ಕೋಮುವಾದಿ ಸಂಘಟನೆಗಳು, ಮತೀಯ ಗೂಂಡಾಗಿರಿಯಿಂದ ಕೋಮುಸೌಹಾರ್ದ ಹದಗೆಟ್ಟಿದೆ. ಮತೀಯ ಸಂಘಟನೆಗಳ ಕ್ರೌರ್ಯದಿಂದ ಸಮಾಜದಲ್ಲಿ ಪರಿಶಿಷ್ಟರು, ಅಲ್ಪಸಂಖ್ಯಾತರನ್ನು ಇನ್ನಷ್ಟು ಪ್ರತ್ಯೇಕಿಸಿದಂತಾಗುತ್ತದೆ. ಇದು ಭ್ರಾತೃತ್ವ, ಜಾತ್ಯತೀತ ಸಂವಿಧಾನದ ಮೂಲ ತತ್ವಗಳಿಗೆ ವಿರುದ್ಧವಾಗಿದೆ. ಹೀಗಿದ್ದರೂ ರಾಜ್ಯ ಸರ್ಕಾರ ಇಂತಹ ಸಂಘಟನೆಗಳ ವಿರುದ್ಧ ಕ್ರಮಕೈಗೂಳ್ಳುತ್ತಿಲ್ಲ ಎಂದು ಆರೋಪಿಸಿದ್ದಾರೆ.