ತಿಪಟೂರು: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮನೆಗೆ ಮುತ್ತಿಗೆ ಹಾಕಿದ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ (ಎನ್ಎಸ್ಯುಐ) ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಿದ ಆರೋಪದಡಿ ಬಿಜೆಪಿ ಕಾರ್ಯಕರ್ತರ ವಿರುದ್ಧ ಸೋಮವಾರ ರಾತ್ರಿ ದೂರು ದಾಖಲಾಗಿದೆ.
ಜಯಸಿಂಹ ಮಾದಿಹಳ್ಳಿ ಮತ್ತು ಇತರರು ಹಲ್ಲೆ ಮಾಡಿದ್ದು, ಪ್ರಾಣ ಬೆದರಿಕೆ ಹಾಕಿ, ಬೈಕ್ ಜಖಂ ಗೊಳಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಿರುವ ಬಗ್ಗೆ ಜೂನ್ 2ರಂದೇ ನಗರ ಠಾಣೆಗೆ ದೂರು ನೀಡಿದ್ದರೂ ಪ್ರಕರಣ ದಾಖಲಾಗಿರಲಿಲ್ಲ. ರಾಜ್ಯದಾದ್ಯಂತ ಹೋರಾಟ ತೀವ್ರವಾಗುತ್ತಿರುವುದನ್ನು ಮನಗಂಡು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.