<p><strong>ಕೊರಟಗೆರೆ</strong>: ಸರ್ಕಾರವು ಶಿಕ್ಷಣ ನೀತಿಯಲ್ಲಿ ಬದಲಾವಣೆ ತಂದಿರುವುದು ಅನೇಕರಲ್ಲಿ ಗೊಂದಲಕ್ಕೆ ಕಾರಣವಾಗಿದೆ ಎಂದು ಶಾಸಕ ಡಾ.ಜಿ.ಪರಮೇಶ್ವರ ಹೇಳಿದರು.</p>.<p>ಪಟ್ಟಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ‘1986ರಿಂದ 2020ರ ವರೆಗೆಕ್ರಮಬದ್ಧವಾದ ಶಿಕ್ಷಣವಿದ್ದು ದೇಶದಲ್ಲಿ ದೊಡ್ಡ ಬದಲಾವಣೆಯಾಗಿದೆ. ಆದರೂಸರ್ಕಾರ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ತಂದಿದೆ’ ಎಂದರು.</p>.<p>ಶಿಕ್ಷಣಕ್ರಾಂತಿ ಕಾರಕ ಶಕ್ತಿಯಾಗಿದ್ದು, ಸಮಾಜವನ್ನು ಬದಲಾಯಿಸುವ ಸಾಮರ್ಥ್ಯಹೊಂದಿದೆ. ಗುರು ಪರಂಪರೆ, ಗುರುಕುಲದಲ್ಲಿ ಶಿಕ್ಷಣ ನೀಡಲಾಗುತ್ತಿತ್ತು. ಆ ಕಾಲದಲ್ಲಿ ಗುರುವಿಗೆ ದೇವರಿಗಿಂತಲೂ ಹೆಚ್ಚಿನ ಸ್ಥಾನವಿತ್ತು. ಬ್ರಿಟಿಷರ ಆಳ್ವಿಕೆಯಲ್ಲಿ ಶೇ 1.5ರಷ್ಟಿದ್ದ ಸಾಕ್ಷರತೆಯ ಪ್ರಮಾಣ ಇಂದು ಶೇ 80ರಷ್ಟಾಗಿದೆ ಎಂದು ತಿಳಿಸಿದರು.</p>.<p>ತಾಲೂಕಿನಲ್ಲಿ ₹ 150 ಕೋಟಿಗೂ ಹೆಚ್ಚು ಅನುದಾನದಲ್ಲಿ 6 ವಸತಿ ಶಾಲೆ ಪ್ರಾರಂಭಿಸಲಾಗಿದೆ. ಸದಾ ಶಿಕ್ಷಕರ ಜೊತೆಗಿದ್ದು, ಅವರ ಯೋಗಕ್ಷೇಮ ನೋಡಿಕೊಳ್ಳುವುದು ನನ್ನ ಕರ್ತವ್ಯ. ಅದನ್ನು ಪ್ರಾಮಾಣಿಕವಾಗಿ ಮಾಡುತ್ತೇನೆ. ಸಿದ್ಧಾರ್ಥವೈದ್ಯಕೀಯ ಆಸ್ಪತ್ರೆಯಲ್ಲಿ ಶೇ 50ರಷ್ಟು ರಿಯಾಯಿತಿಯಲ್ಲಿಚಿಕಿತ್ಸೆಯ ಸೌಲಭ್ಯ ನೀಡಲಾಗುವುದು ಎಂದು ತಿಳಿಸಿದರು.</p>.<p>ತಾ.ಪಂ ಕಾರ್ಯ ನಿರ್ವಹಣಾಧಿಕಾರಿದೊಡ್ಡಸಿದ್ದಪ್ಪ, ಬಿಇಒ ಸುಧಾಕರ್, ಪ.ಪಂ ಅಧ್ಯಕ್ಷೆ ಕಾವ್ಯಶ್ರೀ ರಮೇಶ್, ಸ್ಥಾಯಿ ಸಮಿತಿ ಅಧ್ಯಕ್ಷ ನಟರಾಜು, ಸದಸ್ಯರಾದ ಎ.ಡಿ.ಬಲರಾಮಯ್ಯ, ಕೆ.ಆರ್.ಓಬಳರಾಜು, ಒಕ್ಕಲಿಗರ ಸಂಘದ ಅಧ್ಯಕ್ಷ ಹನುಮಂತರಾಯಪ್ಪ, ನೌಕರರ ಸಂಘದ ಅಧ್ಯಕ್ಷ ರುದ್ರೇಶ್, ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಘಟಕದ ಅಧ್ಯಕ್ಷ ಕೃಷ್ಣಮೂರ್ತಿ, ವಿವಿಧ ಸಂಘಟನೆಗಳ ಪದಾಧಿಕಾರಿಗಳಾದ ಬಿ.ಜಿ.ಹನುಮಂತರಾಯಪ್ಪ, ನರಸಿಂಹರಾಜು, ಕೋಟೆಕಲ್ಲಯ್ಯ, ರಾಧಮ್ಮ, ವಿವಿಧ ಇಲಾಖೆಗಳ ಅಧಿಕಾರಿಗಳಾದ ರಘು, ನಾಗರಾಜು, ಸುರೇಶ್, ಅನಂತರಾಜು, ಬ್ಲಾಕ್ ಕಾಂಗ್ರೆಸ್ಅಧ್ಯಕ್ಷ ಕೋಡ್ಲಹಳ್ಳಿ ಅಶ್ವತ್ಥನಾರಾಯಣ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊರಟಗೆರೆ</strong>: ಸರ್ಕಾರವು ಶಿಕ್ಷಣ ನೀತಿಯಲ್ಲಿ ಬದಲಾವಣೆ ತಂದಿರುವುದು ಅನೇಕರಲ್ಲಿ ಗೊಂದಲಕ್ಕೆ ಕಾರಣವಾಗಿದೆ ಎಂದು ಶಾಸಕ ಡಾ.ಜಿ.ಪರಮೇಶ್ವರ ಹೇಳಿದರು.</p>.<p>ಪಟ್ಟಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ‘1986ರಿಂದ 2020ರ ವರೆಗೆಕ್ರಮಬದ್ಧವಾದ ಶಿಕ್ಷಣವಿದ್ದು ದೇಶದಲ್ಲಿ ದೊಡ್ಡ ಬದಲಾವಣೆಯಾಗಿದೆ. ಆದರೂಸರ್ಕಾರ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ತಂದಿದೆ’ ಎಂದರು.</p>.<p>ಶಿಕ್ಷಣಕ್ರಾಂತಿ ಕಾರಕ ಶಕ್ತಿಯಾಗಿದ್ದು, ಸಮಾಜವನ್ನು ಬದಲಾಯಿಸುವ ಸಾಮರ್ಥ್ಯಹೊಂದಿದೆ. ಗುರು ಪರಂಪರೆ, ಗುರುಕುಲದಲ್ಲಿ ಶಿಕ್ಷಣ ನೀಡಲಾಗುತ್ತಿತ್ತು. ಆ ಕಾಲದಲ್ಲಿ ಗುರುವಿಗೆ ದೇವರಿಗಿಂತಲೂ ಹೆಚ್ಚಿನ ಸ್ಥಾನವಿತ್ತು. ಬ್ರಿಟಿಷರ ಆಳ್ವಿಕೆಯಲ್ಲಿ ಶೇ 1.5ರಷ್ಟಿದ್ದ ಸಾಕ್ಷರತೆಯ ಪ್ರಮಾಣ ಇಂದು ಶೇ 80ರಷ್ಟಾಗಿದೆ ಎಂದು ತಿಳಿಸಿದರು.</p>.<p>ತಾಲೂಕಿನಲ್ಲಿ ₹ 150 ಕೋಟಿಗೂ ಹೆಚ್ಚು ಅನುದಾನದಲ್ಲಿ 6 ವಸತಿ ಶಾಲೆ ಪ್ರಾರಂಭಿಸಲಾಗಿದೆ. ಸದಾ ಶಿಕ್ಷಕರ ಜೊತೆಗಿದ್ದು, ಅವರ ಯೋಗಕ್ಷೇಮ ನೋಡಿಕೊಳ್ಳುವುದು ನನ್ನ ಕರ್ತವ್ಯ. ಅದನ್ನು ಪ್ರಾಮಾಣಿಕವಾಗಿ ಮಾಡುತ್ತೇನೆ. ಸಿದ್ಧಾರ್ಥವೈದ್ಯಕೀಯ ಆಸ್ಪತ್ರೆಯಲ್ಲಿ ಶೇ 50ರಷ್ಟು ರಿಯಾಯಿತಿಯಲ್ಲಿಚಿಕಿತ್ಸೆಯ ಸೌಲಭ್ಯ ನೀಡಲಾಗುವುದು ಎಂದು ತಿಳಿಸಿದರು.</p>.<p>ತಾ.ಪಂ ಕಾರ್ಯ ನಿರ್ವಹಣಾಧಿಕಾರಿದೊಡ್ಡಸಿದ್ದಪ್ಪ, ಬಿಇಒ ಸುಧಾಕರ್, ಪ.ಪಂ ಅಧ್ಯಕ್ಷೆ ಕಾವ್ಯಶ್ರೀ ರಮೇಶ್, ಸ್ಥಾಯಿ ಸಮಿತಿ ಅಧ್ಯಕ್ಷ ನಟರಾಜು, ಸದಸ್ಯರಾದ ಎ.ಡಿ.ಬಲರಾಮಯ್ಯ, ಕೆ.ಆರ್.ಓಬಳರಾಜು, ಒಕ್ಕಲಿಗರ ಸಂಘದ ಅಧ್ಯಕ್ಷ ಹನುಮಂತರಾಯಪ್ಪ, ನೌಕರರ ಸಂಘದ ಅಧ್ಯಕ್ಷ ರುದ್ರೇಶ್, ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಘಟಕದ ಅಧ್ಯಕ್ಷ ಕೃಷ್ಣಮೂರ್ತಿ, ವಿವಿಧ ಸಂಘಟನೆಗಳ ಪದಾಧಿಕಾರಿಗಳಾದ ಬಿ.ಜಿ.ಹನುಮಂತರಾಯಪ್ಪ, ನರಸಿಂಹರಾಜು, ಕೋಟೆಕಲ್ಲಯ್ಯ, ರಾಧಮ್ಮ, ವಿವಿಧ ಇಲಾಖೆಗಳ ಅಧಿಕಾರಿಗಳಾದ ರಘು, ನಾಗರಾಜು, ಸುರೇಶ್, ಅನಂತರಾಜು, ಬ್ಲಾಕ್ ಕಾಂಗ್ರೆಸ್ಅಧ್ಯಕ್ಷ ಕೋಡ್ಲಹಳ್ಳಿ ಅಶ್ವತ್ಥನಾರಾಯಣ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>