ತಾಲ್ಲೂಕಿನ ಕಸಬಾ ವ್ಯಾಪ್ತಿಯ ಮರುವೇಕೆರೆ ಗ್ರಾಮದ ನಿವಾಸಿ ತುಮುಲ್ ಮಾಜಿ ಅಧ್ಯಕ್ಷ ಬಿ.ನಾಗೇಶ್ ಬಾಬು ಅವರ ಅಣ್ಣನ ಮಗನಾದ ನಾಗರ್ಜುನ ಪಟ್ಟಣದ ಎಪಿಎಂಸಿ ಹಿಂಭಾಗದಲ್ಲಿರುವ ಮನೆಗೆ ಕಾರಿನಲ್ಲಿ ತೆರುಳುತ್ತಿದ್ದಾಗ 4 ಮಂದಿ ಅಪರಿಚಿತ ಯುವಕರು ಕಾರನ್ನು ಹಿಂಬಾಲಿಸಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಲು ಮುಂದಾಗಿದ್ದಾರೆ. ತಕ್ಷಣ ನಾಗಾರ್ಜುನ ಕಾರನ್ನು ವೇಗವಾಗಿ ಓಡಿಸಿಕೊಂಡು ಹೋಗಿ ಪ್ರಾಣಪಾಯದಿಂದ ಪಾರಾಗಿದ್ದಾರೆ.