ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೈಯಕ್ತಿಕ ಜಗಳಕ್ಕೆ ಕೋಮು ಬಣ್ಣ: ಸಿಪಿಎಂ

Last Updated 22 ಅಕ್ಟೋಬರ್ 2021, 5:33 IST
ಅಕ್ಷರ ಗಾತ್ರ

ತುಮಕೂರು: ವೈಯಕ್ತಿಕ ಜಗಳವನ್ನು ಜಾತಿ, ಧರ್ಮಕ್ಕೆ ಬಳಸಿಕೊಂಡು ಶಾಂತಿಗೆ ಭಂಗ ತರುತ್ತಿರುವ ಕೋಮುವಾದಿಗಳ ವಿರುದ್ಧ ಜಿಲ್ಲಾ ಆಡಳಿತ ಕ್ರಮ ಕೈಗೊಳ್ಳಬೇಕು ಎಂದು ಸಿಪಿಐಎಂ ಜಿಲ್ಲಾ ಸಮಿತಿ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಎನ್.ಕೆ.ಸುಬ್ರಮಣ್ಯ, ಬಿ.ಉಮೇಶ ಆಗ್ರಹಿಸಿದ್ದಾರೆ.

ಜಾತಿ, ಧರ್ಮದ ಹೆಸರಿನಲ್ಲಿ ನಡೆಯುವ ಅಪರಾಧಗಳನ್ನು ತಡೆಗಟ್ಟಲು ಹಾಗೂ ಅಂತಹ ಅಪರಾಧಗಳಲ್ಲಿ ಭಾಗಿಯಾದ ಆರೋಪಿಗಳಿಗೆ ಶಿಕ್ಷಿಸಲು ಕ್ರಮ ಜರುಗಿಸಬೇಕು ಒತ್ತಾಯಿಸಿದ್ದಾರೆ.

ಕೋಮುವಾದಿ ಸಂಘಟನೆಗಳು, ಮತೀಯ ಗೂಂಡಾಗಿರಿಯಿಂದ ಕೋಮುಸೌಹಾರ್ದ ಹದಗೆಟ್ಟಿದೆ. ಮತೀಯ ಸಂಘಟನೆಗಳ ಕ್ರೌರ್ಯದಿಂದ ಸಮಾಜದಲ್ಲಿ ಪರಿಶಿಷ್ಟರು, ಅಲ್ಪಸಂಖ್ಯಾತರನ್ನು ಇನ್ನಷ್ಟು ಪ್ರತ್ಯೇಕಿಸಿದಂತಾಗುತ್ತದೆ. ಇದು ಭ್ರಾತೃತ್ವ, ಜಾತ್ಯತೀತ ಸಂವಿಧಾನದ ಮೂಲ ತತ್ವಗಳಿಗೆ ವಿರುದ್ಧವಾಗಿದೆ. ಹೀಗಿದ್ದರೂ ರಾಜ್ಯ ಸರ್ಕಾರ ಇಂತಹ ಸಂಘಟನೆಗಳ ವಿರುದ್ಧ ಕ್ರಮಕೈಗೂಳ್ಳುತ್ತಿಲ್ಲ ಎಂದು ಆರೋಪಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT