ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದ ಸಮಯದಲ್ಲಿ ಕಂದಾಯ ಗ್ರಾಮಗಳ ನಿರ್ಮಾಣದ ಘೋಷಣೆ ಮಾಡಿದ್ದರು. ಆದರೆ, ಅವರು ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸದೆ ವಂಚಿಸುವ ಕೆಲಸ ಮಾಡಿದ್ದರು. ಆದರೆ, ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಲಂಬಾಣಿ ತಾಂಡಾ, ಗೊಲ್ಲರಹಟ್ಟಿ, ವಡ್ಡರಹಟ್ಟಿ ಸೇರಿದಂತೆ ಹಲವಾರು ಕಡೆ ದಾಖಲೆ ರಹಿತವಾಗಿ ಜನರು ವಾಸಿಸುತ್ತಿರುವುದನ್ನು ಗುರುತಿಸಿ ಹಕ್ಕುಪತ್ರ ನೀಡಲಾಗುತ್ತಿದೆ ಎಂದು ತಿಳಿಸಿದರು.