ರಾಜಕಾರಣದ 70 ವರ್ಷದಲ್ಲಿಯೇ ಜಿಲ್ಲೆಯ ದಲಿತ ಸಮಾಜಕ್ಕೆ ಉನ್ನತ ಹುದ್ದೆ ದೊರೆತಿದೆ. ಈ ಹಿಂದಿನ ಹಲವು ಉಪಮುಖ್ಯಮಂತ್ರಿಗಳು ಶಿಷ್ಟಾಚಾರದ ಪ್ರಕಾರವಾಗಿಯೇ ನಡೆದುಕೊಂಡಿದ್ದಾರೆ. ಆದರೆ ಪರಮೇಶ್ವರ ಅವರನ್ನು ಮಾತ್ರ ಈ ವಿಚಾರದಲ್ಲಿ ಗುರಿ ಮಾಡಲಾಗಿದೆ. ಈ ಸಮಾಜಕ್ಕೆ ದೊರೆತಿರುವ ಉನ್ನತ ಹುದ್ದೆಯ ಬಗ್ಗೆ ಎಷ್ಟು ಅಸಹನೆ ಇದೆ ಎನ್ನುವುದನ್ನು ಇದು ಎತ್ತಿ ತೋರುತ್ತದೆ ಎಂದು ತೀಕ್ಷ್ಮವಾಗಿ ನುಡಿದಿದ್ದಾರೆ.