ಡಿಸೆಂಬರ್ 28ರಂದು ಉಪಾಧ್ಯಕ್ಷ ರಾಜಣ್ಣ ಅವರ ಅಧ್ಯಕ್ಷತೆಯಲ್ಲಿ ಸರ್ವಸದಸ್ಯರ ಸಭೆ ಕರೆಯಲಾಗಿದೆ. ಅಧ್ಯಕ್ಷರಾಗಿದ್ದ ಬಿ.ಬಿ.ರಾಮಸ್ವಾಮಿಗೌಡರ ವಿರುದ್ಧ ಷಡ್ಯಂತ್ರದಿಂದಾಗಿ ಸಂಘದ ವ್ಯವಸ್ಥೆಗೆ ಧಕ್ಕೆ ಉಂಟುಮಾಡಲಾಗುತ್ತಿದೆ ಎಂದು ಬಿಬಿಆರ್ ಬೆಂಬಲಿಗರಾದ ಶ್ರೀನಿವಾಸ್, ರಾಜಣ್ಣ, ಶಿವರಾಮ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 19 ವರ್ಷಗಳಿಂದ ಅಧ್ಯಕ್ಷರಾಗಿ
ಜ್ಞಾನಭಾರತಿ ವಿದ್ಯಾಸಂಸ್ಥೆಯನ್ನು ಜಿಲ್ಲೆಯಲ್ಲಿಯೇ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾಗಿ ಬೆಳಸುವಲ್ಲಿ ರಾಮಸ್ವಾಮಿಗೌಡ ಅವರ ಪಾತ್ರ ಪ್ರಮುಖವಾಗಿದೆ ಎಂದಿದ್ದಾರೆ.