭಕ್ಕೆ 10 ಸಾವಿರಕ್ಕೂ ಹೆಚ್ಚು ಭಕ್ತರು ಭಾಗವಹಿಸುವ ನಿರೀಕ್ಷೆ ಇದೆ. ಬೆಳಿಗ್ಗೆ 6ರಿಂದ ಸಂಜೆ 6ರವರೆಗೆ ನಿರಂತರ ದಾಸೋಹ ವ್ಯವಸ್ಥೆ ಇರಲಿದೆ ಎಂದರು.</p>.<p>ಕೇಂದ್ರ ಸಚಿವ ವಿ. ಸೋಮಣ್ಣ, ಸಚಿವರಾದ ಎಂ.ಬಿ. ಪಾಟೀಲ, ಜಿ.ಪರಮೇಶ್ವರ, ಶಾಸಕ ಸಿ.ಬಿ. ಸುರೇಶ್ ಬಾಬು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ನಿಖಿಲ್ ಕುಮಾರಸ್ವಾಮಿ, ಮಾಜಿ ಸಚಿವ ಜೆ.ಸಿ. ಮಾಧುಸ್ವಾಮಿ, ಶಾಸಕ ಜ್ಯೋತಿ ಗಣೇಶ್, ಮಾಜಿ ಸಂಸದ ಜಿ.ಎಸ್. ಬಸವರಾಜು ಭಾಗವಹಿಸಲ್ಲಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260508-17-591129790</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>