<p>ಚಿಕ್ಕನಾಯಕನಹಳ್ಳಿ: ಕಾರ್ಮಿಕರು ತಮ್ಮ ಜೀವನವನ್ನು ಕೇವಲ ದುಡಿಮೆಗೆ ಸೀಮಿತಗೊಳಿಸದೆ, ಆರೋಗ್ಯದ ಕಡೆಗೂ ಹೆಚ್ಚಿನ ಗಮನ ಹರಿಸಬೇಕು. ಕಾರ್ಮಿಕರ ಹಿತದೃಷ್ಟಿಯಿಂದ ಸ್ವಂತ ಕಟ್ಟಡ ನಿರ್ಮಾಣಕ್ಕಾಗಿ ಸಂಘದ ಹೆಸರಿನಲ್ಲಿ ಒಂದು ವಾರದೊಳಗೆ ನೋಂದಣಿ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು ಎಂದು ಶಾಸಕ ಸಿ.ಬಿ. ಸುರೇಶ್ ಬಾಬು ಭರವಸೆ ನೀಡಿದರು.</p>.<p>ಪಟ್ಟಣದ ಮಾರುಕಟ್ಟೆ ಆವರಣದ ವೆಂಕಟರಮಣ ದೇವಾಲಯದ ಬಳಿ ಶುಕ್ರವಾರ ತಾಲ್ಲೂಕು ಕಟ್ಟಡ ಕಾರ್ಮಿಕರ ಸಂಘದಿಂದ ನಡೆದ ಕಾರ್ಮಿಕ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ಕಾರ್ಮಿಕ ಇಲಾಖೆಯು ಆಹಾರ ಕಿಟ್ ಸೇರಿದಂತೆ ಹತ್ತು ಹಲವು ಸೌಲಭ್ಯಗಳನ್ನು ನೀಡುತ್ತಿದೆ. ಕಾರ್ಮಿಕರು ಕಡ್ಡಾಯವಾಗಿ ಕಾರ್ಮಿಕ ಕಾರ್ಡ್ ಪಡೆದುಕೊಳ್ಳಬೇಕು ಹಾಗೂ ಅದನ್ನು ಪ್ರತಿವರ್ಷ ನವೀಕರಿಸಿಕೊಳ್ಳುವ ಮೂಲಕ ಸರ್ಕಾರದ ಸವಲತ್ತುಗಳನ್ನು ಪಡೆಯಬೇಕು ಎಂದರು.</p>.<p>ತಾಲ್ಲೂಕು ಕಟ್ಟಡ ಕಾರ್ಮಿಕ ಘಟಕದ ಅಧ್ಯಕ್ಷ ಕುಮಾರ್ ಮಾತನಾಡಿ, ತಾಲ್ಲೂಕಿನಲ್ಲಿ 13 ಸಾವಿರಕ್ಕೂ ಹೆಚ್ಚು ಕಾರ್ಮಿಕರಿದ್ದರೂ, ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಬಾರದಿರುವುದು ವಿಷಾದನೀಯ. ವರ್ಷಕ್ಕೊಮ್ಮೆ ನಡೆಯುವ ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಮಾಹಿತಿ ಪಡೆಯುವುದು ಅತ್ಯಗತ್ಯ ಎಂದರು.</p>.<p>ಖಜಾಂಚಿ ರವಿಕುಮಾರ್ ಪಲ್ಲಕ್ಕಿ ಮಾತನಾಡಿ, ಕಾರ್ಮಿಕರ ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡುವಂತೆ ಹಾಗೂ ವಿದ್ಯಾರ್ಥಿ ವೇತನದ ಸೌಲಭ್ಯ ಪಡೆಯುವಲ್ಲಿ ಎದುರಾಗುತ್ತಿರುವ ಅಡೆತಡೆಗಳನ್ನು ನಿವಾರಿಸಿಕೊಳ್ಳುವಂತೆ ಸಲಹೆ ನೀಡಿದರು.</p>.<p>ಸಮಾರಂಭದಲ್ಲಿ ಕಾರ್ಮಿಕರಾದ ವೀರಲಕ್ಕಮ್ಮ ಬಡಾವಣೆಯ ರಂಗಯ್ಯ, ಮಹಾಲಕ್ಷ್ಮಿ ಬಡಾವಣೆಯ ಜಗದೀಶ್, ನಡುವನಹಳ್ಳಿಯ ದೇವರಾಜು ಅವರನ್ನು ಸತ್ಕರಿಸಲಾಯಿತು. ಎಸ್ಎಸ್ಎಲ್ಸಿ, ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಕಾರ್ಮಿಕರ ಮಕ್ಕಳನ್ನು ಪುರಸ್ಕರಿಸಲಾಯಿತು.</p>.<p>ಗ್ಯಾರಂಟಿ ಯೋಜನಾ ಸಮಿತಿ ತಾಲ್ಲೂಕು ಅಧ್ಯಕ್ಷ ಸಿ.ಡಿ. ಚಂದ್ರಶೇಖರ್ ಮಾತನಾಡಿದರು. ಸಂಘದ ಪ್ರಮುಖರಾದ ಸಿ.ಎಸ್. ನಾಗರಾಜು, ಸಿ.ಜಿ. ಪ್ರಕಾಶ್, ಮೂರ್ತಣ್ಣ, ಯುವರಾಜು, ವಿಶ್ವನಾಥ್, ಶಂಕರ್ ನಾರಾಯಣ್, ಎ.ಎಂ. ಸೋಮಶೇಖರ್ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260502-17-1612724972</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಕ್ಕನಾಯಕನಹಳ್ಳಿ: ಕಾರ್ಮಿಕರು ತಮ್ಮ ಜೀವನವನ್ನು ಕೇವಲ ದುಡಿಮೆಗೆ ಸೀಮಿತಗೊಳಿಸದೆ, ಆರೋಗ್ಯದ ಕಡೆಗೂ ಹೆಚ್ಚಿನ ಗಮನ ಹರಿಸಬೇಕು. ಕಾರ್ಮಿಕರ ಹಿತದೃಷ್ಟಿಯಿಂದ ಸ್ವಂತ ಕಟ್ಟಡ ನಿರ್ಮಾಣಕ್ಕಾಗಿ ಸಂಘದ ಹೆಸರಿನಲ್ಲಿ ಒಂದು ವಾರದೊಳಗೆ ನೋಂದಣಿ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು ಎಂದು ಶಾಸಕ ಸಿ.ಬಿ. ಸುರೇಶ್ ಬಾಬು ಭರವಸೆ ನೀಡಿದರು.</p>.<p>ಪಟ್ಟಣದ ಮಾರುಕಟ್ಟೆ ಆವರಣದ ವೆಂಕಟರಮಣ ದೇವಾಲಯದ ಬಳಿ ಶುಕ್ರವಾರ ತಾಲ್ಲೂಕು ಕಟ್ಟಡ ಕಾರ್ಮಿಕರ ಸಂಘದಿಂದ ನಡೆದ ಕಾರ್ಮಿಕ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ಕಾರ್ಮಿಕ ಇಲಾಖೆಯು ಆಹಾರ ಕಿಟ್ ಸೇರಿದಂತೆ ಹತ್ತು ಹಲವು ಸೌಲಭ್ಯಗಳನ್ನು ನೀಡುತ್ತಿದೆ. ಕಾರ್ಮಿಕರು ಕಡ್ಡಾಯವಾಗಿ ಕಾರ್ಮಿಕ ಕಾರ್ಡ್ ಪಡೆದುಕೊಳ್ಳಬೇಕು ಹಾಗೂ ಅದನ್ನು ಪ್ರತಿವರ್ಷ ನವೀಕರಿಸಿಕೊಳ್ಳುವ ಮೂಲಕ ಸರ್ಕಾರದ ಸವಲತ್ತುಗಳನ್ನು ಪಡೆಯಬೇಕು ಎಂದರು.</p>.<p>ತಾಲ್ಲೂಕು ಕಟ್ಟಡ ಕಾರ್ಮಿಕ ಘಟಕದ ಅಧ್ಯಕ್ಷ ಕುಮಾರ್ ಮಾತನಾಡಿ, ತಾಲ್ಲೂಕಿನಲ್ಲಿ 13 ಸಾವಿರಕ್ಕೂ ಹೆಚ್ಚು ಕಾರ್ಮಿಕರಿದ್ದರೂ, ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಬಾರದಿರುವುದು ವಿಷಾದನೀಯ. ವರ್ಷಕ್ಕೊಮ್ಮೆ ನಡೆಯುವ ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಮಾಹಿತಿ ಪಡೆಯುವುದು ಅತ್ಯಗತ್ಯ ಎಂದರು.</p>.<p>ಖಜಾಂಚಿ ರವಿಕುಮಾರ್ ಪಲ್ಲಕ್ಕಿ ಮಾತನಾಡಿ, ಕಾರ್ಮಿಕರ ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡುವಂತೆ ಹಾಗೂ ವಿದ್ಯಾರ್ಥಿ ವೇತನದ ಸೌಲಭ್ಯ ಪಡೆಯುವಲ್ಲಿ ಎದುರಾಗುತ್ತಿರುವ ಅಡೆತಡೆಗಳನ್ನು ನಿವಾರಿಸಿಕೊಳ್ಳುವಂತೆ ಸಲಹೆ ನೀಡಿದರು.</p>.<p>ಸಮಾರಂಭದಲ್ಲಿ ಕಾರ್ಮಿಕರಾದ ವೀರಲಕ್ಕಮ್ಮ ಬಡಾವಣೆಯ ರಂಗಯ್ಯ, ಮಹಾಲಕ್ಷ್ಮಿ ಬಡಾವಣೆಯ ಜಗದೀಶ್, ನಡುವನಹಳ್ಳಿಯ ದೇವರಾಜು ಅವರನ್ನು ಸತ್ಕರಿಸಲಾಯಿತು. ಎಸ್ಎಸ್ಎಲ್ಸಿ, ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಕಾರ್ಮಿಕರ ಮಕ್ಕಳನ್ನು ಪುರಸ್ಕರಿಸಲಾಯಿತು.</p>.<p>ಗ್ಯಾರಂಟಿ ಯೋಜನಾ ಸಮಿತಿ ತಾಲ್ಲೂಕು ಅಧ್ಯಕ್ಷ ಸಿ.ಡಿ. ಚಂದ್ರಶೇಖರ್ ಮಾತನಾಡಿದರು. ಸಂಘದ ಪ್ರಮುಖರಾದ ಸಿ.ಎಸ್. ನಾಗರಾಜು, ಸಿ.ಜಿ. ಪ್ರಕಾಶ್, ಮೂರ್ತಣ್ಣ, ಯುವರಾಜು, ವಿಶ್ವನಾಥ್, ಶಂಕರ್ ನಾರಾಯಣ್, ಎ.ಎಂ. ಸೋಮಶೇಖರ್ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260502-17-1612724972</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>