ಅಲ್ಪಸಂಖ್ಯಾತರ ವಿಭಾಗದ ಜಿಲ್ಲಾ ಘಟಕದ ಅಧ್ಯಕ್ಷ ಅತೀಕ್ ಅಹ್ಮದ್, ‘ಹಲವು ರಸ್ತೆಗಳು ವಾಹನ ಓಡಾಡಲು ಸಾಧ್ಯವಾಗದಷ್ಟು ಹಾಳಾಗಿವೆ. ಬಡವರು, ಅಲ್ಪಸಂಖ್ಯಾತರು, ಹಿಂದುಳಿದ ವರ್ಗದವರು, ಕೂಲಿ ಕಾರ್ಮಿಕರು ವಾಸ ಮಾಡುತ್ತಿರುವ ಬಡಾವಣೆಗಳಲ್ಲಿನ ರಸ್ತೆ ಅಭಿವೃದ್ಧಿಗೆ ಯಾವುದೇ ಜನಪ್ರತಿನಿಧಿ, ಅಧಿಕಾರಿಗಳು ಮುಂದಾಗುತ್ತಿಲ್ಲ’ ಎಂದು ದೂರಿದರು.