<p><strong>ತುಮಕೂರು</strong>: ಕಾಂಗ್ರೆಸ್ನ ರಾಜ್ಯ ಉಸ್ತುವಾರಿ ರಣದೀಪ್ಸಿಂಗ್ ಸುರ್ಜೇವಾಲ ‘ನನಗೇನು ತಾಕೀತು ಮಾಡುತ್ತಾರೆ’ ಎಂದು ಅಸಮಾಧಾನ ವ್ಯಕ್ತಪಡಿಸಿದ್ದ ಸಹಕಾರ ಸಚಿವ ಕೆ.ಎನ್.ರಾಜಣ್ಣ ಈಗ ಮತ್ತೊಮ್ಮೆ ಆಕ್ರೋಶ ಹೊರ ಹಾಕಿದ್ದಾರೆ.</p><p>‘ಸುರ್ಜೇವಾಲ ರಾಜ್ಯಕ್ಕೆ ಭೇಟಿನೀಡಿ ಅಭಿಪ್ರಾಯ ಸಂಗ್ರಹಿಸಿರುವುದು ತರವಲ್ಲ. ಅವರು ಬಂದು ನಡೆಸಿದ ಪ್ರಕ್ರಿಯೆ ಬಗ್ಗೆ ನನಗೆ ಸಮಾಧಾನವಿಲ್ಲ’ ಎಂದು ಹೇಳಿದರು.</p><p>ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ನಟರಾಜನ್ ಅವರು ಆಂಧ್ರಪ್ರದೇಶಕ್ಕೆ ಭೇಟಿ ನೀಡಿದ್ದರು. ಅವರು ಅಲ್ಲಿ ಒಂದೇ ದಿನಕ್ಕೆ ವಾಪಸ್ ಹೋಗಿದ್ದಾರೆ. ಆದರೆ ರಾಜ್ಯದಲ್ಲಿ ಏನಾಗಿದೆ ನೋಡಿ’ ಎಂದು ಪ್ರಶ್ನಿಸಿದರು.</p><p>‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪಕ್ಷದ ಹೈಕಮಾಂಡ್, ಇಲ್ಲವೆ ಶಾಸಕರು ಬದಲಾವಣೆ ಮಾಡಬೇಕು. ಶಾಸಕರು ಬದಲಾಯಿಸಲು ತಯಾರಿಲ್ಲ. ಹೈಕಮಾಂಡ್ ಸಹ ಬದಲಾವಣೆ ಮಾಡುವುದಿಲ್ಲ ಅಂದುಕೊಂಡಿದ್ದೇನೆ’ ಎಂದರು.</p>.ಸುರ್ಜೇವಾಲ ನನಗೇನು ತಾಕೀತು ಮಾಡಲು ಸಾಧ್ಯ?: ಸಚಿವ ರಾಜಣ್ಣ.ಸಿದ್ದರಾಮಯ್ಯ ಅವರ 'ನಾನೇ CM' ಹೇಳಿಕೆ ಬೆನ್ನಲ್ಲೇ ಖರ್ಗೆ ನಿವಾಸಕ್ಕೆ ಸಚಿವರ ದಂಡು.<div><div class="bigfact-title">ದೆಹಲಿಗೆ ಹೋಗಲ್ಲ</div><div class="bigfact-description">ಎಐಸಿಸಿ ರಚಿಸಿರುವ ಒಬಿಸಿ ಸಲಹಾ ಮಂಡಳಿ ನಾಯಕತ್ವವನ್ನು ಸಿದ್ದರಾಮಯ್ಯ ಒಪ್ಪಿಕೊಳ್ಳುವುದು ಅನುಮಾನ. ಅವರಿಗೆ ಹಿಂದಿ ಬರುವುದಿಲ್ಲ. ರಾಷ್ಟ್ರ ಮಟ್ಟಕ್ಕೆ ಹೋಗಿ ಏನು ಮಾಡುತ್ತಾರೆ. ದೆಹಲಿಯಲ್ಲಿ ಹಿಂದಿ ಬರದಿದ್ದರೆ ಏನೂ ನಡೆಯುವುದಿಲ್ಲ ಎಂದು ತಿಳಿಸಿದರು.</div></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ಕಾಂಗ್ರೆಸ್ನ ರಾಜ್ಯ ಉಸ್ತುವಾರಿ ರಣದೀಪ್ಸಿಂಗ್ ಸುರ್ಜೇವಾಲ ‘ನನಗೇನು ತಾಕೀತು ಮಾಡುತ್ತಾರೆ’ ಎಂದು ಅಸಮಾಧಾನ ವ್ಯಕ್ತಪಡಿಸಿದ್ದ ಸಹಕಾರ ಸಚಿವ ಕೆ.ಎನ್.ರಾಜಣ್ಣ ಈಗ ಮತ್ತೊಮ್ಮೆ ಆಕ್ರೋಶ ಹೊರ ಹಾಕಿದ್ದಾರೆ.</p><p>‘ಸುರ್ಜೇವಾಲ ರಾಜ್ಯಕ್ಕೆ ಭೇಟಿನೀಡಿ ಅಭಿಪ್ರಾಯ ಸಂಗ್ರಹಿಸಿರುವುದು ತರವಲ್ಲ. ಅವರು ಬಂದು ನಡೆಸಿದ ಪ್ರಕ್ರಿಯೆ ಬಗ್ಗೆ ನನಗೆ ಸಮಾಧಾನವಿಲ್ಲ’ ಎಂದು ಹೇಳಿದರು.</p><p>ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ನಟರಾಜನ್ ಅವರು ಆಂಧ್ರಪ್ರದೇಶಕ್ಕೆ ಭೇಟಿ ನೀಡಿದ್ದರು. ಅವರು ಅಲ್ಲಿ ಒಂದೇ ದಿನಕ್ಕೆ ವಾಪಸ್ ಹೋಗಿದ್ದಾರೆ. ಆದರೆ ರಾಜ್ಯದಲ್ಲಿ ಏನಾಗಿದೆ ನೋಡಿ’ ಎಂದು ಪ್ರಶ್ನಿಸಿದರು.</p><p>‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪಕ್ಷದ ಹೈಕಮಾಂಡ್, ಇಲ್ಲವೆ ಶಾಸಕರು ಬದಲಾವಣೆ ಮಾಡಬೇಕು. ಶಾಸಕರು ಬದಲಾಯಿಸಲು ತಯಾರಿಲ್ಲ. ಹೈಕಮಾಂಡ್ ಸಹ ಬದಲಾವಣೆ ಮಾಡುವುದಿಲ್ಲ ಅಂದುಕೊಂಡಿದ್ದೇನೆ’ ಎಂದರು.</p>.ಸುರ್ಜೇವಾಲ ನನಗೇನು ತಾಕೀತು ಮಾಡಲು ಸಾಧ್ಯ?: ಸಚಿವ ರಾಜಣ್ಣ.ಸಿದ್ದರಾಮಯ್ಯ ಅವರ 'ನಾನೇ CM' ಹೇಳಿಕೆ ಬೆನ್ನಲ್ಲೇ ಖರ್ಗೆ ನಿವಾಸಕ್ಕೆ ಸಚಿವರ ದಂಡು.<div><div class="bigfact-title">ದೆಹಲಿಗೆ ಹೋಗಲ್ಲ</div><div class="bigfact-description">ಎಐಸಿಸಿ ರಚಿಸಿರುವ ಒಬಿಸಿ ಸಲಹಾ ಮಂಡಳಿ ನಾಯಕತ್ವವನ್ನು ಸಿದ್ದರಾಮಯ್ಯ ಒಪ್ಪಿಕೊಳ್ಳುವುದು ಅನುಮಾನ. ಅವರಿಗೆ ಹಿಂದಿ ಬರುವುದಿಲ್ಲ. ರಾಷ್ಟ್ರ ಮಟ್ಟಕ್ಕೆ ಹೋಗಿ ಏನು ಮಾಡುತ್ತಾರೆ. ದೆಹಲಿಯಲ್ಲಿ ಹಿಂದಿ ಬರದಿದ್ದರೆ ಏನೂ ನಡೆಯುವುದಿಲ್ಲ ಎಂದು ತಿಳಿಸಿದರು.</div></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>