ಇದಕ್ಕೂ ಮುನ್ನ ಕ್ಯಾನ್ಸರ್ ಆಸ್ಪತ್ರೆ, ತಾಯಿ ಹಾಗೂ ಮಕ್ಕಳ ಆಸ್ಪತ್ರೆ, ಅಪೌಷ್ಟಿಕ ಮಕ್ಕಳ ಪುನಶ್ಚೇತನ ಕೇಂದ್ರದ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಮುಖ್ಯಮಂತ್ರಿ, ‘ತುಮಕೂರಿನಲ್ಲಿ ಜಯದೇವ ಹೃದ್ರೋಗ ಚಿಕಿತ್ಸಾ ಕೇಂದ್ರವನ್ನು ತೆರೆಯಲಾಗುವುದು. ಈ ಕೇಂದ್ರಕ್ಕೆ ಬೇಕಾದ ಜಾಗ ಗುರುತಿಸಿದರೆ ಅಗತ್ಯ ಹಣಕಾಸಿನ ನೆರವು ನೀಡಲಾಗುವುದು’ ಎಂದು ತಿಳಿಸಿದರು.