ತುಮಕೂರು: ಕರ್ನಾಟಕ ರಾಜ್ಯ ಸರ್ಕಾರ ಮಹಾಮಂಡಳಿಯಿಂದ ನೀಡುವ ಸಹಕಾರಿ ರತ್ನ ಪ್ರಶಸ್ತಿಗೆ ತುಮಕೂರಿನ ಅನ್ನಪೂರ್ಣ ವೆಂಕಟನಂಜಪ್ಪ ಆಯ್ಕೆಯಾಗಿದ್ದಾರೆ.
ಜಿಲ್ಲಾ ಮಹಿಳಾ ವಿವಿಧೋದ್ದೇಶ ಸಂಘವನ್ನು 35ನೇ ವರ್ಷದಲ್ಲಿ ಸ್ಥಾಪಿಸಿ, ಈ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದಾರೆ. ಜಿಲ್ಲಾ ಸಹಕಾರ ಯೂನಿಯನ್ಗೆ 3 ಬಾರಿ ಆಯ್ಕೆಯಾಗಿ, ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.
ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನ ನಾಮನಿರ್ದೇಶಿತ ನಿರ್ದೇಶಕರಾಗಿಯೂ ಕಾರ್ಯನಿರ್ವಹಿಸಿದ್ದಾರೆ. ಕೆಎನ್ಆರ್ ಸೌಹಾರ್ದ ಸಹಕಾರ ಸಂಘದ ಪ್ರವರ್ತಕರಲ್ಲಿ ಒಬ್ಬರಾಗಿ, ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದಾರೆ. ಭುವನೇಶ್ವರಿ ಮಹಿಳಾ ವಿವಿಧೋದ್ದೇಶ ಸಹಕಾರ ಸಂಘದ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.