ಇತ್ತೀಚೆಗೆ ನೂತನ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ್ ತಾಲ್ಲೂಕಿಗೆ ಭೇಟಿ ನೀಡಿದ ಸಮಯದಲ್ಲಿ ಸಾರ್ವಜನಿಕ ಅಸ್ತಿ ಸಂರಕ್ಷಿಸುವ ವಿಚಾರ ಪ್ರಸ್ತಾಪವಾದಾಗ ಮಾಧ್ಯಮ ಪ್ರತಿನಿಧಿಗಳು ತಾಲ್ಲೂಕು ಪಂಚಾಯಿತಿ ಜಾಗದ ಬಗ್ಗೆ ಗಮನ ಸೆಳೆದಿದ್ದರೂ, ನಂತರದ ದಿನಗಳಲ್ಲಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಜೋಸೆಫ್ ಗಮನ ಹರಿಸಿದ ಪರಿಣಾಮ ಬುಧವಾರದಿಂದ ಪೆಟ್ಟಿ ಅಂಗಡಿಗಳ ತೆರವಿನ ಕಾರ್ಯ ನಡೆಯುತ್ತಿದ್ದು, ಇಡೀ ಜಾಗವನ್ನು ವಶಕ್ಕೆ ಪಡೆದು ವಾಣಿಜ್ಯ ಸಂಕೀರ್ಣ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.