ತಿಪಟೂರು: ಅ. 2ರಂದು ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಪ್ರಯುಕ್ತ ತಿಪಟೂರು ಹೋರಾಟ ಸಮಿತಿ ಮತ್ತು ರೋಟರಿ ಸಂಸ್ಥೆಯ ಸಹಯೋಗದಲ್ಲಿ ನಗರದ ಈಡೇನಹಳ್ಳಿ ಗೇಟ್ ಬಳಿ ಇರುವ ಹಿಂದೂ ರುದ್ರಭೂಮಿಯ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಬೆಳಿಗ್ಗೆ 8 ಗಂಟೆಗೆ ಸ್ವಚ್ಛತಾ ಕಾರ್ಯ ಪ್ರಾರಂಭಿಸಲಿದ್ದು, ಆಸಕ್ತ ಸಾರ್ವಜನಿಕರು ಸಂಸ್ಥೆಗಳೊಂದಿಗೆ ಸಹಕರಿಸಬಹುದು ಎಂದು ಪ್ರಕಟಣೆ ಕೋರಿದೆ.
ಹೆಚ್ಚಿನ ಮಾಹಿತಿಗೆ ಡಿ. ಅಶೋಕ್ ಕುಮಾರ್ ಮೊಬೈಲ್ 98449 83080 ಸಂಪರ್ಕಿಸಬಹುದು.