ಬಿಜೆಪಿ ರಾಜ್ಯ ವಕ್ತಾರ ಎಚ್.ಎನ್.ಚಂದ್ರಶೇಖರ್, ‘ಇಡೀ ದೇಶದಲ್ಲಿ ಕಾಂಗ್ರೆಸ್ಗೆ ಸೋಲಿನ ಹತಾಶೆ ಕಾಡುತ್ತಿದೆ. ಅದಕ್ಕಾಗಿ ಅವರು ವೈಯಕ್ತಿಕ ಟೀಕೆ ಮಾಡುತ್ತಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ ಸಜ್ಜನ ರಾಜಕಾರಣಿಯಾಗಿದ್ದರು. ಈಗ ಅವರೂ ಕಾಂಗ್ರೆಸ್ನ ಇತರೆ ನಾಯಕರಂತೆ ಆಗಿದ್ದಾರೆ. ಅಸಹ್ಯವಾದ ಮಾತುಗಳನ್ನು ಆಡಿ, ವ್ಯಕ್ತಿತ್ವ ಹಾಳು ಮಾಡಿಕೊಳ್ಳಬೇಡಿ’ ಎಂದು ಹೇಳಿದರು.