ಸ್ಥಳಕ್ಕೆ ಆಗಮಿಸಿದ ನಗರಸಭೆ ಅಧ್ಯಕ್ಷ ಪಿ.ಜೆ.ರಾಮಮೋಹನ್, ಸ್ಥಾಯಿ ಸಮಿತಿ ಅಧ್ಯಕ್ಷ ಶಶಿಕಿರಣ್ ಕಾಮಗಾರಿ ನಿಲ್ಲಿಸಿರುವುದನ್ನು ಪ್ರಶ್ನಿಸಿದ್ದಾರೆ. ಮಾಜಿ ಅಧ್ಯಕ್ಷ ಟಿ.ಎನ್.ಪ್ರಕಾಶ್, ಮಹೇಶ್ ಸೇರಿದಂತೆ ಹಲವರು ಕೆಲಸದ ಆದೇಶ ಪ್ರತಿಯನ್ನು ಪಡೆದು ನಂತರ ಕಾಮಗಾರಿ ಮಾಡುವಂತೆ ಆಗ್ರಹಿಸಿದರು. ನಂತರ ಮಾತಿನ ಚಕಮಕಿ ನಡೆದು ಒಂದು ಸಂದರ್ಭದಲ್ಲಿ ಕೈ-ಕೈ ಮಿಲಾಯಿಸುವ ಹಂತಕ್ಕೆ ತಲುಪಿತು.