<p><strong>ತುಮಕೂರು</strong>: ಸಂವಿಧಾನದಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಅಧಿಕಾರ ಹಂಚಿಕೆ ಮಾಡಲಾಗಿದೆ ಎಂದು 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಟಿ.ಪಿ.ರಾಮಲಿಂಗೇಗೌಡ ಅಭಿಪ್ರಾಯಪಟ್ಟರು.</p>.<p>ನಗರದ ಸುಫಿಯಾ ಕಾನೂನು ಕಾಲೇಜಿನಲ್ಲಿ ಬುಧವಾರ ಆಯೋಜಿಸಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಜನರಿಗೆ ಪ್ರಜಾಸತ್ತಾತ್ಮಕ ಹಕ್ಕುಗಳಷ್ಟೇ ಅಲ್ಲ, ಸಾಮಾಜಿಕ, ಆರ್ಥಿಕ ಸಬಲತೆ, ರಾಜಕೀಯ ಸ್ವಾತಂತ್ರ್ಯ ಕಲ್ಪಿಸುವುದು ಸಂವಿಧಾನದ ಮುಖ್ಯ ಆಶಯವಾಗಿದೆ ಎಂದರು.</p>.<p>75 ವರ್ಷಗಳ ಇತಿಹಾಸ ನೋಡಿದಾಗ ಸಂವಿಧಾನ ರಕ್ಷಿಸುವಲ್ಲಿ ಸುಪ್ರೀಂ ಕೋರ್ಟ್, ಹೈಕೋರ್ಟ್ಗಳು ನಿರ್ವಹಿಸಿದ ಪಾತ್ರ ಅಗಾಧವಾದದ್ದು. ಜನರ ಹಿತಾಸಕ್ತಿಗೆ ವಿರುದ್ಧವಾದ, ಸಂವಿಧಾನದ ಆಶಯಗಳಿಗೆ ವ್ಯತಿರಿಕ್ತವಾದ ಅನೇಕ ಕಾನೂನುಗಳನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿದೆ ಎಂದು ಸ್ಮರಿಸಿದರು.</p>.<p>ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶ ಬಿ.ಜಯಂತಕುಮಾರ್, ‘ಇತ್ತೀಚೆಗಿನ ದಿನಗಳಲ್ಲಿ ಶಿಸ್ತು ಕಡಿಮೆಯಾಗುತ್ತಿದ್ದು, ಕಿರಿಯರು ಹಿರಿಯ ವಕೀಲರಿಗೆ ಗೌರವ ಕೊಡುವುದನ್ನು ಕಲಿಯಬೇಕು’ ಎಂದು ಸಲಹೆ ಮಾಡಿದರು.</p>.<p>ಸಂವಿಧಾನದ ಕರಡು ರಚನಾ ಸಮಿತಿ ಸಭೆಯ ಚರ್ಚೆ ಓದುವುದರಿಂದ ಸಂವಿಧಾನದ ಆಶಯದ ಬಗ್ಗೆ ಗೊತ್ತಾಗಲಿದೆ. ವಿದ್ಯಾರ್ಥಿಗಳು ಶಿಸ್ತು ರೂಢಿಸಿಕೊಳ್ಳಬೇಕು. ವಿದ್ಯಾರ್ಥಿ ದೆಸೆಯಿಂದಲೇ ಕೋರ್ಟ್ಗೆ ಬರುವುದರಿಂದ ನ್ಯಾಯಾಲಯಗಳ ಕಲಾಪದ ಬಗ್ಗೆ ತಿಳಿವಳಿಕೆ ಬರಲಿದೆ. ಮುಂದೆ ವಕೀಲಿ ವೃತ್ತಿಯ ಅಭ್ಯಾಸಕ್ಕೆ ಸಹಕಾರಿಯಾಗಲಿದೆ ಎಂದು ಹೇಳಿದರು.</p>.<p>ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸಾ, ಪ್ರಾಂಶುಪಾಲ ರಮೇಶ್, ಪ್ರಾಧ್ಯಾಪಕರಾದ ಓಬಣ್ಣ, ಮಮತಾ ಇತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ಸಂವಿಧಾನದಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಅಧಿಕಾರ ಹಂಚಿಕೆ ಮಾಡಲಾಗಿದೆ ಎಂದು 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಟಿ.ಪಿ.ರಾಮಲಿಂಗೇಗೌಡ ಅಭಿಪ್ರಾಯಪಟ್ಟರು.</p>.<p>ನಗರದ ಸುಫಿಯಾ ಕಾನೂನು ಕಾಲೇಜಿನಲ್ಲಿ ಬುಧವಾರ ಆಯೋಜಿಸಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಜನರಿಗೆ ಪ್ರಜಾಸತ್ತಾತ್ಮಕ ಹಕ್ಕುಗಳಷ್ಟೇ ಅಲ್ಲ, ಸಾಮಾಜಿಕ, ಆರ್ಥಿಕ ಸಬಲತೆ, ರಾಜಕೀಯ ಸ್ವಾತಂತ್ರ್ಯ ಕಲ್ಪಿಸುವುದು ಸಂವಿಧಾನದ ಮುಖ್ಯ ಆಶಯವಾಗಿದೆ ಎಂದರು.</p>.<p>75 ವರ್ಷಗಳ ಇತಿಹಾಸ ನೋಡಿದಾಗ ಸಂವಿಧಾನ ರಕ್ಷಿಸುವಲ್ಲಿ ಸುಪ್ರೀಂ ಕೋರ್ಟ್, ಹೈಕೋರ್ಟ್ಗಳು ನಿರ್ವಹಿಸಿದ ಪಾತ್ರ ಅಗಾಧವಾದದ್ದು. ಜನರ ಹಿತಾಸಕ್ತಿಗೆ ವಿರುದ್ಧವಾದ, ಸಂವಿಧಾನದ ಆಶಯಗಳಿಗೆ ವ್ಯತಿರಿಕ್ತವಾದ ಅನೇಕ ಕಾನೂನುಗಳನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿದೆ ಎಂದು ಸ್ಮರಿಸಿದರು.</p>.<p>ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶ ಬಿ.ಜಯಂತಕುಮಾರ್, ‘ಇತ್ತೀಚೆಗಿನ ದಿನಗಳಲ್ಲಿ ಶಿಸ್ತು ಕಡಿಮೆಯಾಗುತ್ತಿದ್ದು, ಕಿರಿಯರು ಹಿರಿಯ ವಕೀಲರಿಗೆ ಗೌರವ ಕೊಡುವುದನ್ನು ಕಲಿಯಬೇಕು’ ಎಂದು ಸಲಹೆ ಮಾಡಿದರು.</p>.<p>ಸಂವಿಧಾನದ ಕರಡು ರಚನಾ ಸಮಿತಿ ಸಭೆಯ ಚರ್ಚೆ ಓದುವುದರಿಂದ ಸಂವಿಧಾನದ ಆಶಯದ ಬಗ್ಗೆ ಗೊತ್ತಾಗಲಿದೆ. ವಿದ್ಯಾರ್ಥಿಗಳು ಶಿಸ್ತು ರೂಢಿಸಿಕೊಳ್ಳಬೇಕು. ವಿದ್ಯಾರ್ಥಿ ದೆಸೆಯಿಂದಲೇ ಕೋರ್ಟ್ಗೆ ಬರುವುದರಿಂದ ನ್ಯಾಯಾಲಯಗಳ ಕಲಾಪದ ಬಗ್ಗೆ ತಿಳಿವಳಿಕೆ ಬರಲಿದೆ. ಮುಂದೆ ವಕೀಲಿ ವೃತ್ತಿಯ ಅಭ್ಯಾಸಕ್ಕೆ ಸಹಕಾರಿಯಾಗಲಿದೆ ಎಂದು ಹೇಳಿದರು.</p>.<p>ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸಾ, ಪ್ರಾಂಶುಪಾಲ ರಮೇಶ್, ಪ್ರಾಧ್ಯಾಪಕರಾದ ಓಬಣ್ಣ, ಮಮತಾ ಇತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>