<p><strong>ತುಮಕೂರು</strong>: ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಸ್ಥಾನಕ್ಕೆ ನಡೆಯುತ್ತಿರುವ ಚರ್ಚೆಗಳು ಹಾದಿ, ಬೀದಿ ರಂಪ ಮಾಡಿವೆ. ಪೂರ್ಣ ಬಹುಮತ ಕೊಟ್ಟು ಅಧಿಕಾರಕ್ಕೆ ತಂದ ಜನರು ಪಶ್ಚಾತ್ತಾಪ ಪಡುವಂತಹ ಸ್ಥಿತಿ ನಿರ್ಮಾಣವಾಗಿದೆ ಎಂದು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಶಾಸಕ ಬಿ.ಸುರೇಶ್ಗೌಡ ಟೀಕಿಸಿದ್ದಾರೆ.</p>.<p>ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರು ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ನೇರವಾಗಿ ಸಡ್ಡು ಹೊಡೆದಿದ್ದು, ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ ಎನ್ನುವುದನ್ನು ತೋರಿಸುತ್ತದೆ ಎಂದು ದೂರಿದ್ದಾರೆ.</p>.<p>ಜನರು ಅಧಿಕಾರ ಕೊಡುವುದು ಜನಪರವಾಗಿ ಕೆಲಸ ಮಾಡಿ ರಾಜ್ಯವನ್ನು ಅಭಿವೃದ್ಧಿ ಪಥದತ್ತ ತೆಗೆದುಕೊಂಡು ಹೋಗಲೆಂದು. ಆದರೆ ಅನುಭವಿ ರಾಜಕಾರಣಿ, 15 ಬಾರಿ ಬಜೆಟ್ ಮಂಡಿಸಿರುವ ಸಿದ್ದರಾಮಯ್ಯ ಅವರಂತಹವರೇ ಮುಖ್ಯಮಂತ್ರಿ ಆಗಿದ್ದರೂ ರಾಜ್ಯದ ಆಡಳಿತ ತಿಕ್ಕು ತಪ್ಪಿದೆ ಎಂದು ಹೇಳಿಕೆಯಲ್ಲಿ ಆರೋಪಿಸಿದ್ದಾರೆ.</p>.<p>ಹುಸಿ ಗ್ಯಾರಂಟಿ ಯೋಜನೆಗಳ ಬಗ್ಗೆ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿರುವ ಸಿದ್ದರಾಮಯ್ಯ ಈಗ ಒಂದೊಂದೇ ಬೆಲೆ ಏರಿಸುತ್ತಿದ್ದಾರೆ. ಮುಂಗಾರು ಮಳೆ ಬೀಳುತ್ತಿದ್ದು, ರೈತರಿಗೆ ಸಕಾಲಕ್ಕೆ ಬಿತ್ತನೆ ಬೀಜ, ಗೊಬ್ಬರ ಪೂರೈಕೆ ಮಾಡುತ್ತಿಲ್ಲ ಎಂದು ದೂರಿದ್ದಾರೆ.</p>.<p>‘ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ಅವರು ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿ ಹುದ್ದೆ ತ್ಯಾಗ ಮಾಡಬೇಕು’ ಎಂದು ಕರೆ ನೀಡಿರುವುದು ಗದ್ದುಗೆಯ ಗುದ್ದಾಟ ಎಲ್ಲಿಗೆ ಬಂದು ಮುಟ್ಟಿದೆ ಎನ್ನುವುದಕ್ಕೆ ಒಂದು ನಿದರ್ಶನವಾಗಿದೆ. ಇದು ರಾಜ್ಯದಲ್ಲಿ ಹಿಂದೆಂದೂ ಕೇಳರಿಯದ ಸಂಗತಿಯಾಗಿದೆ ಹೇಳಿದ್ದಾರೆ.</p>.<p>ನಿತ್ಯವೂ ಹೈಕಮಾಂಡ್ ಜಪ ಮಾಡುತ್ತಾ ಹಾದಿ, ಬೀದಿಯಲ್ಲಿ ಪಕ್ಷದ ವಿದ್ಯಮಾನಗಳನ್ನು ಚರ್ಚೆ ಮಾಡುತ್ತಿರುವುದನ್ನು ನೋಡಿದರೆ ಕಾಂಗ್ರೆಸ್ನಲ್ಲಿ ನಾಯಕತ್ವ ಇಲ್ಲ ಎನ್ನುವುದರ ಸಂಕೇತವಾಗಿದೆ. ಬೀದಿಗಿಳಿದು ಹೊಡೆದಾಡಿಕೊಳ್ಳಲಿ. ಆದರೆ, ರಾಜ್ಯದ ಜನರ ಸಂಕಷ್ಟಗಳಿಗೆ ಮೊದಲು ಸ್ಪಂದಿಸಬೇಕು ಎಂದು ಒತ್ತಾಯಿಸಿದ್ದಾರೆ.</p>.<p>ರಾಜ್ಯ ಸರ್ಕಾರದಲ್ಲಿ ಅಂತಃಕಲಹ ಮೇರೆ ಮೀರಿದ್ದು, ದುರ್ಬಲವಾಗಿರುವ ಕಾಂಗ್ರೆಸ್ ಹೈಕಮಾಂಡ್ ಅದನ್ನು ನಿಯಂತ್ರಿಸುವ ಶಕ್ತಿ ಕಳೆದುಕೊಂಡಿದೆ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಎರಡು ಅಂಕಿ ದಾಟದಂತೆ ಜನರು ನೋಡಿಕೊಂಡಿರುವುದನ್ನು ಗಮನಿಸಿದರೆ ರಾಜ್ಯದ ಭವಿಷ್ಯದ ರಾಜಕಾರಣ ಯಾವ ದಿಕ್ಕಿನತ್ತ ಸಾಗುತ್ತಿದೆ ಎಂಬುದು ತಿಳಿಯುತ್ತದೆ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಸ್ಥಾನಕ್ಕೆ ನಡೆಯುತ್ತಿರುವ ಚರ್ಚೆಗಳು ಹಾದಿ, ಬೀದಿ ರಂಪ ಮಾಡಿವೆ. ಪೂರ್ಣ ಬಹುಮತ ಕೊಟ್ಟು ಅಧಿಕಾರಕ್ಕೆ ತಂದ ಜನರು ಪಶ್ಚಾತ್ತಾಪ ಪಡುವಂತಹ ಸ್ಥಿತಿ ನಿರ್ಮಾಣವಾಗಿದೆ ಎಂದು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಶಾಸಕ ಬಿ.ಸುರೇಶ್ಗೌಡ ಟೀಕಿಸಿದ್ದಾರೆ.</p>.<p>ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರು ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ನೇರವಾಗಿ ಸಡ್ಡು ಹೊಡೆದಿದ್ದು, ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ ಎನ್ನುವುದನ್ನು ತೋರಿಸುತ್ತದೆ ಎಂದು ದೂರಿದ್ದಾರೆ.</p>.<p>ಜನರು ಅಧಿಕಾರ ಕೊಡುವುದು ಜನಪರವಾಗಿ ಕೆಲಸ ಮಾಡಿ ರಾಜ್ಯವನ್ನು ಅಭಿವೃದ್ಧಿ ಪಥದತ್ತ ತೆಗೆದುಕೊಂಡು ಹೋಗಲೆಂದು. ಆದರೆ ಅನುಭವಿ ರಾಜಕಾರಣಿ, 15 ಬಾರಿ ಬಜೆಟ್ ಮಂಡಿಸಿರುವ ಸಿದ್ದರಾಮಯ್ಯ ಅವರಂತಹವರೇ ಮುಖ್ಯಮಂತ್ರಿ ಆಗಿದ್ದರೂ ರಾಜ್ಯದ ಆಡಳಿತ ತಿಕ್ಕು ತಪ್ಪಿದೆ ಎಂದು ಹೇಳಿಕೆಯಲ್ಲಿ ಆರೋಪಿಸಿದ್ದಾರೆ.</p>.<p>ಹುಸಿ ಗ್ಯಾರಂಟಿ ಯೋಜನೆಗಳ ಬಗ್ಗೆ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿರುವ ಸಿದ್ದರಾಮಯ್ಯ ಈಗ ಒಂದೊಂದೇ ಬೆಲೆ ಏರಿಸುತ್ತಿದ್ದಾರೆ. ಮುಂಗಾರು ಮಳೆ ಬೀಳುತ್ತಿದ್ದು, ರೈತರಿಗೆ ಸಕಾಲಕ್ಕೆ ಬಿತ್ತನೆ ಬೀಜ, ಗೊಬ್ಬರ ಪೂರೈಕೆ ಮಾಡುತ್ತಿಲ್ಲ ಎಂದು ದೂರಿದ್ದಾರೆ.</p>.<p>‘ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ಅವರು ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿ ಹುದ್ದೆ ತ್ಯಾಗ ಮಾಡಬೇಕು’ ಎಂದು ಕರೆ ನೀಡಿರುವುದು ಗದ್ದುಗೆಯ ಗುದ್ದಾಟ ಎಲ್ಲಿಗೆ ಬಂದು ಮುಟ್ಟಿದೆ ಎನ್ನುವುದಕ್ಕೆ ಒಂದು ನಿದರ್ಶನವಾಗಿದೆ. ಇದು ರಾಜ್ಯದಲ್ಲಿ ಹಿಂದೆಂದೂ ಕೇಳರಿಯದ ಸಂಗತಿಯಾಗಿದೆ ಹೇಳಿದ್ದಾರೆ.</p>.<p>ನಿತ್ಯವೂ ಹೈಕಮಾಂಡ್ ಜಪ ಮಾಡುತ್ತಾ ಹಾದಿ, ಬೀದಿಯಲ್ಲಿ ಪಕ್ಷದ ವಿದ್ಯಮಾನಗಳನ್ನು ಚರ್ಚೆ ಮಾಡುತ್ತಿರುವುದನ್ನು ನೋಡಿದರೆ ಕಾಂಗ್ರೆಸ್ನಲ್ಲಿ ನಾಯಕತ್ವ ಇಲ್ಲ ಎನ್ನುವುದರ ಸಂಕೇತವಾಗಿದೆ. ಬೀದಿಗಿಳಿದು ಹೊಡೆದಾಡಿಕೊಳ್ಳಲಿ. ಆದರೆ, ರಾಜ್ಯದ ಜನರ ಸಂಕಷ್ಟಗಳಿಗೆ ಮೊದಲು ಸ್ಪಂದಿಸಬೇಕು ಎಂದು ಒತ್ತಾಯಿಸಿದ್ದಾರೆ.</p>.<p>ರಾಜ್ಯ ಸರ್ಕಾರದಲ್ಲಿ ಅಂತಃಕಲಹ ಮೇರೆ ಮೀರಿದ್ದು, ದುರ್ಬಲವಾಗಿರುವ ಕಾಂಗ್ರೆಸ್ ಹೈಕಮಾಂಡ್ ಅದನ್ನು ನಿಯಂತ್ರಿಸುವ ಶಕ್ತಿ ಕಳೆದುಕೊಂಡಿದೆ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಎರಡು ಅಂಕಿ ದಾಟದಂತೆ ಜನರು ನೋಡಿಕೊಂಡಿರುವುದನ್ನು ಗಮನಿಸಿದರೆ ರಾಜ್ಯದ ಭವಿಷ್ಯದ ರಾಜಕಾರಣ ಯಾವ ದಿಕ್ಕಿನತ್ತ ಸಾಗುತ್ತಿದೆ ಎಂಬುದು ತಿಳಿಯುತ್ತದೆ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>