25 ವರ್ಷಗಳಿಂದ ಈ ಹೋರಾಟ ನಡೆಯುತ್ತಿದೆ. ಕೊಡಗು ಜಿಲ್ಲೆಯಲ್ಲಿ ಕುರುಬ ಸಮುದಾಯಕ್ಕೆ ಎಸ್ಟಿ ಸೌಲಭ್ಯ ದೊರೆಯುತ್ತಿದೆ. ಈ ಮೀಸಲಾತಿಯನ್ನು ರಾಜ್ಯದಾದ್ಯಂತ ವಿಸ್ತರಿಸಬೇಕು ಎಂದರು. ಕಾಗಿನೆಲೆ ಕನಕ ಗುರುಪೀಠದ ಅಧ್ಯಕ್ಷ ನಿರಂಜನಾನಂದಪುರಿ ಸ್ವಾಮೀಜಿ,
ರೇವಣಸಿದ್ದೇಶ್ವರ ಮಠದ ಬಿಂದುಶೇಖರ್ ಒಡೆಯರ್ ಸ್ವಾಮೀಜಿ, ವಿಧಾನ ಪರಿಷತ್ ಸದಸ್ಯ ಎಚ್.ಎಂ.ರೇವಣ್ಣ, ನಾರು ಅಭಿವೃದ್ಧಿ ಮಂಡಳಿ ಅಧ್ಯಕ್ಷ ಬಿ.ಕೆ ಮಂಜುನಾಥ್, ಕುರುಬ ಸಮುದಾಯದ ಮುಖಂಡರಾದ ಟಿ.ಇಂದ್ರಕುಮಾರ್, ಎನ್.ಮಹೇಶ್, ಟಿ.ವೈ ಯೋಗೀಶ್, ಡಾ.ಎಂ.ಆರ್.ಹುಲಿನಾಯ್ಕರ್, ತುಮಕೂರು ಮಹಾನಗರ ಪಾಲಿಕೆ ಸದಸ್ಯ ನರಸಿಂಹರಾಜು, ಟೂಡಾ ಮಾಜಿ ಅಧ್ಯಕ್ಷ ಶಿವಮೂರ್ತಿ ಹಾಗೂ ಜಿಲ್ಲಾ ಕುರುಬರ ಸಂಘದ ಪದಾಧಿಕಾರಿಗಳು ಇದ್ದರು.