ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ.ಡಿ.ಎಸ್.ಸುರೇಶ್ ಮಾತನಾಡಿ, ‘ಕಾಲೇಜಿಗೆ ಕರ್ನಾಟಕದ ಅತ್ಯುತ್ತಮ ಎಂಜಿನಿಯರಿಂಗ್ ಕಾಲೇಜು– ಗ್ರಾಮೀಣ ಪ್ರದೇಶ, ಭಾರತದ ಶ್ರೇಷ್ಠ ಗ್ರಾಮೀಣ ಎಂಜಿನಿಯರಿಂಗ್ ಕಾಲೇಜು ಪ್ರಶಸ್ತಿಗಳು ಲಭಿಸಿದ್ದು, ಇದು ನಮ್ಮ ಕಾಲೇಜಿಗೆ ಇನ್ನಷ್ಟು ಹೊಣೆಗಾರಿಕೆ ಹೆಚ್ಚಿಸಿದೆ’ ಎಂದು ತಿಳಿಸಿದರು.