<p><em>ಮಂಜುನಾಥ್</em></p>.<p>ಚಿಕ್ಕನಾಯಕನಹಳ್ಳಿ: ಚಿಕ್ಕನಾಯಕನಹಳ್ಳಿ ಪಟ್ಟಣವು ವೇಗವಾಗಿ ಬೆಳೆಯುತ್ತಿದೆ. ಇದರ ಜೊತೆಗೆ ಪಟ್ಟಣದಲ್ಲಿ ಕಳೆದ ಕೆಲವು ದಿನಗಳಿಂದ ರಸ್ತೆ ಅಪಘಾತಗಳ ಸಂಖ್ಯೆಯೂ ಮಿತಿಮೀರಿದ್ದು, ಜನಸಾಮಾನ್ಯರು ರಸ್ತೆಗಿಳಿಯಲು ಆತಂಕ ವ್ಯಕ್ತಪಡಿಸುತ್ತಿದ್ದಾರೆ.</p>.<p>ಹೆಚ್ಚುತ್ತಿರುವ ವಾಹನಗಳ ದಟ್ಟಣೆಯಿಂದಾಗಿ ಪಟ್ಟಣವು ಅಪಘಾತಗಳ ಕೇಂದ್ರವಾಗುತ್ತಿದೆ ಎಂದು ಸ್ಥಳೀಯರು ದೂರುತ್ತಾರೆ.</p>.<p>‘ವಾಹನ ಸವಾರರು ರಸ್ತೆ ಸುರಕ್ಷತಾ ನಿಯಮಗಳನ್ನು ಗಾಳಿಗೆ ತೂರಿ ವಾಹನಗಳನ್ನು ಚಲಾಯಿಸುತ್ತಿರುವುದು ಮತ್ತು ಈ ಬಗ್ಗೆ ಸಂಚಾರ ಪೊಲೀಸರು ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ನಿರ್ಲಕ್ಷ್ಯತೆಯಿಂದಾಗಿ ಜನರು ಜೀವ ಕೈಯಲ್ಲಿಡು ಓಡಾಡುವ ಅನಿವಾರ್ಯತೆ ಎದುರಾಗಿದೆ’ ಎಂದು ಸ್ಥಳೀಯರು ಆರೋಪಿಸುತ್ತಾರೆ.</p>.<p>ಪಟ್ಟಣದಲ್ಲಿ ಕೇವಲ ಒಂದು ವಾರದಲ್ಲಿ 3 ಅಪಘಾತ ಪ್ರಕರಣಗಳು ದಾಖಲಾಗಿವೆ. ವೇಗದ ಮತ್ತು ಚಾಲಕರ ಅಜಾಗರೂಕತೆಯಿಂದ ಅಪಘಾತಗಳು ಸಂಭವಿಸುತ್ತಿವೆ. ಪಟ್ಟಣದ ಹೃದಯ ಭಾಗದಲ್ಲಿ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ 150 ಎ ಅಪಘಾತಗಳ ಕೇಂದ್ರ ಸ್ಥಾನವಾಗಿದೆ. ಹೆದ್ದಾರಿಯ ಪ್ರಮುಖ ತಿರುವುಗಳಲ್ಲಿ ಹಾಗೂ ಜನನಿಬಿಡ ಕೇಂದ್ರಗಳಲ್ಲಿ ‘ವೇಗ ನಿಯಂತ್ರಕ’ ಅಳವಡಿಸದಿರುವುದು ದುರಂತಕ್ಕೆ ದಾರಿ ಮಾಡಿಕೊಡುತ್ತಿದೆ. ಈ ಕುರಿತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಿರುದ್ಧ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಾರೆ.</p>.<p>ಸರಕು ಸಾಗಣೆ ವಾಹನಗಳು ಪಟ್ಟಣದ ಕಿರಿದಾದ ರಸ್ತೆಗಳಲ್ಲಿ ಅತಿ ವೇಗವಾಗಿ ಚಲಿಸುತ್ತಿವೆ. ಸಂಚಾರಿ ನಿಯಮಗಳನ್ನು ಪಾಲಿಸದಿರುವುದು ಅಪಘಾತ ಹೆಚ್ಚಳಕ್ಕೆ ಕಾರಣವಾಗಿದೆ. ಪಟ್ಟಣದಲ್ಲಿ ಸಂಚಾರಿ ಪೋಲಿಸರ ಕಣ್ಗಾವಲು ಕಡಿಮೆಯಾಗಿದೆ ಎಂಬುದು ಸ್ಥಳೀಯರ ವಾದ. ಇನ್ನಾದರೂ ಈ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಂಡು ಕ್ರಮ ಕೈಗೊಳ್ಳಬೇಕು ಎಂಬುದು ಈ ಭಾಗದ ಜನರ ಒತ್ತಾಯ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260323-17-1427537663</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><em>ಮಂಜುನಾಥ್</em></p>.<p>ಚಿಕ್ಕನಾಯಕನಹಳ್ಳಿ: ಚಿಕ್ಕನಾಯಕನಹಳ್ಳಿ ಪಟ್ಟಣವು ವೇಗವಾಗಿ ಬೆಳೆಯುತ್ತಿದೆ. ಇದರ ಜೊತೆಗೆ ಪಟ್ಟಣದಲ್ಲಿ ಕಳೆದ ಕೆಲವು ದಿನಗಳಿಂದ ರಸ್ತೆ ಅಪಘಾತಗಳ ಸಂಖ್ಯೆಯೂ ಮಿತಿಮೀರಿದ್ದು, ಜನಸಾಮಾನ್ಯರು ರಸ್ತೆಗಿಳಿಯಲು ಆತಂಕ ವ್ಯಕ್ತಪಡಿಸುತ್ತಿದ್ದಾರೆ.</p>.<p>ಹೆಚ್ಚುತ್ತಿರುವ ವಾಹನಗಳ ದಟ್ಟಣೆಯಿಂದಾಗಿ ಪಟ್ಟಣವು ಅಪಘಾತಗಳ ಕೇಂದ್ರವಾಗುತ್ತಿದೆ ಎಂದು ಸ್ಥಳೀಯರು ದೂರುತ್ತಾರೆ.</p>.<p>‘ವಾಹನ ಸವಾರರು ರಸ್ತೆ ಸುರಕ್ಷತಾ ನಿಯಮಗಳನ್ನು ಗಾಳಿಗೆ ತೂರಿ ವಾಹನಗಳನ್ನು ಚಲಾಯಿಸುತ್ತಿರುವುದು ಮತ್ತು ಈ ಬಗ್ಗೆ ಸಂಚಾರ ಪೊಲೀಸರು ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ನಿರ್ಲಕ್ಷ್ಯತೆಯಿಂದಾಗಿ ಜನರು ಜೀವ ಕೈಯಲ್ಲಿಡು ಓಡಾಡುವ ಅನಿವಾರ್ಯತೆ ಎದುರಾಗಿದೆ’ ಎಂದು ಸ್ಥಳೀಯರು ಆರೋಪಿಸುತ್ತಾರೆ.</p>.<p>ಪಟ್ಟಣದಲ್ಲಿ ಕೇವಲ ಒಂದು ವಾರದಲ್ಲಿ 3 ಅಪಘಾತ ಪ್ರಕರಣಗಳು ದಾಖಲಾಗಿವೆ. ವೇಗದ ಮತ್ತು ಚಾಲಕರ ಅಜಾಗರೂಕತೆಯಿಂದ ಅಪಘಾತಗಳು ಸಂಭವಿಸುತ್ತಿವೆ. ಪಟ್ಟಣದ ಹೃದಯ ಭಾಗದಲ್ಲಿ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ 150 ಎ ಅಪಘಾತಗಳ ಕೇಂದ್ರ ಸ್ಥಾನವಾಗಿದೆ. ಹೆದ್ದಾರಿಯ ಪ್ರಮುಖ ತಿರುವುಗಳಲ್ಲಿ ಹಾಗೂ ಜನನಿಬಿಡ ಕೇಂದ್ರಗಳಲ್ಲಿ ‘ವೇಗ ನಿಯಂತ್ರಕ’ ಅಳವಡಿಸದಿರುವುದು ದುರಂತಕ್ಕೆ ದಾರಿ ಮಾಡಿಕೊಡುತ್ತಿದೆ. ಈ ಕುರಿತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಿರುದ್ಧ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಾರೆ.</p>.<p>ಸರಕು ಸಾಗಣೆ ವಾಹನಗಳು ಪಟ್ಟಣದ ಕಿರಿದಾದ ರಸ್ತೆಗಳಲ್ಲಿ ಅತಿ ವೇಗವಾಗಿ ಚಲಿಸುತ್ತಿವೆ. ಸಂಚಾರಿ ನಿಯಮಗಳನ್ನು ಪಾಲಿಸದಿರುವುದು ಅಪಘಾತ ಹೆಚ್ಚಳಕ್ಕೆ ಕಾರಣವಾಗಿದೆ. ಪಟ್ಟಣದಲ್ಲಿ ಸಂಚಾರಿ ಪೋಲಿಸರ ಕಣ್ಗಾವಲು ಕಡಿಮೆಯಾಗಿದೆ ಎಂಬುದು ಸ್ಥಳೀಯರ ವಾದ. ಇನ್ನಾದರೂ ಈ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಂಡು ಕ್ರಮ ಕೈಗೊಳ್ಳಬೇಕು ಎಂಬುದು ಈ ಭಾಗದ ಜನರ ಒತ್ತಾಯ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260323-17-1427537663</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>