ಭೂಸುಧಾರಣೆ ಕಾಯ್ದೆ ತಿದ್ದುಪಡಿಗೆ ಮುಂದಾಗಿರುವ ಸರ್ಕಾರದ ನಿಲುವು ಖಂಡನೀಯ. ಯಾವುದೇ ಕಾಯ್ದೆ ಜಾರಿಗೊಳಿಸಲು, ತಿದ್ದುಪಡಿ ತರುವಲ್ಲಿ ಜನರ, ರೈತರ ಒಳಿತು ಮುಖ್ಯ. ಆದರೆ, ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಜಾರಿಯಿಂದ ಜನ ಸಾಮಾನ್ಯರು, ರೈತಾಪಿ ವರ್ಗಕ್ಕೆ ಯಾವುದೇ ಪ್ರಯೋಜನವಿಲ್ಲ ಎಂದು ಪ್ರತಿಭಟನಾ ನಿರತರು ದೂರಿದರು.