‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಪೌರಾಯುಕ್ತ ರುದ್ರೇಶ್ ‘ನಗರವನ್ನು ಸ್ವಚ್ಛಗೊಳಿಸಲು ಕಠಿಣ ಕ್ರಮ ಕೈಗೊಳ್ಳಲಾಗುವುದು. ರಸ್ತೆ ಬದಿಯಲ್ಲಿ ಅಕ್ರಮವಾಗಿ ಇಟ್ಟುಕೊಂಡಿರುವ ಅಂಗಡಿ ತೆರವುಗೊಳಿಸಲಾಗುತ್ತಿದೆ. ಬಹುತೇಕರು ಬಾಡಿಗೆ ನೀಡುತ್ತಿದ್ದಾರೆ. ನಿಜವಾದ ಫಲಾನುಭವಿಗಳಿಗೆ ತೊಂದರೆ ಮಾಡುವುದಿಲ್ಲ. ಮುಂದಿನ ದಿನಗಳಲ್ಲಿ ಅನುಕೂಲ ಮಾಡಿಕೊಡಲಾಗುವುದು. ಬಹುತೇಕರು ಸ್ವಪ್ರೇರಣೆಯಿಂದ ತೆರವುಗೊಳಿಸುತ್ತಿದ್ದಾರೆ. ಐದು ದಿನ ಕಾಲಾವಕಾಶ ನೀಡಿದ್ದು, ಅದರೊಳಗೆ ತೆರವುಗೊಳಿಸದಿದ್ದರೆ ನಗರಸಭೆಯಿಂದ ತೆರವಿಗೆ ಕ್ರಮಕೈಗೊಳ್ಳಲಾಗುವುದು. ನಗರೋತ್ಥಾನ ಯೋಜನೆಯಲ್ಲಿ ₹2.5 ಕೋಟೆ ವೆಚ್ಚದಲ್ಲಿ ರಸ್ತೆ ಅಭಿವೃದ್ದಿ ಪಡಿಸಲಾಗುವುದು’ ಎಂದರು.