<p><strong>ಮಧುಗಿರಿ:</strong> ಡಾ.ಬಿ.ಆರ್.ಅಂಬೇಡ್ಕರ್ ರಚಿಸಿದ ಸಂವಿಧಾನ ಸಾಮಾನ್ಯ ಜನರ ಕೈಗೆ ಆಡಳಿತ ಕೊಟ್ಟಿದೆ ಎಂದು ಲೇಖಕ ಕೆ.ಪಿ.ನಟರಾಜ್ ಹೇಳಿದರು.</p>.<p>ತಾಲ್ಲೂಕಿನ ದೊಡ್ಡೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಅಚಲ ಕಲ್ಚರಲ್ ಫೌಂಡೇಷನ್ ಆಶ್ರಯದಲ್ಲಿ ಆಯೋಜಿಸಿದ್ದ ಅಂಬೇಡ್ಕರ್ ಪರಿನಿರ್ವಾಣ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ಶಾಲಾ ಮಕ್ಕಳು ಪಠ್ಯಪುಸ್ತಕದ ಜತೆಗೆ ದಿನಪತ್ರಿಕೆ ಓದಬೇಕು. ಇದರಿಂದ ನಮ್ಮ ಜ್ಞಾನ ವಿಸ್ತರಿಸುತ್ತದೆ. ‘ಪ್ರಜಾವಾಣಿ’ ಪತ್ರಿಕೆ ಮಕ್ಕಳ ಶೈಕ್ಷಣಿಕ ಮಾರ್ಗದರ್ಶಿಯಂತೆ ಕೆಲಸ ಮಾಡುತ್ತದೆ ಎಂದರು.</p>.<p>ಉಪನ್ಯಾಸಕ ನಾಗರಾಜು ಮಾವುಕೆರೆ ಮಕ್ಕಳಿಗೆ ‘ಪ್ರಜಾವಾಣಿ’ ಪತ್ರಿಕೆ ವಿತರಿಸಿ ಮಾತನಾಡಿ, ‘ತರಗತಿಯಲ್ಲಿ ಇಂಗ್ಲಿಷ್ ಬೋಧಿಸಿದರೂ ಪ್ರತಿ ದಿನ ತಪ್ಪದೆ ‘ಪ್ರಜಾವಾಣಿ’ ಓದುತ್ತೇನೆ. ಸುದ್ದಿಯಲ್ಲಿ ವಸ್ತು ನಿಷ್ಠತೆ, ಭಾಷಾ ಸ್ಪಷ್ಟತೆ ಕಾರಣಕ್ಕೆ ಪತ್ರಿಕೆ ಇಷ್ಟವಾಗುತ್ತದೆ’ ಎಂದು ತಿಳಿಸಿದರು.</p>.<p>ಶಾಲೆಯ ಮುಖ್ಯ ಶಿಕ್ಷಕ ನರಸಪ್ಪ, ‘ಶಿಕ್ಷಣ, ಸಂಘಟನೆ, ಹೋರಾಟ ಅಂಬೇಡ್ಕರ್ ಸಮಾಜಕ್ಕೆ ನೀಡಿದ ಕೊಡುಗೆಗಳು’ ಎಂದರು.</p>.<p>ಶಿಕ್ಷಕ ರಘು ಗಂಕಾರನಹಳ್ಳಿ, ‘ದಿನಪತ್ರಿಕೆಗಳಿಂದ ಮಕ್ಕಳಲ್ಲಿ ಪಠ್ಯೇತರ ಓದು ಆರಂಭವಾಗುತ್ತದೆ. ಮಕ್ಕಳಿಗೆ ಭಾಷಾ ಕಲಿಕೆಯ ದೀವಿಗೆಯಾಗಿವೆ. ಇದರಲ್ಲಿ ‘ಪ್ರಜಾವಾಣಿ’ ಮುಂಚೂಣಿಯಲ್ಲಿದೆ’ ಎಂದು ಅಭಿಪ್ರಾಯಪಟ್ಟರು.</p>.<p>ಶಿಕ್ಷಕರಾದ ಲಕ್ಷ್ಮಿಕಾಂತಯ್ಯ, ಉಮಾದೇವಿ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಧುಗಿರಿ:</strong> ಡಾ.ಬಿ.ಆರ್.ಅಂಬೇಡ್ಕರ್ ರಚಿಸಿದ ಸಂವಿಧಾನ ಸಾಮಾನ್ಯ ಜನರ ಕೈಗೆ ಆಡಳಿತ ಕೊಟ್ಟಿದೆ ಎಂದು ಲೇಖಕ ಕೆ.ಪಿ.ನಟರಾಜ್ ಹೇಳಿದರು.</p>.<p>ತಾಲ್ಲೂಕಿನ ದೊಡ್ಡೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಅಚಲ ಕಲ್ಚರಲ್ ಫೌಂಡೇಷನ್ ಆಶ್ರಯದಲ್ಲಿ ಆಯೋಜಿಸಿದ್ದ ಅಂಬೇಡ್ಕರ್ ಪರಿನಿರ್ವಾಣ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ಶಾಲಾ ಮಕ್ಕಳು ಪಠ್ಯಪುಸ್ತಕದ ಜತೆಗೆ ದಿನಪತ್ರಿಕೆ ಓದಬೇಕು. ಇದರಿಂದ ನಮ್ಮ ಜ್ಞಾನ ವಿಸ್ತರಿಸುತ್ತದೆ. ‘ಪ್ರಜಾವಾಣಿ’ ಪತ್ರಿಕೆ ಮಕ್ಕಳ ಶೈಕ್ಷಣಿಕ ಮಾರ್ಗದರ್ಶಿಯಂತೆ ಕೆಲಸ ಮಾಡುತ್ತದೆ ಎಂದರು.</p>.<p>ಉಪನ್ಯಾಸಕ ನಾಗರಾಜು ಮಾವುಕೆರೆ ಮಕ್ಕಳಿಗೆ ‘ಪ್ರಜಾವಾಣಿ’ ಪತ್ರಿಕೆ ವಿತರಿಸಿ ಮಾತನಾಡಿ, ‘ತರಗತಿಯಲ್ಲಿ ಇಂಗ್ಲಿಷ್ ಬೋಧಿಸಿದರೂ ಪ್ರತಿ ದಿನ ತಪ್ಪದೆ ‘ಪ್ರಜಾವಾಣಿ’ ಓದುತ್ತೇನೆ. ಸುದ್ದಿಯಲ್ಲಿ ವಸ್ತು ನಿಷ್ಠತೆ, ಭಾಷಾ ಸ್ಪಷ್ಟತೆ ಕಾರಣಕ್ಕೆ ಪತ್ರಿಕೆ ಇಷ್ಟವಾಗುತ್ತದೆ’ ಎಂದು ತಿಳಿಸಿದರು.</p>.<p>ಶಾಲೆಯ ಮುಖ್ಯ ಶಿಕ್ಷಕ ನರಸಪ್ಪ, ‘ಶಿಕ್ಷಣ, ಸಂಘಟನೆ, ಹೋರಾಟ ಅಂಬೇಡ್ಕರ್ ಸಮಾಜಕ್ಕೆ ನೀಡಿದ ಕೊಡುಗೆಗಳು’ ಎಂದರು.</p>.<p>ಶಿಕ್ಷಕ ರಘು ಗಂಕಾರನಹಳ್ಳಿ, ‘ದಿನಪತ್ರಿಕೆಗಳಿಂದ ಮಕ್ಕಳಲ್ಲಿ ಪಠ್ಯೇತರ ಓದು ಆರಂಭವಾಗುತ್ತದೆ. ಮಕ್ಕಳಿಗೆ ಭಾಷಾ ಕಲಿಕೆಯ ದೀವಿಗೆಯಾಗಿವೆ. ಇದರಲ್ಲಿ ‘ಪ್ರಜಾವಾಣಿ’ ಮುಂಚೂಣಿಯಲ್ಲಿದೆ’ ಎಂದು ಅಭಿಪ್ರಾಯಪಟ್ಟರು.</p>.<p>ಶಿಕ್ಷಕರಾದ ಲಕ್ಷ್ಮಿಕಾಂತಯ್ಯ, ಉಮಾದೇವಿ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>