ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಯುಪಿಎ ಸರ್ಕಾರ ದೇಶದಲ್ಲಿ ಹಸಿವು ಮತ್ತು ಬಡತನ ನೀಗಿಸಬೇಕು ಎಂದು ಕೆಲಸ ಮಾಡಿತು. ಆದರೆ ಎನ್ಡಿಎ ಸರ್ಕಾರ ದೇಶದಲ್ಲಿ ಕಾಂಗ್ರೆಸ್ ನಿರ್ಮೂಲನೆ ಮಾಡಬೇಕು ಎನ್ನುವ ದಿಸೆಯಲ್ಲಿ ಅಷ್ಟೇ ಯೋಚಿಸುತ್ತಿದೆ. ಇವರಿಗೆ ಹಸಿವು ನೀಗಿಸುವುದು ಮುಖ್ಯವಲ್ಲ. ಕಾಂಗ್ರೆಸ್ ಮುಕ್ತ ಭಾರತ ನಿರ್ಮಾಣ ಮುಖ್ಯವಾಗಿದೆ. ಇದೂ ಪ್ರಜಾಪ್ರಭುತ್ವ ವಿರೋಧಿ ಧೋರಣೆ ಎಂದು ಟೀಕಿಸಿದರು.