<p><strong>ತುಮಕೂರು</strong>: ಆಧುನಿಕ ಮಾಧ್ಯಮಗಳ ಮೂಲಕ ಇಡೀ ಪ್ರಪಂಚದ ಸಂಪರ್ಕ ಸಾಧ್ಯವಾಗಿದೆ ಎಂದು ಲೇಖಕಿ ಬಾ.ಹ.ರಮಾಕುಮಾರಿ ಅಭಿಪ್ರಾಯಪಟ್ಟರು.</p>.<p>ನಗರದಲ್ಲಿ ಶನಿವಾರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಜಿಲ್ಲಾ ನಿವೃತ್ತ ಸರ್ಕಾರಿ ನೌಕರರ ಸಂಘ, ಲೇಖಕಿಯರ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಕಲಾಶ್ರೀ ಅವರು ಬರೆದಿರುವ ‘ಪುಣ್ಯಭೂಮಿ ಭಾರತಿ, ಸುರಮ್ಯಭೂಮಿ ಭಾರತಿ’ ಕೃತಿ ಬಿಡುಗಡೆಮಾಡಿ ಮಾತನಾಡಿದರು.</p>.<p>ಆಧುನಿಕ ಮಾಧ್ಯಮಗಳ ಬೆಳವಣಿಗೆಯಿಂದಾಗಿ ಜಗತ್ತಿನ ಯಾವುದೇ ಮೂಲೆಯಲ್ಲಿ ನಡೆಯುತ್ತಿರುವ ಘಟನೆಗಳನ್ನು ನೋಡಬಹುದಾಗಿದೆ ಎಂದರು.</p>.<p>ಕಲಾಶ್ರೀ ಅವರು ಪ್ರವಾಸ ಕಥನವನ್ನು ಮನಸ್ಸಿಗೆ ಮುದ ನೀಡುವಂತೆ ಬರೆದಿದ್ದಾರೆ. ಈ ಪುಸ್ತಕ ಓದುವಾಗ ಪ್ರವಾಸ ಮಾಡಿದ ಅನುಭವವಾಯಿತು. ದಿನಚರಿಯ ರೂಪದಲ್ಲಿ ವಿವರ ದಾಖಲಿಸಿದ್ದಾರೆ ಎಂದು ಹೇಳಿದರು.</p>.<p>ಲೇಖಕಿಯರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷೆ ಜಿ.ಮಲ್ಲಿಕಾ ಬಸವರಾಜು, ‘ಕಲಾಶ್ರೀ ಅವರ ಪ್ರವಾಸ ಕಥನ ಒಂದೇ ಗುಟುಕಿನಲ್ಲಿ ಓದಿಸಿಕೊಂಡು ಹೋಗುತ್ತದೆ. ಸರಳವಾದ ನಿರೂಪಣೆ ಇದೆ’ ಎಂದು ತಿಳಿಸಿದರು.</p>.<p>ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಸ್.ಸಿದ್ದಲಿಂಗಪ್ಪ, ‘ಪ್ರವಾಸ ಕಥನದಲ್ಲಿ ಕಲೆ, ಸಂಸ್ಕೃತಿ, ಪರಿಸರವನ್ನು ದಾಖಲಿಸಲು ಅವಕಾಶವಿರುತ್ತದೆ’ ಎಂದರು.</p>.<p>ಲೇಖಕಿ ಗೀತಾಲಕ್ಷ್ಮಿ ಕೃತಿ ಪರಿಚಯ ಮಾಡಿದರು. ಲೇಖಕಿ ಕಲಾಶ್ರೀ, ನಿವೃತ್ತ ಪ್ರಾಂಶುಪಾಲ ಪ್ರೊ.ಕೆ.ಚಂದ್ರಣ್ಣ, ನಿವೃತ್ತ ನೌಕರ ಜಿ.ಸಿ.ಷಡಕ್ಷರಾಧ್ಯ, ಸಿ.ಎ.ಇಂದಿರಮ್ಮ, ಪತ್ರಕರ್ತ ಎಸ್.ನಾಗಣ್ಣ, ವಿದ್ವಾನ್ ಎಂ.ಜಿ.ಸಿದ್ದರಾಮಯ್ಯ ಮಾತನಾಡಿದರು. ಮರಿಯಂಬಿ ಸ್ವಾಗತಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ಆಧುನಿಕ ಮಾಧ್ಯಮಗಳ ಮೂಲಕ ಇಡೀ ಪ್ರಪಂಚದ ಸಂಪರ್ಕ ಸಾಧ್ಯವಾಗಿದೆ ಎಂದು ಲೇಖಕಿ ಬಾ.ಹ.ರಮಾಕುಮಾರಿ ಅಭಿಪ್ರಾಯಪಟ್ಟರು.</p>.<p>ನಗರದಲ್ಲಿ ಶನಿವಾರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಜಿಲ್ಲಾ ನಿವೃತ್ತ ಸರ್ಕಾರಿ ನೌಕರರ ಸಂಘ, ಲೇಖಕಿಯರ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಕಲಾಶ್ರೀ ಅವರು ಬರೆದಿರುವ ‘ಪುಣ್ಯಭೂಮಿ ಭಾರತಿ, ಸುರಮ್ಯಭೂಮಿ ಭಾರತಿ’ ಕೃತಿ ಬಿಡುಗಡೆಮಾಡಿ ಮಾತನಾಡಿದರು.</p>.<p>ಆಧುನಿಕ ಮಾಧ್ಯಮಗಳ ಬೆಳವಣಿಗೆಯಿಂದಾಗಿ ಜಗತ್ತಿನ ಯಾವುದೇ ಮೂಲೆಯಲ್ಲಿ ನಡೆಯುತ್ತಿರುವ ಘಟನೆಗಳನ್ನು ನೋಡಬಹುದಾಗಿದೆ ಎಂದರು.</p>.<p>ಕಲಾಶ್ರೀ ಅವರು ಪ್ರವಾಸ ಕಥನವನ್ನು ಮನಸ್ಸಿಗೆ ಮುದ ನೀಡುವಂತೆ ಬರೆದಿದ್ದಾರೆ. ಈ ಪುಸ್ತಕ ಓದುವಾಗ ಪ್ರವಾಸ ಮಾಡಿದ ಅನುಭವವಾಯಿತು. ದಿನಚರಿಯ ರೂಪದಲ್ಲಿ ವಿವರ ದಾಖಲಿಸಿದ್ದಾರೆ ಎಂದು ಹೇಳಿದರು.</p>.<p>ಲೇಖಕಿಯರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷೆ ಜಿ.ಮಲ್ಲಿಕಾ ಬಸವರಾಜು, ‘ಕಲಾಶ್ರೀ ಅವರ ಪ್ರವಾಸ ಕಥನ ಒಂದೇ ಗುಟುಕಿನಲ್ಲಿ ಓದಿಸಿಕೊಂಡು ಹೋಗುತ್ತದೆ. ಸರಳವಾದ ನಿರೂಪಣೆ ಇದೆ’ ಎಂದು ತಿಳಿಸಿದರು.</p>.<p>ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಸ್.ಸಿದ್ದಲಿಂಗಪ್ಪ, ‘ಪ್ರವಾಸ ಕಥನದಲ್ಲಿ ಕಲೆ, ಸಂಸ್ಕೃತಿ, ಪರಿಸರವನ್ನು ದಾಖಲಿಸಲು ಅವಕಾಶವಿರುತ್ತದೆ’ ಎಂದರು.</p>.<p>ಲೇಖಕಿ ಗೀತಾಲಕ್ಷ್ಮಿ ಕೃತಿ ಪರಿಚಯ ಮಾಡಿದರು. ಲೇಖಕಿ ಕಲಾಶ್ರೀ, ನಿವೃತ್ತ ಪ್ರಾಂಶುಪಾಲ ಪ್ರೊ.ಕೆ.ಚಂದ್ರಣ್ಣ, ನಿವೃತ್ತ ನೌಕರ ಜಿ.ಸಿ.ಷಡಕ್ಷರಾಧ್ಯ, ಸಿ.ಎ.ಇಂದಿರಮ್ಮ, ಪತ್ರಕರ್ತ ಎಸ್.ನಾಗಣ್ಣ, ವಿದ್ವಾನ್ ಎಂ.ಜಿ.ಸಿದ್ದರಾಮಯ್ಯ ಮಾತನಾಡಿದರು. ಮರಿಯಂಬಿ ಸ್ವಾಗತಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>