<p><strong>ಪಾವಗಡ:</strong> ದೇಶದ ಜನರ ಭಾವನೆಯೊಂದಿಗೆ ಚೆಲ್ಲಾಟ ಆಡಿಕೊಂಡು ಅಧಿಕಾರದ ಚುಕ್ಕಾಣಿ ಹಿಡಿದಿರುವ ಬಿಜೆಪಿಯ ಸಾಧನೆ ಶೂನ್ಯ. ಸುಳ್ಳು ಹೇಳುವುದೇ ಅವರ ಸಾಧನೆ ಎಂದು ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಆರೋಪಿಸಿದರು.</p>.<p>ಪಟ್ಟಣದಲ್ಲಿ ಶನಿವಾರ ಬ್ಲಾಕ್ ಕಾಂಗ್ರೆಸ್ ಆಯೋಜಿಸಿದ್ದ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಬಿಜೆಪಿಯವರು ಪದೇ ಪದೇ ಸಂವಿಧಾನ ಬದಲಿಸುವ ಮಾತನಾಡುತ್ತಿದ್ದಾರೆ. ಸಂವಿಧಾನ ಉಳಿಸಿಕೊಳ್ಳಲು, ರಾಷ್ಟ್ರದಲ್ಲಿ ಜಾತ್ಯತೀತ ತತ್ವ ಜೀವಂತವಾಗಿರಲು ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು ಎಂದರು.</p>.<p>ಪ್ರತಿ ತಿಂಗಳು ಬಡ ಜನರ ಮನೆಗೆ ಹಣ ಬರುತ್ತಿದೆ. ಗ್ಯಾರಂಟಿ ಯೋಜನೆಗಳಿಂದ ಬಡ ಜನತೆಯ ಬದುಕು ಹಸನಾಗಿದೆ. ಬಿಜೆಪಿಯವರ ಕೊಡುಗೆ ಏನು? ಎಂದು ಪ್ರಶ್ನಿಸಿದರು.</p>.<p>ಶಾಸಕ ಎಚ್.ವಿ. ವೆಂಕಟೇಶ್ ಮಾತನಾಡಿ, ಸುಳ್ಳು ಹೇಳುವ ಬಗ್ಗೆ ಆರ್ಎಸ್ಎಸ್ ಬಿಜೆಪಿಗೆ ತರಬೇತಿ ನೀಡಿದೆ. ಇದೀಗ ಜೆಡಿಎಸ್ ಅವನತಿಯತ್ತ ಸಾಗಿದೆ. ಚುನಾವಣೆ ಮುಗಿದ ಕೂಡಲೇ ಬಿಜೆಪಿಯೊಂದಿಗೆ ವಿಲೀನವಾಗಲಿದೆ ಎಂದರು.</p>.<p>ಶಾಸಕ ಟಿ ಬಿ ಜಯಚಂದ್ರ, ಇಂಡಿಯಾ ಮೈತ್ರಿ ಕೂಟ ಅಧಿಕಾರಕ್ಕೆ ಬರಲಿದೆ. ಸಮೀಕ್ಷೆಗಳೂ ಸಹ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬರುವುದಾಗಿ ತಿಳಿಸಿವೆ. ಭದ್ರಾ ಮೇಲ್ದಂಡೆ ಕಾಮಗಾರಿ ಮುಗಿದು ನೀರು ಹರಿಯಲು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಬೇಕು ಎಂದರು.</p>.<p>ಮಾಜಿ ಸಚಿವ ಎಚ್.ಆಂಜನೇಯ, ಅಶಕ್ತರು, ಬಡ ಜನತೆ, ರೈತರಿಗಾಗಿ ಬಿಜೆಪಿ ಒಂದೂ ಯೋಜನೆಯನ್ನೂ ಜಾರಿಗೊಳಿಸಿಲ್ಲ. ಬಿಜೆಪಿಗೆ ಮತ ಕೇಳುವ ನೈತಿಕತೆ ಇಲ್ಲ ಎಂದು ದೂರಿದರು.</p>.<p>ಮಾಜಿ ಶಾಸಕ ಸಾಲಿಂಗಯ್ಯ, ನಗರ ಘಟಕದ ಅಧ್ಯಕ್ಷ ಸುದೇಶ್ ಬಾಬು, ಪುರಸಭೆ ಸದಸ್ಯ ಪಿ.ಎಚ್. ರಾಜೇಶ್, ರವಿ, ಮಾಜಿ ಅಧ್ಯಕ್ಷ ಗುರಪ್ಪ, ಶಂಕರರೆಡ್ಡಿ, ಮುಖಂಡ ರಾಮಾಂಜಿನಪ್ಪ, ತಿಪ್ಪೇಸ್ವಾಮಿ , ವಕೀಲ ವೆಂಕಟರಾಮರೆಡ್ಡಿ, ಭಗವಂತಪ್ಪ, ಸಣ್ಣರಾಮರೆಡ್ಡಿ, ನರಸಿಂಹರೆಡ್ಡಿ, ಮುಗದಾಳಬೆಟ್ಟ ನರಸಿಂಹಯ್ಯ, ಶೇಷಾದ್ರಿ, ರಂಗೇಗೌಡ, ಸುಜಿತ್, ಸುಮಾ, ನಿಸಾರ್, ಪಾಪಣ್ಣ, ಮಂಜಣ್ಣ, ಮೈಲಪ್ಪ, ದಿವಾಕರಪ್ಪ ಉಪಸ್ಥಿತರಿದ್ದರು.</p>.<p><strong>ಭಿನ್ನಾಬಿಪ್ರಾಯ ಇತ್ತು </strong></p><p>ಮಾಜಿ ಸಚಿವ ವೆಂಕಟರಮಣಪ್ಪ ಮಾತನಾಡಿ ‘ಅಭ್ಯರ್ಥಿ ಬಿ.ಎನ್. ಚಂದ್ರಪ್ಪ ಅವರು ವಿಧಾನಸಭೆ ಚುನಾವಣೆ ವೇಳೆ ಪಾವಗಡ ಕ್ಷೇತ್ರದ ಅಭ್ಯರ್ಥಿ ಸ್ಥಾನಕ್ಕೆ ಅರ್ಜಿ ಸಲ್ಲಿಸಿದ್ದರು. ತಾಲ್ಲೂಕಿನ ಹತ್ತಾರು ಮಂದಿಯನ್ನು ಕರೆದೊಯ್ದು ಟಿಕೆಟ್ಗಾಗಿ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಬೇಸರ ಇತ್ತು. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನನ್ನನ್ನು ಕರೆಸಿ ಚಂದ್ರಪ್ಪ ಅವರು ಲೋಕಸಭೆ ಚುನಾವಣೆಯಲ್ಲಿ ಗೆಲ್ಲಬೇಕು. ಭಿನ್ನಾಭಿಪ್ರಾಯ ಬಿಟ್ಟು ಕೆಲಸ ಮಾಡಿ ಎಂದಿದ್ದರು’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಾವಗಡ:</strong> ದೇಶದ ಜನರ ಭಾವನೆಯೊಂದಿಗೆ ಚೆಲ್ಲಾಟ ಆಡಿಕೊಂಡು ಅಧಿಕಾರದ ಚುಕ್ಕಾಣಿ ಹಿಡಿದಿರುವ ಬಿಜೆಪಿಯ ಸಾಧನೆ ಶೂನ್ಯ. ಸುಳ್ಳು ಹೇಳುವುದೇ ಅವರ ಸಾಧನೆ ಎಂದು ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಆರೋಪಿಸಿದರು.</p>.<p>ಪಟ್ಟಣದಲ್ಲಿ ಶನಿವಾರ ಬ್ಲಾಕ್ ಕಾಂಗ್ರೆಸ್ ಆಯೋಜಿಸಿದ್ದ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಬಿಜೆಪಿಯವರು ಪದೇ ಪದೇ ಸಂವಿಧಾನ ಬದಲಿಸುವ ಮಾತನಾಡುತ್ತಿದ್ದಾರೆ. ಸಂವಿಧಾನ ಉಳಿಸಿಕೊಳ್ಳಲು, ರಾಷ್ಟ್ರದಲ್ಲಿ ಜಾತ್ಯತೀತ ತತ್ವ ಜೀವಂತವಾಗಿರಲು ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು ಎಂದರು.</p>.<p>ಪ್ರತಿ ತಿಂಗಳು ಬಡ ಜನರ ಮನೆಗೆ ಹಣ ಬರುತ್ತಿದೆ. ಗ್ಯಾರಂಟಿ ಯೋಜನೆಗಳಿಂದ ಬಡ ಜನತೆಯ ಬದುಕು ಹಸನಾಗಿದೆ. ಬಿಜೆಪಿಯವರ ಕೊಡುಗೆ ಏನು? ಎಂದು ಪ್ರಶ್ನಿಸಿದರು.</p>.<p>ಶಾಸಕ ಎಚ್.ವಿ. ವೆಂಕಟೇಶ್ ಮಾತನಾಡಿ, ಸುಳ್ಳು ಹೇಳುವ ಬಗ್ಗೆ ಆರ್ಎಸ್ಎಸ್ ಬಿಜೆಪಿಗೆ ತರಬೇತಿ ನೀಡಿದೆ. ಇದೀಗ ಜೆಡಿಎಸ್ ಅವನತಿಯತ್ತ ಸಾಗಿದೆ. ಚುನಾವಣೆ ಮುಗಿದ ಕೂಡಲೇ ಬಿಜೆಪಿಯೊಂದಿಗೆ ವಿಲೀನವಾಗಲಿದೆ ಎಂದರು.</p>.<p>ಶಾಸಕ ಟಿ ಬಿ ಜಯಚಂದ್ರ, ಇಂಡಿಯಾ ಮೈತ್ರಿ ಕೂಟ ಅಧಿಕಾರಕ್ಕೆ ಬರಲಿದೆ. ಸಮೀಕ್ಷೆಗಳೂ ಸಹ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬರುವುದಾಗಿ ತಿಳಿಸಿವೆ. ಭದ್ರಾ ಮೇಲ್ದಂಡೆ ಕಾಮಗಾರಿ ಮುಗಿದು ನೀರು ಹರಿಯಲು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಬೇಕು ಎಂದರು.</p>.<p>ಮಾಜಿ ಸಚಿವ ಎಚ್.ಆಂಜನೇಯ, ಅಶಕ್ತರು, ಬಡ ಜನತೆ, ರೈತರಿಗಾಗಿ ಬಿಜೆಪಿ ಒಂದೂ ಯೋಜನೆಯನ್ನೂ ಜಾರಿಗೊಳಿಸಿಲ್ಲ. ಬಿಜೆಪಿಗೆ ಮತ ಕೇಳುವ ನೈತಿಕತೆ ಇಲ್ಲ ಎಂದು ದೂರಿದರು.</p>.<p>ಮಾಜಿ ಶಾಸಕ ಸಾಲಿಂಗಯ್ಯ, ನಗರ ಘಟಕದ ಅಧ್ಯಕ್ಷ ಸುದೇಶ್ ಬಾಬು, ಪುರಸಭೆ ಸದಸ್ಯ ಪಿ.ಎಚ್. ರಾಜೇಶ್, ರವಿ, ಮಾಜಿ ಅಧ್ಯಕ್ಷ ಗುರಪ್ಪ, ಶಂಕರರೆಡ್ಡಿ, ಮುಖಂಡ ರಾಮಾಂಜಿನಪ್ಪ, ತಿಪ್ಪೇಸ್ವಾಮಿ , ವಕೀಲ ವೆಂಕಟರಾಮರೆಡ್ಡಿ, ಭಗವಂತಪ್ಪ, ಸಣ್ಣರಾಮರೆಡ್ಡಿ, ನರಸಿಂಹರೆಡ್ಡಿ, ಮುಗದಾಳಬೆಟ್ಟ ನರಸಿಂಹಯ್ಯ, ಶೇಷಾದ್ರಿ, ರಂಗೇಗೌಡ, ಸುಜಿತ್, ಸುಮಾ, ನಿಸಾರ್, ಪಾಪಣ್ಣ, ಮಂಜಣ್ಣ, ಮೈಲಪ್ಪ, ದಿವಾಕರಪ್ಪ ಉಪಸ್ಥಿತರಿದ್ದರು.</p>.<p><strong>ಭಿನ್ನಾಬಿಪ್ರಾಯ ಇತ್ತು </strong></p><p>ಮಾಜಿ ಸಚಿವ ವೆಂಕಟರಮಣಪ್ಪ ಮಾತನಾಡಿ ‘ಅಭ್ಯರ್ಥಿ ಬಿ.ಎನ್. ಚಂದ್ರಪ್ಪ ಅವರು ವಿಧಾನಸಭೆ ಚುನಾವಣೆ ವೇಳೆ ಪಾವಗಡ ಕ್ಷೇತ್ರದ ಅಭ್ಯರ್ಥಿ ಸ್ಥಾನಕ್ಕೆ ಅರ್ಜಿ ಸಲ್ಲಿಸಿದ್ದರು. ತಾಲ್ಲೂಕಿನ ಹತ್ತಾರು ಮಂದಿಯನ್ನು ಕರೆದೊಯ್ದು ಟಿಕೆಟ್ಗಾಗಿ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಬೇಸರ ಇತ್ತು. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನನ್ನನ್ನು ಕರೆಸಿ ಚಂದ್ರಪ್ಪ ಅವರು ಲೋಕಸಭೆ ಚುನಾವಣೆಯಲ್ಲಿ ಗೆಲ್ಲಬೇಕು. ಭಿನ್ನಾಭಿಪ್ರಾಯ ಬಿಟ್ಟು ಕೆಲಸ ಮಾಡಿ ಎಂದಿದ್ದರು’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>