<p>ಮಧುಗಿರಿ: ‘ಪೌರ ಕಾರ್ಮಿಕರ ಶ್ರಮದಿಂದಾಗಿ ಪಟ್ಟಣದಲ್ಲಿ ರೋಗರುಜಿನ ನಿಯಂತ್ರಣವಾಗುತ್ತಿದೆ. ಅವರು ಮಾಡುವ ಕೆಲಸಕ್ಕೆ ಏನು ಕೊಟ್ಟರು ಸಾಲದು’ ಎಂದು ಪುರಸಭೆ ಅಧ್ಯಕ್ಷ ತಿಮ್ಮರಾಜು ತಿಳಿಸಿದರು.</p>.<p>ಪಟ್ಟಣದ ಮಾಲಿಮರಿಯಪ್ಪ ರಂಗ ಮಂದಿರದಲ್ಲಿ ಪುರಸಭೆಯಿಂದ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆಯಲ್ಲಿ ಪೌರ ಕಾರ್ಮಿಕರನ್ನು ಸನ್ಮಾನಿಸಿ ಅವರು ಮಾತನಾಡಿದರು.</p>.<p>ಪೌರ ಕಾರ್ಮಿಕರಿಗೆ ಯಾವುದೇ ಸಮಸ್ಯೆ ಉಂಟಾದರೂ ಅದನ್ನು ಬಗೆಹರಿಸುವಲ್ಲಿ ಪುರಸಭೆ ಆಡಳಿತ ಸದಾ ಸಿದ್ಧವಿರುತ್ತದೆ ಎಂದರು.</p>.<p>ಪುರಸಭೆ ಸದಸ್ಯ ಎಂ.ಎಸ್. ಚಂದ್ರಶೇಖರ್ ಮಾತನಾಡಿ, ದಿನಗೂಲಿ ನೌಕರರ ವಿಶೇಷ ಭತ್ಯೆ ₹ ಸಾವಿರ ನೀಡುತ್ತಿರುವುದಕ್ಕೆ ಕೃತಜ್ಞತೆ ಸಲ್ಲಿಸೋಣ. ಜೊತೆಗೆ, ವಾಹನದ ಚಾಲಕರಿಗೆ ಆರೋಗ್ಯ ವಿಮೆ ಮಾಡಿಸಬೇಕು ಎಂದು ಒತ್ತಾಯಿಸಿದರು.</p>.<p>ಪೌರ ಕಾರ್ಮಿಕರ ದಿನಾಚರಣೆಗೆ ಮುಖ್ಯಾಧಿಕಾರಿಯೇ ಗೈರುಹಾಜರಾಗಿದ್ದಾರೆ. ಪೌರ ಕಾರ್ಮಿಕರಿಗೆ ₹ 7 ಸಾವಿರ ಹಾಗೂ ದಿನಗೂಲಿ ನೌಕರರಿಗೆ ₹ 3 ಸಾವಿರ ಗೌರವಧನ ನೀಡಬೇಕಿತ್ತು. ಆದರೆ, ಆ ಕಾರ್ಯವೂ ಆಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>ಪುರಸಭೆ ಮಾಜಿ ಅಧ್ಯಕ್ಷ ಎಂ.ವಿ. ಗೋವಿಂದರಾಜು, ಸದಸ್ಯರಾದ ಸುಜಾತಾ ಶಂಕರನಾರಾಯಣ್, ನರಸಿಂಹಮೂರ್ತಿ, ಕೆ. ನಾರಾಯಣ್, ಲಾಲಪೇಟೆ ಮಂಜುನಾಥ್, ಮಂಜುನಾಥ್ ಆಚಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಧುಗಿರಿ: ‘ಪೌರ ಕಾರ್ಮಿಕರ ಶ್ರಮದಿಂದಾಗಿ ಪಟ್ಟಣದಲ್ಲಿ ರೋಗರುಜಿನ ನಿಯಂತ್ರಣವಾಗುತ್ತಿದೆ. ಅವರು ಮಾಡುವ ಕೆಲಸಕ್ಕೆ ಏನು ಕೊಟ್ಟರು ಸಾಲದು’ ಎಂದು ಪುರಸಭೆ ಅಧ್ಯಕ್ಷ ತಿಮ್ಮರಾಜು ತಿಳಿಸಿದರು.</p>.<p>ಪಟ್ಟಣದ ಮಾಲಿಮರಿಯಪ್ಪ ರಂಗ ಮಂದಿರದಲ್ಲಿ ಪುರಸಭೆಯಿಂದ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆಯಲ್ಲಿ ಪೌರ ಕಾರ್ಮಿಕರನ್ನು ಸನ್ಮಾನಿಸಿ ಅವರು ಮಾತನಾಡಿದರು.</p>.<p>ಪೌರ ಕಾರ್ಮಿಕರಿಗೆ ಯಾವುದೇ ಸಮಸ್ಯೆ ಉಂಟಾದರೂ ಅದನ್ನು ಬಗೆಹರಿಸುವಲ್ಲಿ ಪುರಸಭೆ ಆಡಳಿತ ಸದಾ ಸಿದ್ಧವಿರುತ್ತದೆ ಎಂದರು.</p>.<p>ಪುರಸಭೆ ಸದಸ್ಯ ಎಂ.ಎಸ್. ಚಂದ್ರಶೇಖರ್ ಮಾತನಾಡಿ, ದಿನಗೂಲಿ ನೌಕರರ ವಿಶೇಷ ಭತ್ಯೆ ₹ ಸಾವಿರ ನೀಡುತ್ತಿರುವುದಕ್ಕೆ ಕೃತಜ್ಞತೆ ಸಲ್ಲಿಸೋಣ. ಜೊತೆಗೆ, ವಾಹನದ ಚಾಲಕರಿಗೆ ಆರೋಗ್ಯ ವಿಮೆ ಮಾಡಿಸಬೇಕು ಎಂದು ಒತ್ತಾಯಿಸಿದರು.</p>.<p>ಪೌರ ಕಾರ್ಮಿಕರ ದಿನಾಚರಣೆಗೆ ಮುಖ್ಯಾಧಿಕಾರಿಯೇ ಗೈರುಹಾಜರಾಗಿದ್ದಾರೆ. ಪೌರ ಕಾರ್ಮಿಕರಿಗೆ ₹ 7 ಸಾವಿರ ಹಾಗೂ ದಿನಗೂಲಿ ನೌಕರರಿಗೆ ₹ 3 ಸಾವಿರ ಗೌರವಧನ ನೀಡಬೇಕಿತ್ತು. ಆದರೆ, ಆ ಕಾರ್ಯವೂ ಆಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>ಪುರಸಭೆ ಮಾಜಿ ಅಧ್ಯಕ್ಷ ಎಂ.ವಿ. ಗೋವಿಂದರಾಜು, ಸದಸ್ಯರಾದ ಸುಜಾತಾ ಶಂಕರನಾರಾಯಣ್, ನರಸಿಂಹಮೂರ್ತಿ, ಕೆ. ನಾರಾಯಣ್, ಲಾಲಪೇಟೆ ಮಂಜುನಾಥ್, ಮಂಜುನಾಥ್ ಆಚಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>