<p><strong>ತುಮಕೂರು</strong>: ಬೆಂಗಳೂರಿನಲ್ಲಿ ಕೊರೊನಾ ಸೋಂಕು ಹೆಚ್ಚಿದರೆ ತುಮಕೂರಿನ ಮೇಲೂ ಪರಿಣಾಮ ಬೀರುತ್ತದೆ. ಇಲ್ಲಿಯೂ ಸೋಂಕು ಹೆಚ್ಚಾಗುತ್ತದೆ ಎಂದು ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್ ಆತಂಕ ವ್ಯಕ್ತಪಡಿಸಿದರು.</p>.<p>ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಸೋಮವಾರ ಮಾತನಾಡಿ, ‘ಬೆಂಗಳೂರಿನಲ್ಲಿ ಕೊರೊನಾ ನಿಯಂತ್ರಣಕ್ಕೆ ಸಚಿವರಾದ ಸುಧಾಕರ್, ಅಶೋಕ್, ಅಶ್ವತ್ಥನಾರಾಯಣ ಅವರನ್ನು ರಾಜ್ಯ ಸರ್ಕಾರ ಆರಂಭದಲ್ಲಿ ನಿಯೋಜಿಸಿತ್ತು. ಆದರೆ ಇವರ ನಡುವೆ ಸಮನ್ವಯವೇ ಇರಲಿಲ್ಲ. ಮತ್ತೆ 8 ಸಚಿವರನ್ನು ನೇಮಿಸಲಾಯಿತು. ಸೋಂಕು ನಿಯಂತ್ರಣ ವಿಚಾರದಲ್ಲಿ ಸಚಿವರ ನಡುವೆ ಇಂದಿಗೂ ಸಮನ್ವಯದ ಕೊರತೆ ಎದ್ದು ಕಾಣುತ್ತದೆ’ ಎಂದು ದೂರಿದರು.</p>.<p>ಕೊರೊನಾ ಸೋಂಕಿನಿಂದ ಸಾವಿರಾರು ಜನರು ಮೃತಪಡುತ್ತಿದ್ದಾರೆ. ಆದರೆ ಬಿಜೆಪಿಯವರಿಗೆ ಇದು ಹಣ ಲೂಟಿ ಮಾಡಲು ಹಬ್ಬವಾಗಿದೆ. ಇಂತಹ ಕಷ್ಟದ ಸಂದರ್ಭದಲ್ಲಿಯೂ ಹಗರಣಗಳು ನಡೆಯುತ್ತಿವೆ ಎಂದು ಆರೋಪಿಸಿದರು.</p>.<p>ಕೊರೊನಾ ನಿಯಂತ್ರಣದ ವಿಚಾರದಲ್ಲಿ ಮಾಧ್ಯಮಗಳಿಗೆ ತೋರಿಸಲು ಮಾತ್ರ ಕಾರ್ಯಕ್ರಮಗಳು ಆಗುತ್ತಿವೆಯೇ ಹೊರತು ನಿಯಂತ್ರಣಕ್ಕೆ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ. ಕೊರೊನಾ ಸೋಂಕಿತರಿಗಷ್ಟೇ ಅಲ್ಲದೆ ಇತರೆ ರೋಗಿಗಳಿಗೂ ಸಾಕಷ್ಟು ಸಮಸ್ಯೆಗಳು ಎದುರಾಗುತ್ತಿವೆ. ಇವುಗಳ ಪರಿಹಾರಕ್ಕೂ ಮುಂದಾಗುತ್ತಿಲ್ಲ ಎಂದು ಹೇಳಿದರು.</p>.<p>ಲಾಕ್ಡೌನ್ ಸಮಯದಲ್ಲಿಯೇ ಖಾಸಗಿ ಆಸ್ಪತ್ರೆಗಳ ಬಳಿ ಜಿಲ್ಲಾ ಉಸ್ತುವಾರಿ ಸಚಿವರು ಮಾತನಾಡಬೇಕಿತ್ತು. ಸೋಂಕು ಹೆಚ್ಚಾದಾಗ ಖಾಸಗಿ ವೈದ್ಯರ ಜೊತೆ ಮಾತುಕತೆ ನಡೆಸಿದರು. ಇದು ಸರ್ಕಾರದ ಬೇಜವಾಬ್ದಾರಿ ತೋರಿಸುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>ನಾವು ದಾಖಲೆಗಳನ್ನು ಇಟ್ಟುಕೊಂಡು ಮಾತನಾಡುತ್ತಿದ್ದೇವೆ. ಈ ಸರ್ಕಾರಕ್ಕೆ ನೈತಿಕತೆ ಇಲ್ಲ. ಸಚಿವ ಜೆ.ಸಿ.ಮಾಧುಸ್ವಾಮಿ ಅವರು ಎಷ್ಟು ಸಭೆಗಳನ್ನು ಮಾಡಿದ್ದಾರೆ? ಎಷ್ಟು ಜಿಲ್ಲೆಗಳಿಗೆ ಭೇಟಿ ಕೊಟ್ಟಿದ್ದಾರೆ ಎಂಬುದನ್ನು ಹೇಳಲಿ ಎಂದು ಸವಾಲು ಹಾಕಿದರು.</p>.<p>ಮಾಜಿ ಸಚಿವ ಟಿಬಿ. ಜಯಚಂದ್ರ, ಶಾಸಕ ಎಚ್.ಎನ್.ಶಿವಶಂಕರ ರೆಡ್ಡಿ, ವಕ್ತಾರ ಮುರಳೀಧರ ಹಾಲಪ್ಪ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ರಾಮಕೃಷ್ಣ, ಮಾಜಿ ಶಾಸಕರಾದ ಷಫಿ ಅಹಮದ್, ರಫೀಕ್ ಅಹಮದ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ಬೆಂಗಳೂರಿನಲ್ಲಿ ಕೊರೊನಾ ಸೋಂಕು ಹೆಚ್ಚಿದರೆ ತುಮಕೂರಿನ ಮೇಲೂ ಪರಿಣಾಮ ಬೀರುತ್ತದೆ. ಇಲ್ಲಿಯೂ ಸೋಂಕು ಹೆಚ್ಚಾಗುತ್ತದೆ ಎಂದು ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್ ಆತಂಕ ವ್ಯಕ್ತಪಡಿಸಿದರು.</p>.<p>ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಸೋಮವಾರ ಮಾತನಾಡಿ, ‘ಬೆಂಗಳೂರಿನಲ್ಲಿ ಕೊರೊನಾ ನಿಯಂತ್ರಣಕ್ಕೆ ಸಚಿವರಾದ ಸುಧಾಕರ್, ಅಶೋಕ್, ಅಶ್ವತ್ಥನಾರಾಯಣ ಅವರನ್ನು ರಾಜ್ಯ ಸರ್ಕಾರ ಆರಂಭದಲ್ಲಿ ನಿಯೋಜಿಸಿತ್ತು. ಆದರೆ ಇವರ ನಡುವೆ ಸಮನ್ವಯವೇ ಇರಲಿಲ್ಲ. ಮತ್ತೆ 8 ಸಚಿವರನ್ನು ನೇಮಿಸಲಾಯಿತು. ಸೋಂಕು ನಿಯಂತ್ರಣ ವಿಚಾರದಲ್ಲಿ ಸಚಿವರ ನಡುವೆ ಇಂದಿಗೂ ಸಮನ್ವಯದ ಕೊರತೆ ಎದ್ದು ಕಾಣುತ್ತದೆ’ ಎಂದು ದೂರಿದರು.</p>.<p>ಕೊರೊನಾ ಸೋಂಕಿನಿಂದ ಸಾವಿರಾರು ಜನರು ಮೃತಪಡುತ್ತಿದ್ದಾರೆ. ಆದರೆ ಬಿಜೆಪಿಯವರಿಗೆ ಇದು ಹಣ ಲೂಟಿ ಮಾಡಲು ಹಬ್ಬವಾಗಿದೆ. ಇಂತಹ ಕಷ್ಟದ ಸಂದರ್ಭದಲ್ಲಿಯೂ ಹಗರಣಗಳು ನಡೆಯುತ್ತಿವೆ ಎಂದು ಆರೋಪಿಸಿದರು.</p>.<p>ಕೊರೊನಾ ನಿಯಂತ್ರಣದ ವಿಚಾರದಲ್ಲಿ ಮಾಧ್ಯಮಗಳಿಗೆ ತೋರಿಸಲು ಮಾತ್ರ ಕಾರ್ಯಕ್ರಮಗಳು ಆಗುತ್ತಿವೆಯೇ ಹೊರತು ನಿಯಂತ್ರಣಕ್ಕೆ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ. ಕೊರೊನಾ ಸೋಂಕಿತರಿಗಷ್ಟೇ ಅಲ್ಲದೆ ಇತರೆ ರೋಗಿಗಳಿಗೂ ಸಾಕಷ್ಟು ಸಮಸ್ಯೆಗಳು ಎದುರಾಗುತ್ತಿವೆ. ಇವುಗಳ ಪರಿಹಾರಕ್ಕೂ ಮುಂದಾಗುತ್ತಿಲ್ಲ ಎಂದು ಹೇಳಿದರು.</p>.<p>ಲಾಕ್ಡೌನ್ ಸಮಯದಲ್ಲಿಯೇ ಖಾಸಗಿ ಆಸ್ಪತ್ರೆಗಳ ಬಳಿ ಜಿಲ್ಲಾ ಉಸ್ತುವಾರಿ ಸಚಿವರು ಮಾತನಾಡಬೇಕಿತ್ತು. ಸೋಂಕು ಹೆಚ್ಚಾದಾಗ ಖಾಸಗಿ ವೈದ್ಯರ ಜೊತೆ ಮಾತುಕತೆ ನಡೆಸಿದರು. ಇದು ಸರ್ಕಾರದ ಬೇಜವಾಬ್ದಾರಿ ತೋರಿಸುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>ನಾವು ದಾಖಲೆಗಳನ್ನು ಇಟ್ಟುಕೊಂಡು ಮಾತನಾಡುತ್ತಿದ್ದೇವೆ. ಈ ಸರ್ಕಾರಕ್ಕೆ ನೈತಿಕತೆ ಇಲ್ಲ. ಸಚಿವ ಜೆ.ಸಿ.ಮಾಧುಸ್ವಾಮಿ ಅವರು ಎಷ್ಟು ಸಭೆಗಳನ್ನು ಮಾಡಿದ್ದಾರೆ? ಎಷ್ಟು ಜಿಲ್ಲೆಗಳಿಗೆ ಭೇಟಿ ಕೊಟ್ಟಿದ್ದಾರೆ ಎಂಬುದನ್ನು ಹೇಳಲಿ ಎಂದು ಸವಾಲು ಹಾಕಿದರು.</p>.<p>ಮಾಜಿ ಸಚಿವ ಟಿಬಿ. ಜಯಚಂದ್ರ, ಶಾಸಕ ಎಚ್.ಎನ್.ಶಿವಶಂಕರ ರೆಡ್ಡಿ, ವಕ್ತಾರ ಮುರಳೀಧರ ಹಾಲಪ್ಪ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ರಾಮಕೃಷ್ಣ, ಮಾಜಿ ಶಾಸಕರಾದ ಷಫಿ ಅಹಮದ್, ರಫೀಕ್ ಅಹಮದ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>