ತುಮಕೂರು: ಬೆಂಬಲ ಬೆಲೆ ಯೋಜನೆಯಡಿ ಕೊಬ್ಬರಿಯನ್ನು ಪ್ರತಿ ಕ್ವಿಂಟಲ್ಗೆ ₹10,300ರಂತೆ ಖರೀದಿಸಲಿದ್ದು, ಜೂನ್ 18ರಿಂದ ಜುಲೈ 4ರ ವರೆಗೆ ರೈತರು ತಮ್ಮ ಹೆಸರು ನೋಂದಾಯಿಸಲು ಅವಕಾಶ ನೀಡಲಾಗಿದೆ.
ತಿಪಟೂರು, ಚಿಕ್ಕನಾಯಕನ ಹಳ್ಳಿ, ಹುಳಿಯಾರು, ಗುಬ್ಬಿ, ತುರುವೇಕೆರೆ, ತುಮಕೂರು, ಕುಣಿಗಲ್, ಶಿರಾ, ಚೇಳೂರು ಎಪಿಎಂಸಿ ಪ್ರಾಂಗಣದಲ್ಲಿ 9 ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ. ಈ ಖರೀದಿ ಕೇಂದ್ರಗಳಿಗೆ ಆಧಾರ್ ಕಾರ್ಡ್, ರೈತ ಸಂಪರ್ಕ ಕೇಂದ್ರದಲ್ಲಿ ಪಡೆದ ನಂಬರ್ನೊಂದಿಗೆ ಹೆಸರು ನೋಂದಾಯಿಸಿಕೊಳ್ಳಬೇಕು.
ಜುಲೈ 6ರಿಂದ ನೋಂದಾಯಿಸಿದ ಪ್ರತಿ ರೈತರಿಂದ ಪ್ರತಿ ಎಕರೆಗೆ 6 ಕ್ವಿಂಟಲ್ನಂತೆ ಗರಿಷ್ಠ 20 ಕ್ವಿಂಟಲ್ ಖರೀದಿಸಲಾಗುವುದು. ಹಣವನ್ನು ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುತ್ತದೆ ಎಂದು ಮಂಗಳವಾರ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್ ತಿಳಿಸಿದರು.
ಎಪಿಎಂಸಿ ಉಪನಿರ್ದೇಶಕ ಈ.ದ್ವಾರಕ ಪ್ರಸಾದ್, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ರಘು ಇದ್ದರು.