ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಎನ್.ಕೆ.ಸುಬ್ರಮಣ್ಯ, ಅಡುಗೆ ಗುಣಮಟ್ಟ, ಸ್ವಚ್ಛತೆ, ಅಡುಗೆ ಸಿಬ್ಬಂದಿ ಬದ್ಧತೆ ಹೆಚ್ಚಿಸಲು ಸರ್ಕಾರದಿಂದ ತಂದಿರುವ ಸುಧಾರಣೆಗಳನ್ನು ಸಿಬ್ಬಂದಿಗೆ ತಿಳಿಸುವುದು ಪ್ರಮುಖವಾಗಿದೆ. ಹೀಗಾಗಿ ತಿಂಗಳಿಗೊಮ್ಮೆ ಕ್ಲಸ್ಟರ್ ಮಟ್ಟದಲ್ಲಿ ಕನಿಷ್ಠ ಮುಖ್ಯ ಅಡುಗೆದಾರರಿಗೆ ಮಾಸಿಕ ಸಭೆ ನಡೆಸಬೇಕು. ದಲಿತ ಮಹಿಳೆಯರಿಂದ ಅಡುಗೆ ಮಾಡಿಸಬೇಕು. ದಾಸೋಹ ಸಿಬ್ಬಂದಿಗೂ ಭತ್ಯೆ ನೀಡಬೇಕು. ಹೆರಿಗೆ ರಜೆ, ಹೆರಿಗೆ ಭತ್ಯೆ ನೀಡಬೇಕು. ರಾಷ್ಟ್ರೀಯ ಸ್ವಾಸ್ಥ್ಯ ಬಿಮಾಯೋಜನೆ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.