<p><strong>ತುಮಕೂರು</strong>: ನಮಗೆ ಬಡವರು, ರೈತರ ಬಗ್ಗೆ ಕಾಳಜಿ ಇದೆ. ಕಾಂಗ್ರೆಸ್ ನಾಯಕರಂತೆ ಸುಳ್ಳು ಆಶ್ವಾಸನೆ ಕೊಡುತ್ತಾ ಕಾಲಹರಣ ಮಾಡಿಲ್ಲ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದರು.</p>.<p>ತಾಲ್ಲೂಕಿನ ಊರ್ಡಿಗೆರೆಯಲ್ಲಿ ಸೋಮವಾರ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಪರ ಹಮ್ಮಿಕೊಂಡಿದ್ದ ಪ್ರಚಾರ ಸಭೆಯಲ್ಲಿ ಮಾತನಾಡಿದರು.</p>.<p>ಸೋನಿಯಾ ಗಾಂಧಿ ಅವರು ಎಚ್.ಡಿ.ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಿದ್ದರು. ಅದನ್ನು ಇಲ್ಲ ಎನ್ನುವುದಿಲ್ಲ. ಕಳೆದ ಲೋಕಸಭಾ ಚುನಾವಣೆಯಲ್ಲಿ ತುಮಕೂರಿಗೆ ಬರುವ ಉದ್ದೇಶ ಇರಲಿಲ್ಲ. ಕಾಂಗ್ರೆಸ್ನವರು ಕರೆತಂದು ಸೋಲಿಸಿದರು. ರಾಜಕೀಯದಲ್ಲಿ ಯಾರನ್ನೂ ನಂಬುವುದಿಲ್ಲ ಎಂದರು.</p>.<p>ಕಾಂಗ್ರೆಸ್ನ ಗ್ಯಾರಂಟಿಗಳಿಗೆ ಯಾರೂ ಮಾರು ಹೋಗಬೇಡಿ. ಈ ದೇಶ ಆಳುವ ಶಕ್ತಿ ಕೇವಲ ಮೋದಿಗೆ ಮಾತ್ರ ಇದೆ. ಸೋಮಣ್ಣ ಅವರಿಗೆ ಮತ ಚಲಾಯಿಸಿ, ಮೋದಿ ಕೈ ಬಲಪಡಿಸಿ ಎಂದು ಮನವಿ ಮಾಡಿದರು.</p>.<p>ಶಾಸಕ ಬಿ.ಸುರೇಶ್ಗೌಡ, ‘ಸೋಮಣ್ಣ ಕಳೆದ ವಿಧಾನಸಭೆ ಚುನಾವಣೆಯಲ್ಲಿ ₹60 ಕೋಟಿ ಖರ್ಚು ಮಾಡಿ, ನನ್ನ ವಿರುದ್ಧ ಸ್ಪರ್ಧಿಸಿದ್ದರು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿದ್ದಾರೆ. ಅಂದು ಚುನಾವಣಾ ಆಯೋಗ ಇರಲಿಲ್ಲವೇ? ಆಗ ದೂರು ಕೊಡದೆ ಈಗ ಅಪಪ್ರಚಾರ ಮಾಡುತ್ತಿದ್ದಾರೆ’ ಎಂದು ತಿಳಿಸಿದರು.</p>.<p>ಅಭ್ಯರ್ಥಿ ವಿ.ಸೋಮಣ್ಣ, ಭಾರತೀಯರು ಸಂಕಷ್ಟಕ್ಕೆ ಸಿಲುಕಬಾರದು ಎಂಬ ಉದ್ದೇಶದಿಂದ ದೇವೇಗೌಡರು ಪ್ರಧಾನಿ ನರೇಂದ್ರ ಮೋದಿ ಆವರನ್ನು ಬೆಂಬಲಿಸಿದ್ದಾರೆ. ‘ಸೋಮಣ್ಣ ನನ್ನ ಮೇಲೆ ₹60 ಕೋಟಿ ಖರ್ಚು ಮಾಡಿ ಸೋತಿದ್ದಾರೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನೀವು ಮಾಡಿರುವ ಖರ್ಚಿನ ಬಗ್ಗೆ ನನಗೂ ಗೊತ್ತಿದೆ’ ಎಂದು ತಿರುಗೇಟು ನೀಡಿದರು.</p>.<p>ಮಾಜಿ ಸಚಿವೆ ಲೀಲಾದೇವಿ ಆರ್.ಪ್ರಸಾದ್, ಶಾಸಕ ಕೆ.ಗೋಪಾಲಯ್ಯ, ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಸಿ.ಆಂಜಿನಪ್ಪ, ಮುಖಂಡರಾದ ನಿಂಗಪ್ಪ, ನೆ.ಲ.ನರೇಂದ್ರಬಾಬು, ವೈ.ಎ.ನಾರಾಯಣಸ್ವಾಮಿ, ಲಕ್ಷ್ಮಿಶ್, ಅನ್ನದಾನಪ್ಪ, ತಿಪ್ಪೇಸ್ವಾಮಿ, ಹುಚ್ಚಯ್ಯ, ದೇವರಾಜು, ಗೂಳೂರು ಶಿವಕುಮಾರ್, ಲಕ್ಷ್ಮಿನಾರಾಯಣ್, ಯಶೋದಮ್ಮ, ಅನ್ನಪೂರ್ಣ ಇತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ನಮಗೆ ಬಡವರು, ರೈತರ ಬಗ್ಗೆ ಕಾಳಜಿ ಇದೆ. ಕಾಂಗ್ರೆಸ್ ನಾಯಕರಂತೆ ಸುಳ್ಳು ಆಶ್ವಾಸನೆ ಕೊಡುತ್ತಾ ಕಾಲಹರಣ ಮಾಡಿಲ್ಲ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದರು.</p>.<p>ತಾಲ್ಲೂಕಿನ ಊರ್ಡಿಗೆರೆಯಲ್ಲಿ ಸೋಮವಾರ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಪರ ಹಮ್ಮಿಕೊಂಡಿದ್ದ ಪ್ರಚಾರ ಸಭೆಯಲ್ಲಿ ಮಾತನಾಡಿದರು.</p>.<p>ಸೋನಿಯಾ ಗಾಂಧಿ ಅವರು ಎಚ್.ಡಿ.ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಿದ್ದರು. ಅದನ್ನು ಇಲ್ಲ ಎನ್ನುವುದಿಲ್ಲ. ಕಳೆದ ಲೋಕಸಭಾ ಚುನಾವಣೆಯಲ್ಲಿ ತುಮಕೂರಿಗೆ ಬರುವ ಉದ್ದೇಶ ಇರಲಿಲ್ಲ. ಕಾಂಗ್ರೆಸ್ನವರು ಕರೆತಂದು ಸೋಲಿಸಿದರು. ರಾಜಕೀಯದಲ್ಲಿ ಯಾರನ್ನೂ ನಂಬುವುದಿಲ್ಲ ಎಂದರು.</p>.<p>ಕಾಂಗ್ರೆಸ್ನ ಗ್ಯಾರಂಟಿಗಳಿಗೆ ಯಾರೂ ಮಾರು ಹೋಗಬೇಡಿ. ಈ ದೇಶ ಆಳುವ ಶಕ್ತಿ ಕೇವಲ ಮೋದಿಗೆ ಮಾತ್ರ ಇದೆ. ಸೋಮಣ್ಣ ಅವರಿಗೆ ಮತ ಚಲಾಯಿಸಿ, ಮೋದಿ ಕೈ ಬಲಪಡಿಸಿ ಎಂದು ಮನವಿ ಮಾಡಿದರು.</p>.<p>ಶಾಸಕ ಬಿ.ಸುರೇಶ್ಗೌಡ, ‘ಸೋಮಣ್ಣ ಕಳೆದ ವಿಧಾನಸಭೆ ಚುನಾವಣೆಯಲ್ಲಿ ₹60 ಕೋಟಿ ಖರ್ಚು ಮಾಡಿ, ನನ್ನ ವಿರುದ್ಧ ಸ್ಪರ್ಧಿಸಿದ್ದರು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿದ್ದಾರೆ. ಅಂದು ಚುನಾವಣಾ ಆಯೋಗ ಇರಲಿಲ್ಲವೇ? ಆಗ ದೂರು ಕೊಡದೆ ಈಗ ಅಪಪ್ರಚಾರ ಮಾಡುತ್ತಿದ್ದಾರೆ’ ಎಂದು ತಿಳಿಸಿದರು.</p>.<p>ಅಭ್ಯರ್ಥಿ ವಿ.ಸೋಮಣ್ಣ, ಭಾರತೀಯರು ಸಂಕಷ್ಟಕ್ಕೆ ಸಿಲುಕಬಾರದು ಎಂಬ ಉದ್ದೇಶದಿಂದ ದೇವೇಗೌಡರು ಪ್ರಧಾನಿ ನರೇಂದ್ರ ಮೋದಿ ಆವರನ್ನು ಬೆಂಬಲಿಸಿದ್ದಾರೆ. ‘ಸೋಮಣ್ಣ ನನ್ನ ಮೇಲೆ ₹60 ಕೋಟಿ ಖರ್ಚು ಮಾಡಿ ಸೋತಿದ್ದಾರೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನೀವು ಮಾಡಿರುವ ಖರ್ಚಿನ ಬಗ್ಗೆ ನನಗೂ ಗೊತ್ತಿದೆ’ ಎಂದು ತಿರುಗೇಟು ನೀಡಿದರು.</p>.<p>ಮಾಜಿ ಸಚಿವೆ ಲೀಲಾದೇವಿ ಆರ್.ಪ್ರಸಾದ್, ಶಾಸಕ ಕೆ.ಗೋಪಾಲಯ್ಯ, ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಸಿ.ಆಂಜಿನಪ್ಪ, ಮುಖಂಡರಾದ ನಿಂಗಪ್ಪ, ನೆ.ಲ.ನರೇಂದ್ರಬಾಬು, ವೈ.ಎ.ನಾರಾಯಣಸ್ವಾಮಿ, ಲಕ್ಷ್ಮಿಶ್, ಅನ್ನದಾನಪ್ಪ, ತಿಪ್ಪೇಸ್ವಾಮಿ, ಹುಚ್ಚಯ್ಯ, ದೇವರಾಜು, ಗೂಳೂರು ಶಿವಕುಮಾರ್, ಲಕ್ಷ್ಮಿನಾರಾಯಣ್, ಯಶೋದಮ್ಮ, ಅನ್ನಪೂರ್ಣ ಇತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>