<p>ಚಿಕ್ಕನಾಯಕನಹಳ್ಳಿ: ತಾಲ್ಲೂಕಿನ ಕೆಎಸ್ಆರ್ಟಿಸಿ ಡಿಪೋ ನಿರ್ಮಾಣಕ್ಕಾಗಿ ₹7 ಕೋಟಿ ಅನುದಾನ ಮಂಜೂರಾಗಿದೆ. ಆರು ತಿಂಗಳ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸುವುದಾಗಿ ಗುತ್ತಿಗೆದಾರರು ಭರವಸೆ ನೀಡಿದ್ದಾರೆ ಎಂದು ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಸಿ.ಡಿ. ಚಂದ್ರಶೇಖರ್ ತಿಳಿಸಿದರು.</p>.<p>ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಲಾಗಿದ್ದ ಗ್ಯಾರಂಟಿ ಯೋಜನೆಗಳ ತಾಲ್ಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.</p>.<p>ತಾಲ್ಲೂಕಿನಲ್ಲಿ ಸ್ವತಂತ್ರ ಡಿಪೋ ನಿರ್ಮಾಣವಾದರೆ ಗ್ರಾಮೀಣ ಭಾಗಗಳಿಗೆ ಹೆಚ್ಚಿನ ಬಸ್ ಸೌಲಭ್ಯ ಕಲ್ಪಿಸಲು ಸಾಧ್ಯವಾಗುತ್ತದೆ. ಪ್ರಸ್ತುತ ತುರುವೇಕೆರೆ ಡಿಪೋದಲ್ಲಿ ಸುಮಾರು 150 ಬಸ್ ಕೊರತೆಯಿದೆ. ತಾಲ್ಲೂಕಿನಲ್ಲಿ ಡಿಪೋ ಕಾರ್ಯಾರಂಭ ಮಾಡಿದರೆ ಸಮರ್ಪಕ ಸಾರಿಗೆ ವ್ಯವಸ್ಥೆ ಜಾರಿಗೆ ಬರಲಿದೆ ಎಂದು ಆಶಯ ವ್ಯಕ್ತಪಡಿಸಿದರು.</p>.<p>ಅನ್ನಭಾಗ್ಯ ಯೋಜನೆಗೆ ರಾಜ್ಯ ಸರ್ಕಾರದೊಂದಿಗೆ ಕೇಂದ್ರ ಸರ್ಕಾರವೂ ಸಹಕರಿಸುತ್ತಿದ್ದು, ಫಲಾನುಭವಿಗಳಿಗೆ ಸೌಲಭ್ಯ ಹೆಚ್ಚುತ್ತಿವೆ. ತೆರಿಗೆ ಪಾವತಿಸುವ ಬಡ ಜನರಿಗೂ ಈ ಯೋಜನೆಗಳು ಆಸರೆಯಾಗಿದೆ. ಯಾವುದೇ ಅರ್ಹ ಫಲಾನುಭವಿ ಯೋಜನೆಯಿಂದ ವಂಚಿತರಾಗದಂತೆ ಎಚ್ಚರಿಕೆ ವಹಿಸಬೇಕು. ಹೊಸದಾಗಿ ನೋಂದಣಿ ಮಾಡಿಕೊಳ್ಳುವವರ ದಾಖಲೆಗಳನ್ನು ಸಮರ್ಪಕವಾಗಿ ಪರಿಶೀಲಿಸಿ ಶೀಘ್ರವಾಗಿ ನೋಂದಣಿ ಪ್ರಕ್ರಿಯೆ ಪೂರ್ಣಗೊಳಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.</p>.<p>ತಾಲ್ಲೂಕು ವ್ಯಾಪ್ತಿಯಲ್ಲಿ 30 ಸಾರಿಗೆ ವಾಹನಗಳಿದ್ದು, ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ನಿಗದಿತ ಸಮಯಕ್ಕೆ ಬಸ್ ಸಂಚರಿಸಬೇಕು. ಶಾಲಾ-ಕಾಲೇಜು ಮಕ್ಕಳಿಗೆ ಯಾವುದೇ ತೊಂದರೆಯಾಗದಂತೆ ನಿಗಾ ವಹಿಸಬೇಕು. ಗ್ಯಾರಂಟಿ ಯೋಜನೆಗಳಿಂದ ಗ್ರಾಮೀಣ ಭಾಗದ ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗುತ್ತಿರುವುದು ಉತ್ತಮ ಬೆಳವಣಿಗೆ ಎಂದರು.</p>.<p>ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಡಿ. ದೊಡ್ಡಸಿದ್ದಯ್ಯ ಮಾತನಾಡಿ, ಗೃಹಲಕ್ಷ್ಮಿ ಯೋಜನೆಯಡಿ ತಾಂತ್ರಿಕ ದೋಷದಿಂದ ಹಣ ಸಂದಾಯವಾಗದ ಪ್ರಕರಣಗಳನ್ನು ಕೂಡಲೇ ಗುರುತಿಸಿ, ಪಡಿತರ ಚೀಟಿ ಸಂಖ್ಯೆ ಆಧರಿಸಿ ಸಮಸ್ಯೆ ಬಗೆಹರಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ತಾಕೀತು ಮಾಡಿದರು.</p>.<p>ಸಮಿತಿಯ ಉಪಾಧ್ಯಕ್ಷ ಎನ್. ಪಾಂಡುರಂಗಯ್ಯ, ಸಮಿತಿ ಸದಸ್ಯರು, ವ್ಯವಸ್ಥಾಪಕ ಬಸವರಾಜು, ವಿಷಯ ನಿರ್ವಾಹಕ ಮಧು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260505-17-1649744770</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಕ್ಕನಾಯಕನಹಳ್ಳಿ: ತಾಲ್ಲೂಕಿನ ಕೆಎಸ್ಆರ್ಟಿಸಿ ಡಿಪೋ ನಿರ್ಮಾಣಕ್ಕಾಗಿ ₹7 ಕೋಟಿ ಅನುದಾನ ಮಂಜೂರಾಗಿದೆ. ಆರು ತಿಂಗಳ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸುವುದಾಗಿ ಗುತ್ತಿಗೆದಾರರು ಭರವಸೆ ನೀಡಿದ್ದಾರೆ ಎಂದು ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಸಿ.ಡಿ. ಚಂದ್ರಶೇಖರ್ ತಿಳಿಸಿದರು.</p>.<p>ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಲಾಗಿದ್ದ ಗ್ಯಾರಂಟಿ ಯೋಜನೆಗಳ ತಾಲ್ಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.</p>.<p>ತಾಲ್ಲೂಕಿನಲ್ಲಿ ಸ್ವತಂತ್ರ ಡಿಪೋ ನಿರ್ಮಾಣವಾದರೆ ಗ್ರಾಮೀಣ ಭಾಗಗಳಿಗೆ ಹೆಚ್ಚಿನ ಬಸ್ ಸೌಲಭ್ಯ ಕಲ್ಪಿಸಲು ಸಾಧ್ಯವಾಗುತ್ತದೆ. ಪ್ರಸ್ತುತ ತುರುವೇಕೆರೆ ಡಿಪೋದಲ್ಲಿ ಸುಮಾರು 150 ಬಸ್ ಕೊರತೆಯಿದೆ. ತಾಲ್ಲೂಕಿನಲ್ಲಿ ಡಿಪೋ ಕಾರ್ಯಾರಂಭ ಮಾಡಿದರೆ ಸಮರ್ಪಕ ಸಾರಿಗೆ ವ್ಯವಸ್ಥೆ ಜಾರಿಗೆ ಬರಲಿದೆ ಎಂದು ಆಶಯ ವ್ಯಕ್ತಪಡಿಸಿದರು.</p>.<p>ಅನ್ನಭಾಗ್ಯ ಯೋಜನೆಗೆ ರಾಜ್ಯ ಸರ್ಕಾರದೊಂದಿಗೆ ಕೇಂದ್ರ ಸರ್ಕಾರವೂ ಸಹಕರಿಸುತ್ತಿದ್ದು, ಫಲಾನುಭವಿಗಳಿಗೆ ಸೌಲಭ್ಯ ಹೆಚ್ಚುತ್ತಿವೆ. ತೆರಿಗೆ ಪಾವತಿಸುವ ಬಡ ಜನರಿಗೂ ಈ ಯೋಜನೆಗಳು ಆಸರೆಯಾಗಿದೆ. ಯಾವುದೇ ಅರ್ಹ ಫಲಾನುಭವಿ ಯೋಜನೆಯಿಂದ ವಂಚಿತರಾಗದಂತೆ ಎಚ್ಚರಿಕೆ ವಹಿಸಬೇಕು. ಹೊಸದಾಗಿ ನೋಂದಣಿ ಮಾಡಿಕೊಳ್ಳುವವರ ದಾಖಲೆಗಳನ್ನು ಸಮರ್ಪಕವಾಗಿ ಪರಿಶೀಲಿಸಿ ಶೀಘ್ರವಾಗಿ ನೋಂದಣಿ ಪ್ರಕ್ರಿಯೆ ಪೂರ್ಣಗೊಳಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.</p>.<p>ತಾಲ್ಲೂಕು ವ್ಯಾಪ್ತಿಯಲ್ಲಿ 30 ಸಾರಿಗೆ ವಾಹನಗಳಿದ್ದು, ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ನಿಗದಿತ ಸಮಯಕ್ಕೆ ಬಸ್ ಸಂಚರಿಸಬೇಕು. ಶಾಲಾ-ಕಾಲೇಜು ಮಕ್ಕಳಿಗೆ ಯಾವುದೇ ತೊಂದರೆಯಾಗದಂತೆ ನಿಗಾ ವಹಿಸಬೇಕು. ಗ್ಯಾರಂಟಿ ಯೋಜನೆಗಳಿಂದ ಗ್ರಾಮೀಣ ಭಾಗದ ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗುತ್ತಿರುವುದು ಉತ್ತಮ ಬೆಳವಣಿಗೆ ಎಂದರು.</p>.<p>ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಡಿ. ದೊಡ್ಡಸಿದ್ದಯ್ಯ ಮಾತನಾಡಿ, ಗೃಹಲಕ್ಷ್ಮಿ ಯೋಜನೆಯಡಿ ತಾಂತ್ರಿಕ ದೋಷದಿಂದ ಹಣ ಸಂದಾಯವಾಗದ ಪ್ರಕರಣಗಳನ್ನು ಕೂಡಲೇ ಗುರುತಿಸಿ, ಪಡಿತರ ಚೀಟಿ ಸಂಖ್ಯೆ ಆಧರಿಸಿ ಸಮಸ್ಯೆ ಬಗೆಹರಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ತಾಕೀತು ಮಾಡಿದರು.</p>.<p>ಸಮಿತಿಯ ಉಪಾಧ್ಯಕ್ಷ ಎನ್. ಪಾಂಡುರಂಗಯ್ಯ, ಸಮಿತಿ ಸದಸ್ಯರು, ವ್ಯವಸ್ಥಾಪಕ ಬಸವರಾಜು, ವಿಷಯ ನಿರ್ವಾಹಕ ಮಧು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260505-17-1649744770</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>