ಕೇಂದ್ರ ಸರ್ಕಾರದ ಸಾಧನೆಗಳು, ಪ್ರಧಾನಿ ನರೇಂದ್ರ ಮೋದಿ ನೀಡಿದ ಕೊಡುಗೆಗಳ ಪಟ್ಟಿಯನ್ನು ಕಾರ್ಯಕರ್ತರ ಮುಂದಿಟ್ಟರು. ಕೇಂದ್ರ, ರಾಜ್ಯ ಸರ್ಕಾರದ ಸಾಧನೆಗಳನ್ನು ಜನರಿಗೆ ಮನದಟ್ಟು ಮಾಡಿಕೊಡಬೇಕು. ಶಕ್ತಿ ಕೇಂದ್ರಗಳಲ್ಲಿರುವ ಪ್ರಮುಖರು ಎಲ್ಲರನ್ನೂ ಒಗ್ಗೂಡುವಂತೆ ಮಾಡಬೇಕು. ಪರಿಶಿಷ್ಟರು, ಅಲ್ಪ ಸಂಖ್ಯಾತರು, ಹಿಂದುಳಿದ ವರ್ಗದ ಜನರ ಜತೆಗೆ ಒಟ್ಟಾಗಿ ಹೋಗಬೇಕು. ಬೂತ್ ಮಟ್ಟದಲ್ಲಿ ಪಕ್ಷ ಬಲಪಡಿಸಿದರೆ ಗೆಲುವು ಕಷ್ಟಕರವಾಗಲಾರದು ಎಂದು ಹೇಳಿದರು.