<p><strong>ತುಮಕೂರು:</strong> ‘ಬೆಂಗಳೂರಿಗೆ ಯಾವಾಗ ಬರುತ್ತೀರಿ. ಬಂದಾಗ ಫೋನ್ ಮಾಡಿ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದ್ದಾರೆ. ಇದರಲ್ಲಿ ವಿಶೇಷವೇನೂ ಇಲ್ಲ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.</p>.<p>ಚಿಕ್ಕನಾಯಕನಹಳ್ಳಿ ತಾಲ್ಲೂಕು ಜೆ.ಸಿ.ಪುರದಲ್ಲಿ ಗುರುವಾರ ಸಚಿವ ಜೆ.ಸಿ.ಮಾಧುಸ್ವಾಮಿ ಪುತ್ರನ ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ದೇವೇಗೌಡ ಅವರು ಬೆಂಗಳೂರಿಗೆ ಬಂದಾಗ ಫೋನ್ ಮಾಡುವಂತೆ ಮುಖ್ಯಮಂತ್ರಿಗೆ ಹೇಳಿದ್ದರಿಂದ ಈ ಸ್ಪಷ್ಟನೆ ನೀಡಿದರು.</p>.<p>‘ದೇವೇಗೌಡರು ನಮ್ಮ ಹಿರಿಯರು. ಅವರ ಮಾರ್ಗದರ್ಶನ ಯಾವಾಗಲೂ ಇದ್ದೇ ಇರುತ್ತೆ. ರಾಜಕೀಯ ಏನೂ ಮಾತನಾಡಿಲ್ಲ. ಮದುವೆಯಲ್ಲಿ ಭೇಟಿಯಾದಾಗ ಕುಶಲೋಪರಿಯಷ್ಟೇ ನಡೆಯಿತು’ ಎಂದರು.</p>.<p>ಬಿಜೆಪಿ ಬಗ್ಗೆ ಜೆಡಿಎಸ್ನ ಎಚ್.ಡಿ.ಕುಮಾರಸ್ವಾಮಿ ಮೃದು ಧೋರಣೆ ತಾಳಿರುವ ಬಗ್ಗೆ ಪ್ರತಿಕ್ರಿಯಿಸಿ, ‘ಯಾವ ಸಾಫ್ಟೂ ಇಲ್ಲ, ಕಾರ್ನರೂ ಇಲ್ಲ. ಅವರ ರಾಜಕಾರಣ ಅವರು ಮಾಡುತ್ತಾರೆ. ನಮ್ಮ ರಾಜಕಾರಣ ನಾವು ಮಾಡುತ್ತೇವೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ‘ಬೆಂಗಳೂರಿಗೆ ಯಾವಾಗ ಬರುತ್ತೀರಿ. ಬಂದಾಗ ಫೋನ್ ಮಾಡಿ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದ್ದಾರೆ. ಇದರಲ್ಲಿ ವಿಶೇಷವೇನೂ ಇಲ್ಲ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.</p>.<p>ಚಿಕ್ಕನಾಯಕನಹಳ್ಳಿ ತಾಲ್ಲೂಕು ಜೆ.ಸಿ.ಪುರದಲ್ಲಿ ಗುರುವಾರ ಸಚಿವ ಜೆ.ಸಿ.ಮಾಧುಸ್ವಾಮಿ ಪುತ್ರನ ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ದೇವೇಗೌಡ ಅವರು ಬೆಂಗಳೂರಿಗೆ ಬಂದಾಗ ಫೋನ್ ಮಾಡುವಂತೆ ಮುಖ್ಯಮಂತ್ರಿಗೆ ಹೇಳಿದ್ದರಿಂದ ಈ ಸ್ಪಷ್ಟನೆ ನೀಡಿದರು.</p>.<p>‘ದೇವೇಗೌಡರು ನಮ್ಮ ಹಿರಿಯರು. ಅವರ ಮಾರ್ಗದರ್ಶನ ಯಾವಾಗಲೂ ಇದ್ದೇ ಇರುತ್ತೆ. ರಾಜಕೀಯ ಏನೂ ಮಾತನಾಡಿಲ್ಲ. ಮದುವೆಯಲ್ಲಿ ಭೇಟಿಯಾದಾಗ ಕುಶಲೋಪರಿಯಷ್ಟೇ ನಡೆಯಿತು’ ಎಂದರು.</p>.<p>ಬಿಜೆಪಿ ಬಗ್ಗೆ ಜೆಡಿಎಸ್ನ ಎಚ್.ಡಿ.ಕುಮಾರಸ್ವಾಮಿ ಮೃದು ಧೋರಣೆ ತಾಳಿರುವ ಬಗ್ಗೆ ಪ್ರತಿಕ್ರಿಯಿಸಿ, ‘ಯಾವ ಸಾಫ್ಟೂ ಇಲ್ಲ, ಕಾರ್ನರೂ ಇಲ್ಲ. ಅವರ ರಾಜಕಾರಣ ಅವರು ಮಾಡುತ್ತಾರೆ. ನಮ್ಮ ರಾಜಕಾರಣ ನಾವು ಮಾಡುತ್ತೇವೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>