<p>ಚಿಕ್ಕನಾಯಕನಹಳ್ಳಿ: ಯೋಗವು ಕೇವಲ ದೈಹಿಕ ವ್ಯಾಯಾಮಕ್ಕೆ ಸೀಮಿತವಲ್ಲ. ಅದು ಒತ್ತಡದ ಬದುಕಿನಲ್ಲಿ ನೆಮ್ಮದಿ ಮತ್ತು ಆರೋಗ್ಯವನ್ನು ಸಮತೋಲನದಲ್ಲಿಡುವ ಜೀವನ ಕಲೆ ಎಂದು ರಾಮಕೃಷ್ಣ ಯೋಗ ಕೇಂದ್ರದ ಸಂಸ್ಥಾಪಕ ಪ್ರಶಾಂತ್ ಕುಮಾರ್ ಹೇಳಿದರು.</p>.<p>ತಾಲ್ಲೂಕಿನ ಕಂದಿಕೆರೆ ಹೋಬಳಿ ತೀರ್ಥಪುರದ ವಜ್ರ ತೀರ್ಥರಾಮೇಶ್ವರ ಸನ್ನಿಧಿಯಲ್ಲಿ ಭಾನುವಾರ ರಾಮಕೃಷ್ಣ ಯೋಗ ಕೇಂದ್ರದಿಂದ ಆಯೋಜಿಸಲಾಗಿದ್ದ ಯೋಗ ತರಬೇತಿ ಹಾಗೂ ನಮ್ಮ ಆಹಾರ-ನಮ್ಮ ಆರೋಗ್ಯ ಉಪನ್ಯಾಸದಲ್ಲಿ ಮಾತನಾಡಿದರು.</p>.<p>ದೈನಂದಿನ ಆಹಾರ ಪದ್ಧತಿ ಶರೀರದ ಮೇಲೆ ಬೀರುವ ಧನಾತ್ಮಕ ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಲಾಯಿತು. ಧ್ಯಾನ ಮತ್ತು ಶಿಥಿಲೀಕರಣ ತಂತ್ರಗಳ ಮೂಲಕ ಮನಸ್ಸಿನ ಒತ್ತಡ ನಿವಾರಿಸುವ ವಿಧಾನಗಳನ್ನು ಪ್ರಾಯೋಗಿಕವಾಗಿ ಕಲಿಸುವುದರ ಜತೆಗೆ ಕ್ರೀಡಾ ಚಟುವಟಿಕೆಗಳ ಮೂಲಕ ಯೋಗ ಬಂಧುಗಳಲ್ಲಿ ಉತ್ಸಾಹ ತುಂಬಲಾಯಿತು.</p>.<p>ಯೋಗ ಗುರು ಪುಟ್ಟಮಾದಪ್ಪ ವಿವಿಧ ಯೋಗಾಸನಗಳ ಪ್ರಾಮುಖ್ಯತೆ ವಿವರಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260414-17-2089540867</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಕ್ಕನಾಯಕನಹಳ್ಳಿ: ಯೋಗವು ಕೇವಲ ದೈಹಿಕ ವ್ಯಾಯಾಮಕ್ಕೆ ಸೀಮಿತವಲ್ಲ. ಅದು ಒತ್ತಡದ ಬದುಕಿನಲ್ಲಿ ನೆಮ್ಮದಿ ಮತ್ತು ಆರೋಗ್ಯವನ್ನು ಸಮತೋಲನದಲ್ಲಿಡುವ ಜೀವನ ಕಲೆ ಎಂದು ರಾಮಕೃಷ್ಣ ಯೋಗ ಕೇಂದ್ರದ ಸಂಸ್ಥಾಪಕ ಪ್ರಶಾಂತ್ ಕುಮಾರ್ ಹೇಳಿದರು.</p>.<p>ತಾಲ್ಲೂಕಿನ ಕಂದಿಕೆರೆ ಹೋಬಳಿ ತೀರ್ಥಪುರದ ವಜ್ರ ತೀರ್ಥರಾಮೇಶ್ವರ ಸನ್ನಿಧಿಯಲ್ಲಿ ಭಾನುವಾರ ರಾಮಕೃಷ್ಣ ಯೋಗ ಕೇಂದ್ರದಿಂದ ಆಯೋಜಿಸಲಾಗಿದ್ದ ಯೋಗ ತರಬೇತಿ ಹಾಗೂ ನಮ್ಮ ಆಹಾರ-ನಮ್ಮ ಆರೋಗ್ಯ ಉಪನ್ಯಾಸದಲ್ಲಿ ಮಾತನಾಡಿದರು.</p>.<p>ದೈನಂದಿನ ಆಹಾರ ಪದ್ಧತಿ ಶರೀರದ ಮೇಲೆ ಬೀರುವ ಧನಾತ್ಮಕ ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಲಾಯಿತು. ಧ್ಯಾನ ಮತ್ತು ಶಿಥಿಲೀಕರಣ ತಂತ್ರಗಳ ಮೂಲಕ ಮನಸ್ಸಿನ ಒತ್ತಡ ನಿವಾರಿಸುವ ವಿಧಾನಗಳನ್ನು ಪ್ರಾಯೋಗಿಕವಾಗಿ ಕಲಿಸುವುದರ ಜತೆಗೆ ಕ್ರೀಡಾ ಚಟುವಟಿಕೆಗಳ ಮೂಲಕ ಯೋಗ ಬಂಧುಗಳಲ್ಲಿ ಉತ್ಸಾಹ ತುಂಬಲಾಯಿತು.</p>.<p>ಯೋಗ ಗುರು ಪುಟ್ಟಮಾದಪ್ಪ ವಿವಿಧ ಯೋಗಾಸನಗಳ ಪ್ರಾಮುಖ್ಯತೆ ವಿವರಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260414-17-2089540867</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>