ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಮೂಲ ದಾಖಲೆ ಇಲ್ಲದೆ ನಕಲಿ ದಾಖಲೆ ಸೃಷ್ಟಿಸಿ ಎಪಿಎಂಸಿ ಮಾರುಕಟ್ಟೆಯ ಮೂಲಕ ಅಕ್ರಮವಾಗಿ ಕೊಬ್ಬರಿ ರವಾನೆಯಾಗುತ್ತಿದೆ. ಪ್ರತಿನಿತ್ಯ ಸರ್ಕಾರಕ್ಕೆ ಒಂದು ಕೋಟಿ ತೆರಿಗೆ ವಂಚಿಸಲಾಗುತ್ತಿದೆ. ಮಾಹಿತಿಯ ಹಕ್ಕು ಕಾಯ್ದೆಯಡಿ ಪಡೆದ ದಾಖಲೆಯಲ್ಲಿ ಇದು ಸಾಬೀತಾಗಿದೆ’ ಎಂದು ಹೇಳಿದರು.